News

ರಾಜ್ಯದಲ್ಲಿ ಸೋಂಕು ಕೊಂಚ ಇಳಿಕೆ-31531 ಮಂದಿಗೆ ಸೋಂಕು:403 ಜನರ ಸಾವು

16 May, 2021 9:54 PM IST By:

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಹೊಸ ಕೋವಿಡ್ ಪ್ರಕರಣಗಳಲ್ಲಿ ಇಳಿಮುಖವಾಗುತ್ತಿದೆ. ಭಾನುವಾರ ಸಂಜೆ ಆರೋಗ್ಯ ಇಲಾಖೆ ನೀಡಿರುವ ವರದಿ ಪ್ರಕಾರ, ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 31,531 ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನ 403 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 21,837ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರದಲ್ಲಿ ಇಂದು 141 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 9483 ಕ್ಕೆ ಏರಿಕೆಯಾಗಿದೆ.
ನಗರದಲ್ಲಿ ಇಂದು 8344 ಮಂದಿಗೆ ಹೊಸ ಸೋಂಕು ತಗುಲಿದ್ದು, ಒಟ್ಟು 13162 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ 1581457 ಮಂದಿ ಮನೆಗೆ ತೆರಳಿದ್ದಾರೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1051058ಕ್ಕೆ ಹೆಚ್ಚಳ ಕಂಡಿದೆ.
ಅದೇರೀತಿ ರಾಜ್ಯದಲ್ಲಿ 36475 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ‌.ಹೀಗಾಗಿ ಸೋಂಕಿತರಿಗಿಂತ ಬಿಡುಗಡೆ ಯಾಗುತ್ತಿರುವ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ರಾಜ್ಯದಲ್ಲಿ ಒಟ್ಟು 600147 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಸಂಖ್ಯೆ 2003462ಕ್ಕೆ ಏರಿಕೆಯಾಗಿದೆ.
ಜಿಲ್ಲೆಗಳಲ್ಲಿ ಇಂದು ದಾಖಲಾಗಿರುವ ಪ್ರಕರಣಗಳು: ಬಾಗಲಕೋಟೆ 431, ಬಳ್ಳಾರಿ 1729, ಬೆಳಗಾವಿ 1762 ಬೆಂಗಳೂರು ಗ್ರಾಮಾಂತರ 1082, ಬೆಂಗಳೂರು ನಗರ 8344, ಬೀದರ್ 129, ಚಾಮರಾಜನಗರ 440, ಚಿಕ್ಕಬಳ್ಳಾಪುರ 558, ಚಿಕ್ಕಮಗಳೂರು 963, ಚಿತ್ರದುರ್ಗ 640, ದಕ್ಷಿಣ ಕನ್ನಡ 957, ದಾವಣಗೆರೆ 1155, ಧಾರವಾಡ 937, ಗದಗ ,453, ಹಾಸನ 1182, ಹಾವೇರಿ 184, ಕಲಬುರಗಿ 645, ಕೊಡಗು 191, ಕೋಲಾರ 569, ಕೊಪ್ಪಳ 617, ಮಂಡ್ಯ 709, ಮೈಸೂರು 1811, ರಾಯಚೂರು 464, ರಾಮನಗರ 403, ಶಿವಮೊಗ್ಗ 643, ತುಮಕೂರು 2138, ಉಡುಪಿ 745, ಉತ್ತರ ಕನ್ನಡ 1087, ವಿಜಯಪುರ 330 ಮತ್ತು ಯಾದಗಿರಿಯಲ್ಲಿ 230 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ.

ಬೀದರ್‌ನಲ್ಲಿ 129 ಜನರಿಗೆ ಸೋಂಕು ತಗುಲಿದ್ದು, ಇಂದು ಅತಿ ಕಡಿಮೆ ಸೋಂಕಿತರು ದಾಖಲಾದ ಜಿಲ್ಲೆಯಾಗಿದೆ. ಕೊಡಗಿನಲ್ಲಿ 191, ಹಾವೇರಿಯಲ್ಲಿ 184, ಯಾದಗಿರಿಯಲ್ಲಿ 233, ವಿಜಯಪುರದಲ್ಲಿ 330 ಸೋಂಕಿತರು ಪತ್ತೆಯಾಗಿದ್ದಾರೆ.