Government Schemes

ಗಂಗಾ ಕಲ್ಯಾಣ ಯೋಜನೆಯಡಿ ನೀರಾವರಿ ಸೌಲಭ್ಯಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆಗೆ ಮಾರ್ಚ್‌ 2 ಕೊನೆ ದಿನ?

18 January, 2023 3:51 PM IST By: Kalmesh T
Ganga Kalyan Yojana: Online Application Invitation for Irrigation Facility, Who is Eligible?

ಗಂಗಾ ಕಲ್ಯಾಣ ಯೋಜನೆಯಡಿ ನೀರಾವರಿ ಸೌಲಭ್ಯಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ ಮಾಡಲಾಗಿದೆ ಇಲ್ಲಿದೆ ಈ ಕುರಿತಾದ ಮಾಹಿತಿ

ಜ.24ರಂದು ಉದ್ಘಾಟನೆಗೊಳ್ಳಲಿದೆ ದೇಶದ ಮೊದಲ ಎಫ್‌ಪಿಒ ಕಾಲ್‌ ಸೆಂಟರ್‌! ಏನಿದರ ವಿಶೇಷತೆ ಗೊತ್ತೆ? 

ಧಾರವಾಡ: ಕರ್ನಾಟಕ ಉಪ್ಪಾರ ಅಭಿವೃಧ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಗಂಗಾ ಕಲ್ಯಾಣ ನೀರಾವರಿ ಯೋಜನೆಯನ್ನು ಉಪ್ಪಾರ ಮತ್ತು ಇದರ ಉಪಜಾತಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ.

ಫಲಾಪೇಕ್ಷಿಗಳು ಮಾರ್ಚ್ 2 ರೊಳಗಾಗಿ ಸೇವಾ ಸಿಂಧು ಪೋರ್ಟೆಲ್ ಮುಖಂತರ ಗ್ರಾಮ್ ಒನ್. ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಉಪ್ಪಾರ ಮತ್ತು ಇದರ ಉಪಜಾತಿಯವರು ಸಮಾಜದ ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು.

"ರೈತ ಶಕ್ತಿ ಯೋಜನೆ" ಗೆ ಈ ತಿಂಗಳಾಂತ್ಯಕ್ಕೆ ಸಿಎಂ ಚಾಲನೆ‌: ಡಿ.ಬಿ.ಟಿ ಮೂಲಕ ರೈತರಿಗೆ ಡೀಸೆಲ್ ಸಹಾಯಧನ!

ಘಟಕ ವೆಚ್ಚವು 2.50ಲಕ್ಷ ರೂಪಾಯಿಗಳಾಗಿರುತ್ತದೆ. ಇದರಲ್ಲಿ ರೂ2.00ಲಕ್ಷಗಳ ಸಹಾಯಧನ ಮತ್ತು ಹೆಚ್ಚುವರಿಯಾಗಿ ಅಗತ್ಯ ವಿದ್ದಲ್ಲಿ ರೂ.50,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ 3 ವರ್ಷಗಳ ಮರುಪಾವತಿ ಅವಧಿಯೊಂದಿಗೆ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಯನ್ನು ಕರ್ನಾಟಕ ಉಪ್ಪಾರ ಅಭಿವೃಧ್ಧಿ ನಿಗಮ ನಿಯಮಿತ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ, ನಿಗಮದ ವೆಬ್‍ಸೈಟ್ http://upparadevelopment.karnataka.gov.in ರಲ್ಲಿ ಪಡೆಯಬಹುದು.

ನಿಗಮದ ಸಹಾಯವಾಣಿ ಸಂಖ್ಯೆ: 7026288888 ಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5-30 ರವರೆಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ! ಮಹತ್ವದ ಯೋಜನೆಗಳಿಗೆ ಚಾಲನೆ

ಈ ಸೌಲಭ್ಯ ಪಡೆಯಲು ಅರ್ಜಿದಾರರು ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕು.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಜಾತಿ ಸಮುದಾಯಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದು ಹಾಲಿ ಜಮೀನುಗಳು ಋಷ್ಠಿಯಾಗಿದ್ದು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು.

  • ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
  • ಅರ್ಜಿದಾರರ ವಯಸ್ಸು 18 ರಿಂದ 10 ವರ್ಷದ ಒಳಗಿರಬೇಕು.
  • ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/- ಹಾಗೂ ಪಟ್ಟಣ ಪದೇಶದವರಿಗೆ ರೂ.1,20,000/-ಗಳ ಒಳಗಿರಬೇಕು.
  • ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 12 ಎಕರೆ ಜಮೀನು ಹೊಂದಿರಬೇಕು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 01 ಎಕರೆ ಜಮೀನು ಹೊಂದಿರಬೇಕು.

ವೈಯಕ್ತಿಕ ಕೊಳವೆ ಬಾವಿ ಯೋಜನೆಯಲ್ಲಿ ಘಟಕ ವೆಚ್ಚ ರೂ.2.50 ಲಕ್ಷಗಳು, ಇದರಲ್ಲಿ ರೂ.2.00ಲಕ್ಷ ಸಹಾಯಧನ ಹಾಗೂ ರೂ.50,000/- ನಿಗಮದಿಂದ ಶೇ.4ರ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚ ರೂ.4.00ಲಕ್ಷಗಳು ಇದರಲ್ಲಿ ರೂ.3.50ಲಕ್ಷ ಸಹಾಯಧನ ಹಾಗೂ ರೂ.50,000/- ನಿಗಮದಿಂದ ಶೇ.4ರ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.