1. ಸುದ್ದಿಗಳು

Atal Pension Scheme Big Update; ಅಕ್ಟೋಬರ್‌ 1ರಿಂದ ಈ ಕೆಲಸ ಮಾಡುವವರ ಖಾತೆ ಬಂದ್‌!

Kalmesh T
Kalmesh T
Big Update In Atal Pension Scheme

ಕೇಂದ್ರ ಸರ್ಕಾರದ ಯೋಜನೆಯಾದ ಅಟಲ್ ಪಿಂಚಣಿ ಯೋಜನೆಯಲ್ಲಿ ಮಹತ್ವದ ಬದಲಾವಣೆ. ಅಕ್ಟೋಬರ್‌ 1ರಿಂದ ಜಾರಿಯಾಗಲಿದೆ ಹೊಸ ನೀತಿ. ಏನಿದು ಗೊತ್ತೆ?

ಇದನ್ನೂ ಓದಿರಿ: Breaking News: IT ದಾಳಿಯಲ್ಲಿ ಬರೋಬ್ಬರಿ 390 ಕೋಟಿ ಮೌಲ್ಯದ ಅಕ್ರಮ ಹಣ, ಬಂಗಾರ, ವಜ್ರ ಪತ್ತೆ!

Atal Pension Scheme: ಕೇಂದ್ರ ಸರ್ಕಾರ ಅಟಲ್ ಪಿಂಚಣಿ ಯೋಜನೆಯ (ಎಪಿವೈ ಯೋಜನೆ) ಹೂಡಿಕೆ ನಿಯಮಗಳಲ್ಲಿ ಬದಲಾವಣೆ ಮಾಡಿದೆ. 

ಆದಾಯ ತೆರಿಗೆ ಪಾವತಿಸುವ ಹೂಡಿಕೆದಾರರು 2022ರ ಅಕ್ಟೋಬರ್ 1ರಿಂದ ಅಟಲ್ ಪಿಂಚಣಿ ಯೋಜನೆಗೆ ಸೇರ್ಪಡೆಗೊಳ್ಳಲು ಅರ್ಹರಾಗಿರೋದಿಲ್ಲ.

ಒಂದು ವೇಳೆ ಆದಾಯ ತೆರಿಗೆ ಪಾವತಿಸುತ್ತಿರುವ ವ್ಯಕ್ತಿ ಅಕ್ಟೋಬರ್ 1 ಅಥವಾ ಅದರ ನಂತರ ಎಪಿವೈ ಯೋಜನೆಗೆ ಸೇರ್ಪಡೆಗೊಂಡರೆ ಅಂಥ ಖಾತೆಯನ್ನು ಮುಚ್ಚಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಅಧಿಸೂಚನೆ ತಿಳಿಸಿದೆ.

'2022ರ ಅಕ್ಟೋಬರ್ 1ರಿಂದ ಆದಾಯ ತೆರಿಗೆ ಪಾವತಿಸುತ್ತಿರುವ ಯಾವುದೇ ನಾಗರಿಕ ಎಪಿವೈ ಯೋಜನೆಗೆ ಸೇರ್ಪಡೆಗೊಳ್ಳಲು ಅರ್ಹನಾಗಿಲ್ಲ.

ಗುಡ್‌ನ್ಯೂಸ್‌: SSLC - PUC ವಿದ್ಯಾರ್ಥಿಗಳಿಗೆ ಇಲ್ಲಿದೆ ಬರೋಬ್ಬರಿ ₹1,25,000 ವಿದ್ಯಾರ್ಥಿ ವೇತನ! ಅರ್ಜಿ ಸಲ್ಲಿಕೆ ಹೇಗೆ ಗೊತ್ತೆ?

