News

ಅನ್ನದಾತರಿಗೆ ಶೀಘ್ರವೇ ಬೆಳೆವಿಮೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಬಿ ಸಿ ಪಾಟೀಲ್‌ ಖಡಕ್‌ ಸೂಚನೆ

14 November, 2022 3:25 PM IST By: Maltesh
B C Patil Talk about Pradhan Mantri Fasal Bima Yojana

ಅನ್ನದಾತರಿಗೆ ಶೀಘ್ರವೇ ಬೆಳೆವಿಮೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಬಿ ಸಿ ಪಾಟೀಲ್‌ ಖಡಕ್‌ ಸೂಚನೆ

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿರುವ ರೈತರಿಗೆ ಈ ವರ್ಷದ  ಬೆಳೆವಿಮೆ ಪರಿಹಾರವನ್ನು ಶೀಘ್ರ ನೀಡುವಂತೆ ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಖಡಕ್‌ ಸೂಚನೆ ನೀಡಿದ್ದಾರೆ. ಬೆಳೆವಿಮೆ ಇತ್ಯರ್ಥ ಕುರಿತಂತೆ ಗುರುವಾರ ಸಂಬಧಿಸಿದ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ ಅವರು ಈ ಸಾಲಿನಲ್ಲಿ ಬೆಳೆ ವಿಮೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಈ ರಾಜ್ಯದ ಮಕ್ಕಳಿಗೆ ಮನೆ ಬಾಗಿಲಿಗೆ ಬಂದು ಕೊಡ್ತಾರೆ “ಆಧಾರ್‌ ಕಾರ್ಡ್‌”!

ಮತ್ತು ಈಗಾಗಲೇ ಬೆಳೆ ವಿಮೆ ಮಾಡಿಸಿರುವ ರೈತರು ಪೂರ್ವ ಮುಂಗಾರು ಹಂಗಾಮಿನ ನೀರಿಕ್ಷೆಯಲ್ಲಿದ್ದಾರೆ. ಈ ಸಾಲಿನ  ಪರಿಹಾರ ಕ್ರಮದ ಸಲುವಾಗಿ ವಿಮಾ ಕಂಪನಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು ಶೀಘ್ರವೇ ಇತ್ಯರ್ಥ ಮಾಡುವಂತೆ ಸೂಚಿಸಿದ್ದಾರೆ.

ಜನಸಾಮಾನ್ಯರಿಗೆ ಶಾಕಿಂಗ್‌ ನ್ಯೂಸ್‌ ದಿಢೀರ್‌ನೆ ನಂದಿನ ಮೊಸರು ಹಾಗೂ ಹಾಲಿನ ದರದಲ್ಲಿ ಏರಿಕೆಯಾಗಿದೆ. ಹೌದು ತಲಾ 1 ಲೀಟರ್‌ ಹಾಲು ಹಾಗೂ ಮೊಸರಿಗೆ 3 ರೂಪಾಯಿ ಹೆಚ್ಚಳವಾಗಿದ್ದು, ಈ ಹೊಸ ದರವು ನಾಳೆಯಿಂದ ಅನ್ವಯವಾಗಲಿದೆ.

ಈ ಮೊದಲು ನಂದಿನಿ ಹಾಲು ಹಾಗೂ ಮೊಸರಿನ ದರಗಳ ಏರಿಕೆ ಕುರಿತು ಸಾಕಷ್ಟು ಚರ್ಚೆ ನಡೆದಿತ್ತು ಈ ಕುರಿತು ಸುದ್ದಿಗಳು ಆಗಿದ್ದವು. ಕರ್ನಾಟಕ ಹಾಲು ಒಕ್ಕೂಟವು ಸಭೆಯನ್ನು ಕೂಡಾ ಸೇರಿತ್ತು. ಇದೀಗ KMF ನಡೆಸಿದ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗಿದೆ.

BMTC: ವಿದ್ಯಾರ್ಥಿ ಪಾಸ್‌ ಇದ್ದರೆ ಟಿಕೆಟ್‌ ಕೊಡುವಂತಿಲ್ಲ!

ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023: ಅನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ

ವಿಶ್ವಸಂಸ್ಥೆಯು 2023ನೇ ಸಾಲಿನ ವರ್ಷವನ್ನು ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂದು ಘೋಷಿಸಿದ್ದು, ರಾಜ್ಯದಲ್ಲಿಯೂ ಅದ್ಧೂರಿ ಆಚರಣೆಗೆ ಸಿದ್ಧತೆ ನಡೆಸಲು ಚಿಂತಿಸಲಾಗಿದೆ.  ರಾಜ್ಯವು ಸಿರಿಧಾನ್ಯಗಳ ಬೆಳೆಗಳಲ್ಲಿ ಮುಂಚೂಣಿ ರಾಜ್ಯವಾಗಿ ಗುರುತಿಸಿಕೊಂಡಿದೆ. ವಿಶ್ವಸಂಸ್ಥೆಯು ಗೊತ್ತುಪಡಿಸಿದ 2023 ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂದು ಆಚರಿಸಲಾಗುತ್ತಿದೆ. ಇದರ ಭಾಗವಾಗಿ ಜನರಲ್ಲಿ ಅದರ ಬಳಕೆಯನ್ನು ಹೆಚ್ಚಿಸುವ ಮೂಲಕ ಬೆಳೆಯನ್ನು ಉತ್ತೇಜಿಸಲು ಸರ್ಕಾರವು ಮುಂದಾಗಿದೆ.  ವಿಶ್ವಸಂಸ್ಥೆಯು ಗೊತ್ತುಪಡಿಸಿದ 2023ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂದು ಆಚರಿಸಲಾಗುತ್ತಿದ್ದು, ಇದನ್ನು ರಾಜ್ಯದಲ್ಲೂ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.

ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಆಗ್ರಹಿಸಿ ಬೀದಿಗಿಳಿದ ರೈತರಿಂದ ಪ್ರತಿಭಟನೆ

ಪ್ರಸಕ್ತ ಹಂಗಾಮಿಗೆ ಉತ್ತಮ ಬೆಲೆ ನೀಡಬೇಕೆಂದು ಮುಧೋಳದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ರೈತ ಸಂಘಟನೆಗಳ ಪ್ರತಿಭಟನೆ ಮಹತ್ವದ ತಿರುವು ಪಡೆದುಕೊಂಡಿದೆ. ಶುಕ್ರವಾರದಂದು ರೈತ ಸಂಘಟನೆಗಳ ವಿರುದ್ಧ ಕಬ್ಬು ಬೆಳೆಗಾರರೇ ಕಾರ್ಖಾನೆಗಳನ್ನು ಬೇಗ ಪ್ರಾರಂಭಿಸಲು ಮತ್ತು ತಮ್ಮ ಕಬ್ಬು ತುಂಬಿದ ವಾಹನಗಳಿಗೆ ಸೂಕ್ತ ಭದ್ರತೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಆಕ್ರೋಶಗೊಂಡ ರೈತರು ತಮ್ಮ ಕಬ್ಬು ಕಾರ್ಖಾನೆಗೆ ಸಾಗಿಸಲು ಸಾಧ್ಯವಾಗದ ಅಸಹಾಯಕತೆಯನ್ನು ಪೋಲೀಸ್ ವರೀಷ್ಠಾಧಿಕಾರಿಗಳ ಮುಂದೆ ಹೇಳಿಕೊಂಡಿದ್ದಾರೆ. ಕಾರ್ಖಾನೆ ಪ್ರಾರಂಭಿಸಲು ಮತ್ತು ನಮ್ಮ ಕಬ್ಬು ತುಂಬಿದ ವಾಹನಗಳಿಗೆ ಭದ್ರತೆ ನೀಡಲು ಆಗ್ರಹಿಸಿ ಎಸ್.ಪಿ. ಅವರಿಗೆ ಮನವಿ ಮಾಡಲಾಗಿದೆ