1. ಸುದ್ದಿಗಳು

ಎಂಬಿಬಿಎಸ್ ಅಭ್ಯರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ವಿದ್ಯಾರ್ಥಿಗಳಲ್ಲಿ ಓದುವ ಆಸಕ್ತಿ ಹಂಬಲವಿದ್ದರೂ ಆರ್ಥಿಕವಾಗಿ ಅವರಿಗೆ ವಿದ್ಯಾಭ್ಯಾಸ ಮುಂದುವರೆಸಲು ಸಾಧ್ಯವಾಗುವುದಿಲ್ಲ ಹಾಗಾಗಿ ಅಂತಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಹಲವಾರು ಸಂಘ ಸಂಸ್ಥೆಗಳು, ಸರ್ಕಾರ ಆರ್ಥಿಕ ಸಹಾಯ ಮಾಡುತ್ತವೆ.

ಹೀಗೆ MBBS ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು dr.p.s.ಶಂಕರ್ ಪ್ರತಿಷ್ಠಾನ 2020-24 ಸಾಲಿನಲ್ಲಿ ನೀಡುವ ವೈದ್ಯಕೀಯ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆ :

-ವಿದ್ಯಾರ್ಥಿಯು ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡುತ್ತಿರಬೇಕು.

-ಕರ್ನಾಟಕದ ಯಾವುದೇ ಜಿಲ್ಲೆಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

-ಮೊದಲನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಅರ್ಜಿ ಸಲ್ಲಿಸುವುದು ಹೇಗೆ :

-ಅರ್ಜಿಯನ್ನು ಸಲ್ಲಿಸಲು ಆನ್ಲೈನ್ ಮೂಲಕ www.psshankarpratishtan.in ಮೂಲಕ ಅರ್ಜಿಯನ್ನು ಸಲ್ಲಿಸಬೇಕು 

-ಹೆಚ್ಚಿನ ಮಾಹಿತಿಗಾಗಿ ಮೊಬೈಲ್ no.9448813514 ಅಥವಾ 9480149723 ಗೆ ಸಂಪರ್ಕಿಸಿ.

Published On: 11 December 2020, 08:24 AM English Summary: Application invited for scholarship

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.