ಗುಣಮಟ್ಟದ ಬೀಜೋತ್ಪಾದನೆ ಹಾಗೂ ಸೂಕ್ಷ್ಮ ನೀರಾವರಿ ವಿಧಾನ ಕುರಿತು ತರಬೇತಿಗೆ ಅರ್ಜಿ ಆಹ್ವಾನ
ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರವು ಗುಣಮಟ್ಟದ ಬೀಜೋತ್ಪಾದನೆ ಹಾಗೂ ಸೂಕ್ಷ್ಮ ನೀರಾವರಿ ವಿಧಾನ ಕುರಿತು ಕೌಶಲ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
ಪ್ರತಿ ತರಬೇತಿಗೆ 20 ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಇದೆ. ಆಸಕ್ತ ರೈತರು, ಗ್ರಾಮೀಣ ಪ್ರದೇಶದ ಯುವಕರು ಮತ್ತು ಯುವತಿಯರು ಕೃಷಿ ವಿಜ್ಞಾನ ಕೇಂದ್ರದಲ್ಲಿ ಅರ್ಜಿ ಪಡೆದು, ಭಾವಚಿತ್ರ, ಪಹಣಿ, ಆಧಾರ್ ಕಾರ್ಡ್ ಹಾಗೂ ವಿದ್ಯಾರ್ಹತೆ ಪ್ರಮಾಣ ಪತ್ರ ಲಗತ್ತಿಸಿ, ಡಿ.25ರ ಒಳಗೆ ಸಲ್ಲಿಸಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಸುನೀಲಕುಮಾರ ತಿಳಿಸಿದ್ದಾರೆ.
ಮಾಹಿತಿಗೆ ಡಾ.ಆರ್.ಎಲ್. ಜಾಧವ (9972146214), ಡಾ.ನಿಂಗದಳ್ಳಿ ಮಲ್ಲಿಕಾರ್ಜುನ (9980102727) ಅವರನ್ನು ಸಂಪರ್ಕಿಸಬಹುದು ಎಂದಿದ್ದಾರೆ.
ನಿಮ್ಮ ಬೆಂಬಲ ಸದಾ ಇರಲಿ
ನಮ್ಮ ಪತ್ರಿಕೆಯ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಭಾರತದ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಅಲ್ಪ ಕೊಡುಗೆಯೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
Share your comments