1. ಸುದ್ದಿಗಳು

ಗುಣಮಟ್ಟದ ಬೀಜೋತ್ಪಾದನೆ ಹಾಗೂ ಸೂಕ್ಷ್ಮ ನೀರಾವರಿ ವಿಧಾನ ಕುರಿತು ತರಬೇತಿಗೆ ಅರ್ಜಿ ಆಹ್ವಾನ

ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರವು ಗುಣಮಟ್ಟದ ಬೀಜೋತ್ಪಾದನೆ ಹಾಗೂ ಸೂಕ್ಷ್ಮ ನೀರಾವರಿ ವಿಧಾನ ಕುರಿತು ಕೌಶಲ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

ಪ್ರತಿ ತರಬೇತಿಗೆ 20 ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಇದೆ. ಆಸಕ್ತ ರೈತರು, ಗ್ರಾಮೀಣ ಪ್ರದೇಶದ ಯುವಕರು ಮತ್ತು ಯುವತಿಯರು ಕೃಷಿ ವಿಜ್ಞಾನ ಕೇಂದ್ರದಲ್ಲಿ ಅರ್ಜಿ ಪಡೆದು, ಭಾವಚಿತ್ರ, ಪಹಣಿ, ಆಧಾರ್ ಕಾರ್ಡ್ ಹಾಗೂ ವಿದ್ಯಾರ್ಹತೆ ಪ್ರಮಾಣ ಪತ್ರ ಲಗತ್ತಿಸಿ, ಡಿ.25ರ ಒಳಗೆ ಸಲ್ಲಿಸಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಸುನೀಲಕುಮಾರ ತಿಳಿಸಿದ್ದಾರೆ.

ಮಾಹಿತಿಗೆ ಡಾ.ಆರ್.ಎಲ್. ಜಾಧವ (9972146214), ಡಾ.ನಿಂಗದಳ್ಳಿ ಮಲ್ಲಿಕಾರ್ಜುನ (9980102727) ಅವರನ್ನು ಸಂಪರ್ಕಿಸಬಹುದು ಎಂದಿದ್ದಾರೆ.

Published On: 14 December 2020, 10:10 AM English Summary: Application invited for Quality Seed Production Training

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.