1. ಸುದ್ದಿಗಳು

ಹಿಂದುಳಿದ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ವಿದ್ಯಾಸಿರಿ ಯೋಜನೆಗೆ ಆನ್ಲೈಗನ್ ಅರ್ಜಿ ಆಹ್ವಾನ

cash

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೇ ಅಲೆಮಾರಿ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ವಿಧ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿಯನ್ನು ವೆಬ್‍ಸೈಟ್ www.ssp.postmatric.karnataka.gov.inಮೂಲಕ ದಿ.05-03-2021 ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಸಂಗಾ ತಿಳಿಸಿದ್ದಾರೆ.

ವಿಧ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯದ ಕುರಿತ ವಿವರವಾದ ಮಾಹಿತಿಗೆ ಇಲಾಖೆಯ ವೆಬ್‍ಸೈಟ್ www.bcwd.karnataka.gov.inವೀಕ್ಷಿಸಬಹುದಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗೆ ಇಲಾಖೆಯ ಸಹಾಯವಾಣಿ ಸಂಖ್ಯೆ 8050770005, 8050770004 ಹಾಗೂ ಇಮೇಲ್ ವಿಳಾಸ bcwd.scholarship@karnataka.gov.inಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ 080-35254757 ಮತ್ತು ಇಮೇಲ್ ವಿಳಾಸ  postmetrichelpdesk@karnataka.gov.in ಸಂಪರ್ಕಿಸಬಹುದಾಗಿದೆ.

Published On: 08 February 2021, 04:16 PM English Summary: application invited for scholarship under vidyasiri scheme

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.