News

karnataka state budget 2023-2024 ಬೊಮ್ಮಾಯಿಯಿಂದ ರೈತರಿಗೆ ಮಿಠಾಯಿ: ಶೂನ್ಯ ಬಡ್ಡಿದರದಲ್ಲಿ ರೈತರಿಗೆ 5 ಲಕ್ಷ ಸಾಲ!

17 February, 2023 10:51 AM IST By: Hitesh
Candy for farmers from Bommai: interest-free loan up to 5 lakh rupees for farmers!

ವಿಧಾನಸಭೆ ಚುನಾವಣೆಯ ಹೊಸ್ತಿನಲ್ಲಿ ಇರುವುದರಿಂದ ಈ ಬಾರಿ ಭರ್ಜರಿ ಬಜೆಟ್‌ ಮಂಡನೆ ಆಗಿದೆ.

State budget 2023 ರಾಜ್ಯ ಸರ್ಕಾರದ 2023-24ನೇ ಸಾಲಿನ ಮಹತ್ವದ ಬಜೆಟ್‌ಗೆ ಕೌಂಟ್‌ಡೌನ್‌!

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೇರಬೇಕು ಎಂಬ ಪಣತೊಟ್ಟಿರುವ ಬಿಜೆಪಿ ಭಿನ್ನವಾದ ಕಸರತ್ತು ನಡೆಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಾವು ಮಂಡಿಸಲಿರುವ ಎರಡನೇ ಬಜೆಟ್‌ನಲ್ಲಿ ಎಲ್ಲ ಸಮುದಾಯದ ಮತದಾರರನ್ನು ಸೆಳೆಯುಲು ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.

ದೇಶದ ಗ್ರಾಮಗಳ ಅಭಿವೃದ್ಧಿಗೆ ಬರೋಬ್ಬರಿ 4,800 ಕೋಟಿ ಬಿಡುಗಡೆ! 

ಇಲ್ಲಿಯ ವರೆಗೆ ರೈತರಿಗೆ ಬಡ್ಡಿ ರಹಿತ ಸಾಲದ ಮಿತಿಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಲಾಗಿದೆ. ಇದರಲ್ಲಿ ಮೂರು

ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿರುವುದು ವಿಶೇಷವಾಗಿದೆ.

ಈ ಮೂಲಕ ರಾಜ್ಯದಲ್ಲಿ ಬಹುದೊಡ್ಡ ಮತದಾರರನ್ನು ಸೆಳೆಯಲು ಸರ್ಕಾರವು ಮುಂದಾಗಿದೆ.

 ನಿರ್ಣಾಯಕ ಮತದಾರರು ಎಂದು ಗುರುತಿಸಲಾಗಿರುವ ರೈತರನ್ನು ಗುರಿಯಾಗಿ ಇರಿಸಿಕೊಂಡು ಅವರ ಒಲವು ಗಿಟ್ಟಿಸಲು

ಈಗ ಇರುವ 3 ಲಕ್ಷದವರೆಗೆ ನೀಡಲಾಗುತ್ತಿರುವ ಶೂನ್ಯ ಬಡ್ಡಿದರದ ಸಾಲದ ಮೊತ್ತವನ್ನು

 5 ಲಕ್ಷಕ್ಕೆ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಈಗಾಗಲೇ ಹೇಳಲಾಗಿತ್ತು.

ಅದರಂತೆ ರಾಜ್ಯದ ಬಹುದೊಡ್ಡ ರೈತರಿಗೆ ಬೊಮ್ಮಾಯಿ ಮಿಠಾಯಿ ನೀಡಿದ್ದಾರೆ.   

ಎಲ್‌ಟಿಟಿಇ ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆಯೇ, ದಶಕದ ಹಿಂದೆಯೇ ಹತ್ಯೆ ಎಂಬ ಸುದ್ದಿ ಸುಳ್ಳೇ ?

