ತಾಲೂಕಿನ ಮೇಲಿನ ಬೆಸಿಗೆ ಹಾಗೂ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೋಮವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಗ್ರಾಮಸ್ಥರ ಕೃಷಿ ಜಮೀನಿಗೆ ಹಾನಿಯಾಗಿದೆ.
ಹೊಸನಗರ: ತಾಲೂಕಿನ ಮೇಲಿನ ಬೆಸಿಗೆ ಹಾಗೂ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೋಮವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಗ್ರಾಮಸ್ಥರ ಕೃಷಿ ಜಮೀನಿಗೆ ಹಾನಿಯಾಗಿದೆ.
ವಸವೆ ಗ್ರಾಮದ ರಾಜು ಕುಂಬಾರ ಎಂಬುವವರ ಮನೆಯ ಚಾವಣಿಗೆ ಹಾನಿ ಉಂಟಾಗಿದೆ. ಇದೇ ಗ್ರಾಮದ ಬಿಂದು ಎಂಬುವವರ ಕೃಷಿ ಜಮೀನಿಗೆ ಬೆಂಕಿ ತಗುಲಿದ್ದು, ತೆಂಗಿನ ಮರಗಳು ಸುಟ್ಟುಹೋಗಿವೆ. ಬೆಂಕಿಯ ತೀವ್ರತೆಗೆ ಸಮೀಪದ ಮಲ್ಲಿಕಾರ್ಜುನ ಗೌಡ ಎಂಬುವವರ ಅಡಕೆ ತೋಟಕ್ಕೂ ಸ್ವಲ್ಪ ಪ್ರಮಾಣದ ಹಾನಿ ಸಂಭವಿಸಿದೆ.
ಒಟ್ಟಾರೆ ಅರಣ್ಯ ಹಾಗು ಕೃಷಿ ಜಮೀನು ಸೇರಿದಂತೆ ಸುಮಾರು 50 ಎಕರೆ ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು. ತಹಸೀಲ್ದಾರ್ ಚಂದ್ರಶೇಖರ ನಾಯ್ಕ್, ತಾ.ಪಂ. ಇಒ ಡಾ.ಎಂ.ಎಸ್.ರಾಮಚಂದ್ರಭಟ್, ಪ್ರಮುಖರಾದ ಹಾಲಗದ್ದೆ ಚಂದ್ರು, ಮೋಹನ ಮಂಡಾನಿ ಮತ್ತಿತರರು ಭೇಟಿ ನೀಡಿದ್ದರು.
ಬೆಂಕಿ ಅವಘಡ: ಅರಣ್ಯ ಭೂಮಿ, ಕೃಷಿ ಜಮೀನಿಗೆ ಹಾನಿ
ನಿಮ್ಮ ಬೆಂಬಲ ಸದಾ ಇರಲಿ
ನಮ್ಮ ಪತ್ರಿಕೆಯ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಭಾರತದ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಅಲ್ಪ ಕೊಡುಗೆಯೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ಕೊಡುಗೆ ನೀಡಿ (Contribute now)
Share your comments