1. ಸುದ್ದಿಗಳು

ರೈತರಿಗೆ ಗುಡ್‌ನ್ಯೂಸ್‌: ಸರ್ಕಾರದಿಂದ “ಕೃಷಿ ಪಂಡಿತ ಪ್ರಶಸ್ತಿ ಮತ್ತು ಕೃಷಿ ಪ್ರಶಸ್ತಿ”ಗೆ ಅರ್ಜಿ ಆಹ್ವಾನ: ₹1,25,000 ಬಹುಮಾನ!

Kalmesh T
Kalmesh T
Application for "Agriculture Pandit Award and Agriculture Award"

ರಾಜ್ಯದ ಕೃಷಿ ಕ್ಷೇತ್ರದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಕೃಷಿ ವಲಯಕ್ಕೆ ಅನ್ವಯಿಸುವಂತೆ ಗಮನಾರ್ಹ ಸಾಧನೆ ಮಾಡಿದವರಿಗೆ, ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ರೈತರಿಗೆ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.

ಇದನ್ನೂ ಓದಿರಿ: ₹23 ಲಕ್ಷಕ್ಕೆ ಬೇಡಿಕೆ ಗಿಟ್ಟಿಸಿಕೊಂಡ ಅಪರೂಪದ ಮೇಕೆ! ಏನಿದರ ವಿಶೇಷತೆ ಗೊತ್ತೆ?

35 ಕೋಟಿ ಲಂಚ ಪ್ರಕರಣ: ಆರೋಪ ಮುಕ್ತರಾಗುವವರೆಗೆ ಹಸಿರು ಶಾಲು ಹಾಕದಂತೆ ಕೋಡಿಹಳ್ಳಿ ಚಂದ್ರಶೇಖರಗೆ ರೈತ ಸಂಘದ ಎಚ್ಚರಿಕೆ!

ಕೃಷಿ ಪಂಡಿತ ಪುಶಸ್ತಿ ಮಾನದಂಡಗಳು:

  • ಕೃಷಿ ಪಂಡಿತ ಪ್ರಶಸ್ತಿಯಲ್ಲಿ ಭಾಗವಹಿಸಲು ಇಚ್ಛಿಸುವವರು ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರಬೇಕು. 
  • ಕೃಷಿ ವಲಯಕ್ಕೆ ಅನ್ವಯಿಸುವಂತೆ ಗಮನಾರ್ಹ/ಗಣನೀಯವಾದ/ ವಿಭಿನ್ನವಾದ ಮೂಲ ರೂಪದ ಸಾಧನೆ (Innovation) ಮಾಡಿದವರಬೇಕು.
  • ನಿಗದಿಪಡಿಸಿರುವ ನಮೂನೆಯಲ್ಲಿ ಇಲಾಖೆಯು ಸೂಚಿಸುವ ಅಂತಿಮ ದಿನಾಂಕ ದೊಳಗೆ ಅರ್ಜಿಯನ್ನು ತಾಲ್ಲೂಕು ಮಟ್ಟದ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸುವುದು.
  • ಈ ಹಿಂದೆ ಕೃಷಿ ಪಂಡಿತ ಪ್ರಶಸ್ತಿ (ಪ್ರಥಮ, ದ್ವಿತೀಯ, ತೃತೀಯ ಹಾಗೂ ಉದಯೋನ್ಮುಖ) ಪಡೆದವರು ಮತ್ತೆ ಸ್ಪರ್ಧಿಸುವಂತಿಲ್ಲ.
  • ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆಯಲ್ಲಿರುವ ಯಾವುದೇ ಇಲಾಖೆ/ ವಿಶ್ವವಿದ್ಯಾಲಯ/ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಸ್ಪರ್ಧೆ ಭಾಗವಹಿಸುವಂತಿಲ್ಲ.

ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ!

ಗ್ರಾಹಕರಿಗೆ ಒತ್ತಾಯವಾಗಿ "ಸೇವಾ ಶುಲ್ಕ" ವಿಧಿಸುವ ರೆಸ್ಟೋರೆಂಟ್‌ಗಳಿಗೆ ಎಚ್ಚರಿಕೆ ನೀಡಲು DOCA ಜೂನ್ 2ರಂದು ಸಭೆ!

