1. ಸುದ್ದಿಗಳು

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Application

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2020-21 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದಲ್ಲಿ ಗುರುತಿಸಿರುವ ಅಲೆಮಾರಿ/ಅರಣ್ಯ ಆಧಾರಿತ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ ಈ ಕೆಳಕಂಡ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ತಿಳಿಸಿದೆ.

ಭೂ ಒಡೆತನ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ  ಯೋಜನೆ, ಸ್ವಯಂ ಉದ್ಯೋಗ (ನೇರ ಸಾಲ) ಯೋಜನೆ ಹಾಗೂ ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಇಲಾಖೆಯ https://kmvstdcl.karnataka.gov.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ 2020ರ ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು. ಮತ್ತಿತರ  ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.

Published On: 11 August 2020, 10:08 AM English Summary: Application invited for facilities

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.