ಒಂದು ವೇಳೆ ಯಾವುದೇ ಚಂದಾದಾರರು ಅಕ್ಟೋಬರ್ 1 ಅಥವಾ ಅದರ ನಂತರ ಸೇರ್ಪಡೆಗೊಂಡರೆ ಹಾಗೂ ಅವರು ಅರ್ಜಿ ಸಲ್ಲಿಸಿದಾಗ ಅಥವಾ ಅದಕ್ಕೂ ಮೊದಲು ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂಬುದು ತಿಳಿದು ಬಂದರೆ ಎಪಿವೈ (APY) ಖಾತೆಯನ್ನು ಮುಚ್ಚಲಾಗುತ್ತದೆ.

ಆ ದಿನಾಂಕದ ತನಕ ಸಂಗ್ರಹಣೆಗೊಂಡ ಪಿಂಚಣಿಯನ್ನು ಚಂದಾದಾರರಿಗೆ ನೀಡಲಾಗುತ್ತದೆ' ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇಲ್ಲಿಯ ತನಕ 18 ಹಾಗೂ 40 ವರ್ಷಗಳ ನಡುವಿನ ಭಾರತದ ಎಲ್ಲ ನಾಗರಿಕರು ಅವರ ತೆರಿಗೆ ಪಾವತಿ ಸ್ಥಿತಿಗತಿಗಳನ್ನು ಹೊರತುಪಡಿಸಿ  ಈ ಯೋಜನೆಗೆ ಸೇರ್ಪಡೆಗೊಳ್ಳಲು ಅರ್ಹರಾಗಿದ್ದರು.

ಈ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ಚಂದಾದಾರರ ಕೊಡುಗೆಯ ಶೇ.50ರಷ್ಟನ್ನು ಅಥವಾ ವಾರ್ಷಿಕ 1,000ರೂ. ಇದರಲ್ಲಿ ಯಾವುದು ಕಡಿಮೆಯೋ ಅದನ್ನು ನೀಡುತ್ತದೆ.

ಸರ್ಕಾರದ ಈ ಕೊಡುಗೆ ಇಲ್ಲಿಯ ತನಕ ಇತರ ಸಾಮಾಜಿಕ ಭದ್ರತ ಯೋಜನೆಗಳ ಫಲಾನುಭವಿ ಆಗದಿರೋರಿಗೆ ಮಾತ್ರ ಲಭಿಸುತ್ತಿತ್ತು. ಅಲ್ಲದೆ, ಇಲ್ಲಿಯ ತನಕ ಆದಾಯ ತೆರಿಗೆ ಪಾವತಿಗೆ ಸಂಬಂಧಿಸಿದ ಯಾವುದೇ ಷರತ್ತು ಇರಲಿಲ್ಲ.

ರೈತರಿಗೆ ಸಿಹಿಸುದ್ದಿ: “ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ; 5 ಲಕ್ಷ ಬಹುಮಾನ! ಈಗಲೇ ಅರ್ಜಿ ಸಲ್ಲಿಸಿ..

ಅಟಲ್ ಪಿಂಚಣಿ ಯೋಜನೆಯನ್ನು  (APY scheme) ಕೇಂದ್ರ ಸರ್ಕಾರ 2015-16ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಕೇಂದ್ರ ಸರ್ಕಾರದ ಈ ಯೋಜನೆ ವೃದ್ಧಾಪ್ಯದಲ್ಲಿ ಆದಾಯ ಭದ್ರತೆ ನೀಡುವ ಜೊತೆಗೆ ಅಸಂಘಟಿತ ವಲಯದ ಎಲ್ಲ ನಾಗರಿಕರನ್ನು ಕೇಂದ್ರೀಕರಿಸಿತ್ತು.

ಈ ಯೋಜನೆಯನ್ನು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ (NPS) ಮೂಲಕ ಪಿಂಚಣಿ ನಿಧಿ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ (PFRDA) ನಿರ್ವಹಿಸುತ್ತದೆ.

ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ಚಂದಾದಾರರಿಗೆ ಸರ್ಕಾರ ನಿಗದಿತ ಕನಿಷ್ಠ ಮಾಸಿಕ ಪಿಂಚಣಿ ನೀಡಲಾಗುತ್ತದೆ. ಈ ಪಿಂಚಣಿ ಮೊತ್ತ ತಿಂಗಳಿಗೆ 1,000ರೂ. ಹಾಗೂ 5,000ರೂ. ನಡುವೆ ಇರುತ್ತದೆ.

ರೈತರೆ ಗಮನಿಸಿ: ಡೇರಿ ಉದ್ಯಮ ಆರಂಭಿಸಲು ನಬಾರ್ಡ್‌ ನೀಡಲಿದೆ ಬರೋಬ್ಬರಿ ₹25 ಲಕ್ಷ! ಪಡೆಯುವುದು ಹೇಗೆ ಗೊತ್ತೆ?

ಅಟಲ್ ಪಿಂಚಣಿ ಯೋಜನೆಯಿಂದ ಹೊರಹೋಗೋದು ಹೇಗೆ?

*ಚಂದಾದಾರರು ಮರಣ ಹೊಂದಿದ್ದರೆ: ಚಂದಾದಾರರು ಮರಣ ಹೊಂದಿದರೆ, ಅವರ ಪತಿ ಅಥವಾ ಪತ್ನಿಗೆ ಪಿಂಚಣಿ ನೀಡಲಾಗುತ್ತದೆ.

ಇನ್ನು ಇಬ್ಬರೂ ಅಂದರೆ ಚಂದಾದಾರರು ಹಾಗೂ ಪತಿ ಅಥವಾ ಪತ್ನಿ ಮರಣ ಹೊಂದಿದ್ರೆ ಪಿಂಚಣಿಯನ್ನು ಅವರ ನಾಮಿನಿಗೆ ಹಿಂತಿರುಗಿಸಲಾಗುತ್ತದೆ.

*60 ವರ್ಷ ಪೂರ್ಣಗೊಂಡ ಬಳಿಕ: 60 ವರ್ಷ ಪೂರ್ಣಗೊಂಡ ಬಳಿಕ ಪಿಂಚಣಿ ಹಣವನ್ನು ಶೇ.100ರಷ್ಟು ವರ್ಷಾಷನಗೊಳಿಸಿದ್ರೆ ಆಗ ಯೋಜನೆಯಿಂದ ಹೊರಹೋಗಬಹುದು.

*60 ವರ್ಷಕ್ಕಿಂತ ಮೊದಲು ನಿರ್ಗಮನ: 60 ವರ್ಷಗಳಿಗಿಂತ ಮೊದಲು ಈ ಯೋಜನೆಯಿಂದ ನಿರ್ಗಮಿಸಲು ಅವಕಾಶವಿಲ್ಲ. ವಿಶೇಷ ಸಂದರ್ಭಗಳಲ್ಲಿ ಅಂದ್ರೆ ಫಲಾನುಭವಿ ಸಾವನ್ನಪ್ಪಿದ್ದಲ್ಲಿ ಮಾತ್ರ ಈ ಯೋಜನೆಯಿಂದ ನಿರ್ಗಮಿಸಲು ಅವಕಾಶವಿದೆ.

ಕಳೆದ ವರ್ಷ ಅಕ್ಟೋಬರ್ ನಲ್ಲಿ ಅಟಲ್ ಪಿಂಚಣಿ ಯೋಜನೆಯ ಖಾತೆಯನ್ನು ಆನ್ ಲೈನ್ ನಲ್ಲಿ ತೆರೆಯಲು ಅವಕಾಶ ನೀಡಲಾಗಿದೆ. ಆನ್ ಲೈನ್ ನಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು ಎಂದು ಪಿಎಫ್ ಆರ್ ಡಿ ಅಧಿಸೂಚನೆ ಮೂಲಕ ತಿಳಿಸಿತ್ತು.

Published On: 12 August 2022, 02:46 PM English Summary: Big Update In Atal Pension Scheme

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.