News

ಮಡಿವಾಳ ಸಮಾಜದವರಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನ

07 August, 2020 9:33 AM IST By:

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಮಡಿವಾಳ ಸಮಾಜದವರಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (Self employee scheme), ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಲ್ಲಿ ಸಾಲ ಹಾಗೂ ಸಹಾಯಧನ (loan)ಸೌಲಭ್ಯಕ್ಕೆ ಅರ್ಜಿ (Application)ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಮಡಿವಾಳ ಸಮಾಜಕ್ಕೆ ಸೇರಿದ ಅಗಸ, ಚಕಲ, ಧೋಬಿ, ಮಡಿವಾಳ, ಮನ್ನನ್, ಪರಿತ್, ಸಕಲ, ವನ್ನನ್, ವೆಲ್ಲುತೇಡನ್, ಸಾಕಲವಾಡು ಸಮುದಾದಯವರು ಅರ್ಜಿ ಸಲ್ಲಿಸಬಹುದು. ನಮೂನೆಗಳನ್ನು ಉಚಿತವಾಗಿ ಜಿಲ್ಲಾ ಕಚೇರಿ ಅಥವಾ ನಿಗಮದ ವೆಬ್‍ಸೈಟ್ www.dbcdc.karnataka.gov.in ನಲ್ಲಿ ಪಡೆದು, ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್ ಮತ್ತು ಇತ್ತೀಚಿನ ಭಾವಚಿತ್ರ, ವಿದ್ಯಾರ್ಥಿಗಳ ವ್ಯಾಸಂಗದ ದಾಖಲಾತಿ, ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಂದಿರುವ ಜಮೀನಿನ ದಾಖಲಾತಿಗಳು ಮತ್ತು ಸಣ್ಣ ರೈತರ ಪ್ರಮಾಣ ಪತ್ರಗಳನ್ನು ನಿಗಮದ ವೆಬ್‍ಸೈಟ್ ಮೂಲಕ ಸಲ್ಲಿಸಬೇಕು.

ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಯೊಂದಿಗೆ ಜಿಲ್ಲಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಆಗಸ್ಟ್‌ 31ರೊಳಗೆ ಸಲ್ಲಿಸಬೇಕು.