1. ಸುದ್ದಿಗಳು

ರಾಜ್ಯದಾದ್ಯಂತ 438 ನಮ್ಮ ಕ್ಲಿನಿಕ್‌: ಎಲ್ಲರಿಗೂ ಸಿಗಲಿದೆ ಉಚಿತ ಆರೋಗ್ಯ ಸೇವೆ!

Hitesh
Hitesh
438 our clinic across the state: everyone will get free healthcare!

ರಾಜ್ಯದಾದ್ಯಂತ 438 ನಮ್ಮ ಕ್ಲಿನಿಕ್‌ಗಳನ್ನು ಪರಿಚಯಿಸಲಾಗುತ್ತಿದ್ದು, ಆರೋಗ್ಯ, ಶಿಕ್ಷಣ ಸೇರಿದಂತೆ ಮೂಲಸೌಕರ್ಯ ಕ್ಷೇತ್ರಗಳಿಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   

ಹವಾಯಿ ಚಪ್ಪಲಿ ಧರಿಸಿದ ಸಾಮಾನ್ಯರು ವಿಮಾನದಲ್ಲಿ ಪ್ರಯಾಣಿಸಲು ಶ್ರಮ: ಮೋದಿ!

ರಾಜ್ಯದಲ್ಲಿ ಶಿಕ್ಷಣಕ್ಕೆ ನಮ್ಮ ಸರ್ಕಾರವು ಒತ್ತು ನೀಡುತ್ತಿದೆ. ಅಲ್ಲದೇ ವಿದೇಶಿ ಬಂಡವಾಳ, ಆವಿಷ್ಕಾರದಲ್ಲಿ ರಾಜ್ಯ ಮುಂದಿದೆ.

ಆರೋಗ್ಯ, ಶಿಕ್ಷಣ, ಪೌಷ್ಟಿಕ ಆಹಾರ, ಬಡತನನಿರ್ಮೂಲನೆಯಲ್ಲಿ ಅಲ್ಲಲ್ಲಿ ಅಸಮಾನತೆಯನ್ನು ಕಂಡುಬರುತ್ತಿದ್ದ ಕಾರಣ, ಹಲವು ಜನಪರ ಯೋಜನೆಗಳನ್ನು ಸರ್ಕಾರ ಹಮ್ಮಿಕೊಂಡಿದೆ.

PM Kisan ಪಿ.ಎಂ ಕಿಸಾನ್‌ 13ನೇ ಕಂತು: 16,000 ಕೋಟಿ ರೂ. ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ರೈತರ, ರೈತ ಕೂಲಿಕಾರ್ಮಿಕರ, ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ನೀಡಲಾಗುತ್ತಿದೆ. ಪಿಯುಸಿ ಮತ್ತು  ಪದವಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಸುಮಾರು 8 ಲಕ್ಷ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ. 100 ಪಿಎಚ್‌ಸಿಗಳನ್ನು ಸಮುದಾಯ ಆರೋಗ್ಯಕೇಂದ್ರಗಳಿಗೆ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದರು.

PM Kisan ಇಂದು ಮಧ್ಯಾಹ್ನ ಬೆಳಗಾವಿಯಿಂದ ಪಿ.ಎಂ ಕಿಸಾನ್‌ ಬಿಡುಗಡೆ ಮಾಡಲಿದ್ದಾರೆ: ಪ್ರಧಾನಿ ಮೋದಿ

ಎಲ್ಲ ವರ್ಗದ ಜನರಿಗೆ ಸ್ವಾಭಿಮಾನದ ಬದುಕು

ರಾಜ್ಯದಾದ್ಯಂತ 438 ನಮ್ಮ ಕ್ಲಿನಿಕ್, ಉಚಿತ ಕಣ್ಣಿನ ಚಿಕಿತ್ಸೆ ಹಾಗೂ ಕನ್ನಡಕ ವಿತರಣೆ, ಶ್ರವಣ ಸಾಧನಾ ವಿತರಣೆ, ಡಯಾಲಿಸಿಸ್ ಸೈಕಲ್‌ಗಳ ಹೆಚ್ಚಳ, ಕಿಮೋಥೆರಪಿ ವ್ಯವಸ್ಥೆಯನ್ನು ಈಗಾಗಲೇ ಹೆಚ್ಚಿಸಲಾಗಿದೆ.

ಇನ್ನು ರಾಜ್ಯದಲ್ಲಿ 8000 ಶಾಲಾಕೊಠಡಿಗಳ ನಿರ್ಮಾಣ ದಾಖಲೆಯ ಕಾರ್ಯಕ್ರಮ. ಈ ವರ್ಷದ ಆಯವ್ಯಯದ ಶೇ.12 ರಷ್ಟು ಪ್ರಮಾಣವನ್ನು ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲಾಗಿದೆ. 

ನಾಳೆ ರಾಜ್ಯದಿಂದಲೇ ರೈತರಿಗೆ ಬಿಡುಗಡೆ ಆಗಲಿದೆ ಪಿ.ಎಂ ಕಿಸಾನ್‌ ಹಣ! 

ಬಸವರಾಜ ಬೊಮ್ಮಾಯಿ

ಮೀನುಗಾರರಿಗೆ ವಿಶೇಷ ಯೋಜನೆಗಳು, ಎಸ್‌ಸಿ, ಎಸ್ಟಿ , ಹಿಂದುಳಿದ ವರ್ಗದವರ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಯೋಜನೆಗಳಿಂದ ,ಜನರನ್ನು ಆರ್ಥಿಕ ಸ್ವಾವಲಂಬನೆಯನ್ನು ನೀಡಿ ಸ್ವಾಭಿಮಾನ ಬದುಕು ನಡೆಸಲು ಸರ್ಕಾರ ಸಹಕರಿಸುತ್ತಿದೆ.