ಬೆಳೆ ಸ್ಪರ್ಧೆಗೆ ಸ್ಪರ್ಧಿಸಲು ಅರ್ಹತೆ:

  1. ಅರ್ಜಿದಾರರು ಸ್ವತಃ ಬೇಸಾಯದಲ್ಲಿ ತೊಡಗಿರುವ ಕ್ರಿಯಾಶೀಲ ಕೃಷಿಕನಾಗಿರಬೇಕು.
  2. ಸ್ವಂತ ಜಮೀನು ಹೊಂದಿರದಿದ್ದರೂ ಸಹ ಬೇಸಾಯದಲ್ಲಿ ತೊಡಗಿರುವ ಕೃಷಿಕನು ಜಮೀನು ಮಾಲೀಕರಿಂದ ಸಾಮಾನ್ಯ ವ್ಯವಹಾರಿಕ ಅಧಿಕಾರ (GPA) ಹೊಂದಿದ್ದ ಪಕ್ಷದಲ್ಲಿ (ಭೂ ಸುಧಾರಣೆಯ ಕಾಯ್ದೆಯ ನಿಯಮಗಳಿಗೆ ಒಳಪಟ್ಟು) ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿರುತ್ತದೆ.

7ನೇ ವೇತನ ಆಯೋಗದಿಂದ ಗುಡ್‌ನ್ಯೂಸ್‌; ಸರ್ಕಾರಿ ನೌಕರರ ವೇತನ ಖಾತೆಗೆ ಬರಲಿದೆ 2 ಲಕ್ಷ ರೂಪಾಯಿ..! ಏನಿದು ತಿಳಿಯಿರಿ

7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್; ಶೇ.14% ರಷ್ಟು ತುಟ್ಟಿಭತ್ಯೆ ಹೆಚ್ಚಳ..!

ಬೆಳೆ ಸ್ಪರ್ಧೆಗೆ ಸ್ಪರ್ಧಿಸಲು ಅನರ್ಹತೆ:

  1. ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ/ರೈತ ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹನಾಗಿರುವುದಿಲ್ಲ. ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ದೆಯಲ್ಲಿ ಭಾಗವಹಿಸಬಹುದಾಗಿರುತ್ತದೆ.
  2. ರಾಜ್ಯ ಮತ್ತು ಜಿಲ್ಲಾ ಮಟ್ಟಗಳಲ್ಲಿ ರಚಿಸಲಾಗಿರುವ ವಿವಿಧ ಸಮಿತಿ ತಂಡಗಳಲ್ಲಿ/ ಕಾರ್ಯನಿರ್ವಹಿಸುತ್ತಿರುವ ಸದಸ್ಯರುಗಳು ಮತ್ತು ಅವರ ಕುಟುಂಬದ ಸದಸ್ಯರು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ.
  1. ಕನಿಷ್ಠ ವಿಸ್ತೀರ್ಣ ಒಂದು ಎಕರೆ ಇರಬೇಕು.
  2. ಒಬ್ಬ ಅರ್ಜಿದಾರನು ಒಂದೇ ವರ್ಷದಲ್ಲಿ ಒಂದಕ್ಕಿಂತ ಹೆಚ್ಚಿನ ಬೆಳೆಗಳಿಗೆ ಸ್ಪರ್ಧಿಸಬಹುದಾಗಿದ್ದು ಇದರಲ್ಲಿ ಯಾವುದಾದರೂ ಒಂದು ಬೆಳೆಯ ಹೆಚ್ಚಿನ ಮೌಲ್ಯದ ಪ್ರಶಸ್ತಿ ಪಡೆಯಲು ಮಾತ್ರ ಅರ್ಹರಾಗಿರುತ್ತಾರೆ.

ಕೃಷಿ ಪಂಡಿತ ಪ್ರಶಸ್ತಿ ಬಹುಮಾನದ ಮೊತ್ತ:

  1. ಕೃಷಿ ಪಂಡಿತ -ಪ್ರಥಮ - 1,25,000
  2. ಕೃಷಿ ಪಂಡಿತ-ದ್ವೀತಿಯ - 1,00,000
  3. ಕೃಷಿ ಪಂಡಿತ-ತೃತೀಯ - 75,000
  4. ಕೃಷಿ ಪಂಡಿತ ಉದಯೋನ್ಮುಖ - ತಲಾ 50,000.

EPFO ಖಾತೆದಾರರಿಗೆ ಗುಡ್ನ್ಯೂಸ್: ಇನ್ಮುಂದೆ SMS ಮತ್ತು Missed Call ಮೂಲಕ ನಿಮ್ಮ ಬ್ಯಾಲೆನ್ಸ್ ಚೆಕ್ ಮಾಡಬಹುದು!

Atal Pension Yojana: 4 ಕೋಟಿಗೂ ಹೆಚ್ಚು ಜನರಿಗೆ ಲಾಭವಾದ ಈ ಯೋಜನೆಯ ಲಾಭ ನೀವು ಪಡೆದಿದ್ದೀರಾ?

Published On: 28 May 2022, 02:13 PM English Summary: Application for "Agriculture Pandit Award and Agriculture Award"

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.