ರಾಜ್ಯ ಬಜೆಟ್‌ನಲ್ಲಿ ಸರ್ಕಾರ ಘೋಷಣೆ ಮಾಡಿರುವ ಪ್ರಮುಖ ಮುಖ್ಯಾಂಶಗಳು ಈ ರೀತಿ ಇವೆ.

  • ರೈತರಿಗೆ ಈ ಹಿಂದೆ 3 ಲಕ್ಷ ರೂಪಾಯಿಯವರೆಗೆ ಬಡ್ಡಿ ರಹಿತ ಸಾಲವನ್ನು ನೀಡಲಾಗುತ್ತಿತ್ತು. ಇದೀಗ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ ಸೌಲಭ್ಯ ಸಿಗಲಿದೆ.
  •  ಕಿಸಾನ್ ಕಾರ್ಡ್ ಸೌಲಭ್ಯ ಇರುವ ರೈತರಿಗೆ ಭೂಸಿರಿ ಯೋಜನೆ
  •  ಗೃಹಿಣಿಯರಿಗೆ ತಿಂಗಳಿಗೆ  500 ರೂಪಾಯಿ ಸಹಾಯ ಧನ
  • ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
  •  ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ
  • ಮಹಿಳಾ ಸಂಘಟಿತ ಕಾರ್ಮಿಕರಿಗೂ ಉಚಿತ ಬಸ್ ಪಾಸ್
  • ನೇಕಾರ ಸಮ್ಮಾನ ಯೋಜನೆಯಡಿ ಸಹಾಯಧನ 3 ಸಾವಿರ ರೂಪಾಯಿಯಿಂದ 5 ಸಾವಿರಕ್ಕೆ ಹೆಚ್ಚಳ!   

ಇ-ಹರಾಜಿನಲ್ಲಿ 3.85 ಲಕ್ಷ ಮೆಟ್ರಿಕ್ ಟನ್ ಗೋಧಿ ಮಾರಾಟ: 901 ಕೋಟಿ ರೂ. ಆದಾಯ! 

Candy for farmers from Bommai: interest-free loan up to 5 lakh rupees for farmers!

ಇನ್ನು ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಲಾಗಿರುವ ಏಳನೇ ವೇತನ ಆಯೋಗದ ಅನುಷ್ಠಾನದತ್ತ  ಎಲ್ಲ ನೌಕರರ ವರ್ಗದವರು ಕಣ್ಣಿರಿಸಿದ್ದಾರೆ. ಇದರ ಮೇಲೆ ಇಡೀ ನೌಕರರ ವರ್ಗವೇ ನಿರೀಕ್ಷೆ ಇರಿಸಿದೆ.  

ವೇತನ ಆಯೋಗವು ವರದಿ ಸಲ್ಲಿಕೆ ಮಾಡಿದ ನಂತರದಲ್ಲಿ ಇದನ್ನು ಜಾರಿ ಮಾಡುವುದಕ್ಕೆ ಸರ್ಕಾರವು  10 ಸಾವಿರ ಕೋಟಿ ಅನುದಾನ ಮೀಸಲಿಡುವುದಾಗಿ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

ಅಲ್ಲದೇ ಸಾಂಪ್ರದಾಯಿಕ ವೃತ್ತಿ ಆಧಾರಿತ ಸಮುದಾಯದವರಿಗೆ ಪ್ರೋತ್ಸಾಹ ನೀಡಲು  50 ಸಾವಿರ ಸಹಾಯಧನ ನೀಡುವ ಬಗ್ಗೆಯೂ ಬೊಮ್ಮಾಯಿ ಪ್ರಕಟಿಸುವ ನಿರೀಕ್ಷೆ ಇದೆ.  

Gold-Silver Price Today ಚಿನ್ನದ ದರದಲ್ಲಿ ಯಥಾಸ್ಥಿತಿ, ಬೆಳ್ಳಿ ಬೆಲೆಯಲ್ಲಿ ಇಳಿಕೆ!