ಸರ್ಕಾರ ದುಡಿಯುವ ವರ್ಗಕ್ಕೆ ಬೆಂಬಲವನ್ನು ನೀಡುತ್ತಿದೆ. ದುಡಿಮೆಯೇ ದೊಡ್ಡಪ್ಪ ಎನ್ನುವ ಕಾಲ ಬಂದಿದೆ.

ಅಭಿವೃದ್ಧಿ ಆಕಾಂಕ್ಷೆ ತಾಲ್ಲೂಕುಗಳನ್ನು  ಗುರುತಿಸಲಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆ,  ಯುವಕರಿಗೆ ಸ್ವಾಮಿ ವಿವೇಕಾನಂದ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.

ಶಿಕ್ಷಣ, ಉದ್ಯೋಗ, ಸಬಲೀಕರಣವನ್ನು ತಳವರ್ಗದವರಿಗೆ ನೀಡದರೆ ಅವರೂ ಮುಖ್ಯವಾಹಿನಿಗೆ ಸೇರುತ್ತಾರೆ ಎಂದರು. 

15,000 ಸಾವಿರ ರೂ. ಚುನಾವಣೆಯಲ್ಲಿ ಗೆದ್ದರೆ ಪ್ರತಿ ವರ್ಷ ರೈತರಿಗೆ: ಜನಾರ್ದನ ರೆಡ್ಡಿ ಭರವಸೆ!

438 our clinic across the state: everyone will get free healthcare!

ಸರ್ಕಾರವು ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ. ರಾಜ್ಯದಲ್ಲಿ ಈ ಹಿಂದೆಂದಿಗಿಂತಲೂ ಗಣನೀಯ ಪ್ರಮಾಣದ ಅಭಿವೃದ್ಧಿ ಕಾಣುತ್ತಿದೆ.

ನವ ಕರ್ನಾಟದಿದ ನವ ಭಾರತ ನಿರ್ಮಾಣ ಮಾಡೋಣ ಎಂದರು.  ಜನಕಲ್ಯಾಣಕ್ಕೆ ಯಾವ ಸ್ಥಾನವೂ ಅಡ್ಡಿಬರುವುದಿಲ್ಲ.

ರಾಜಕಾರಣದಲ್ಲಿ ಜನ ರಾಜಕಾರಣ ಮಾಡಿದವರಿಗೆ ಅಧಿಕಾರವೂ ಬರುತ್ತದೆ ಜನರ ಪ್ರೀತಿಯೂ ಇರುತ್ತದೆ. ಪ್ರಧಾನಿ ಮೋದಿಯವರು ಈ ಯುವಶಕ್ತಿಯೇ ದೇಶದ ಶಕ್ತಿ ಎಂದರು.

ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ದೇಶದ ಯುವಶಕ್ತಿ ಪ್ರಮುಖ ಪಾತ್ರವಹಿಸಲಿದೆ. ನಕಾರಾತ್ಮಕತೆಯಿಂದ ಸಕಾರಾತ್ಮಕತೆಯೆಡೆಗೆ, ಸವಾಲುಗಳನ್ನು ಅವಕಾಶಗಳಾಗಿ ಮಾಡಿಕೊಳ್ಳುವ ಕಾಲಘಟ್ಟದಲ್ಲಿದ್ದೇ ಎಂದು ಹೇಳಿದರು.

ಆದರ್ಶ ಜನನಾಯಕ

ವಿಶ್ವೇಶ್ವರ ಹೆಗಡೆ ಕಾಗೇರಿಯವರು ಆದರ್ಶ ಜನನಾಯಕ. ರಾಜಕೀಯ ಆಸೆ ಆಮಿಷಗಳಿಗೆ ತಲೆ ಬಾಗದೇ ದೃಢವಾಗಿದ್ದಾರೆ. 

ಆನರ ಮೇಲಿನ ಅವರ ಪ್ರೀತಿ ಶಾಶ್ವತವಾದ್ದುದು.

ಕಳೆದ ಮೂರೂವರೆ ವರ್ಷದಲ್ಲಿ ಶಿರಶಿ ಕುಮಟಾ ತಾಲ್ಲೂಕುಗಳು ಸಮಗ್ರವಾಗಿ ಅಭಿವೃದ್ಧಿಯಾಗುತ್ತಿವೆ.

ಯಾವಾಗಲೂ ಒಂದು ವರ್ಗ ಅಭಿವೃದ್ಧಿಗೆ ವಿರೋಧವಾಗಿ ಇದ್ದೇ ಇರುತ್ತದೆ.  ಸಮಸ್ಯೆ ಬರಲಿಲ್ಲ ಅಂದರೆ ಅದು ಪ್ರಮುಖ ಯೋಜನೆಯೇ ಇಲ್ಲ ಎಂದರು.   

ರಾಜ್ಯದಲ್ಲಿ ಕೋಟ್ಯಾಂತರ ರೂಪಾಯಿ ಮೊತ್ತದ ಯೋಜನೆಗೆ: ಸೋಮವಾರ ಮೋದಿಯಿಂದ ಚಾಲನೆ

Published On: 01 March 2023, 12:14 PM English Summary: 438 our clinic across the state: everyone will get free healthcare!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.