News

ನೆಹರು ಮೆಮೊರಿಯಲ್ ಮ್ಯೂಸಿಯಂನ ಹೆಸರನ್ನು ಬದಲಾಯಿಸಿದ ಕೇಂದ್ರ ಸರ್ಕಾರ

17 June, 2023 2:03 PM IST By: Maltesh
central government changed the name of the Nehru Memorial Museum

ನೆಹರೂ ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿ (Nehru memorial museum and library) ಸೊಸೈಟಿಯ ವಿಶೇಷ ಸಭೆಯಲ್ಲಿ, ಅದರ ಹೆಸರನ್ನು ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಬದಲಾಯಿಸಲು ನಿರ್ಧರಿಸಲಾಯಿತು. ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಗೆ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಲಾಗಿದೆ. ಈ ವಿಶೇಷ ಸಭೆಯ ಅಧ್ಯಕ್ಷತೆಯನ್ನು ಸೊಸೈಟಿಯ ಉಪಾಧ್ಯಕ್ಷರೂ ಆಗಿರುವ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ವಹಿಸಿದ್ದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2016 ರಲ್ಲಿ ನವದೆಹಲಿಯ ತೀನ್ ಮೂರ್ತಿ ಆವರಣದಲ್ಲಿ ಭಾರತದ ಎಲ್ಲಾ ಪ್ರಧಾನ ಮಂತ್ರಿಗಳಿಗೆ ಸಮರ್ಪಿತವಾದ ವಸ್ತುಸಂಗ್ರಹಾಲಯವನ್ನು ಸ್ಥಾಪಿಸುವ ಕಲ್ಪನೆಯನ್ನು ಪ್ರಸ್ತಾಪಿಸಿದ್ದರು. ಎನ್ ಎಂಎಂಎಲ್ ನ ಕಾರ್ಯಕಾರಿ ಮಂಡಳಿಯು 25-11-2016 ರಂದು ನಡೆದ ತನ್ನ 162 ನೇ ಸಭೆಯಲ್ಲಿ ತೀನ್ ಮೂರ್ತಿ ಎಸ್ಟೇಟ್ ನಲ್ಲಿ ಎಲ್ಲಾ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯವನ್ನು ನಿರ್ಮಿಸಲು ಅನುಮೋದನೆ ನೀಡಿತ್ತು. ಯೋಜನೆಯನ್ನು ಪೂರ್ಣಗೊಳಿಸಲಾಯಿತು ಮತ್ತು ಪ್ರಧಾನ ಮಂತ್ರಿ ಸಂಗ್ರಾಹಾಲಯವನ್ನು 2022 ರ ಏಪ್ರಿಲ್ 21ರಂದು ಸಾರ್ವಜನಿಕರ ಪ್ರವೇಶಕ್ಕೆ ತೆರೆಯಲಾಯಿತು.

Free Smartphones : ಮಹಿಳೆಯರಿಗೆ ಸ್ಮಾರ್ಟ್‌ ಫೋನ್‌ ಖರೀದಿಗೆ ಹಣ

ಸ್ವತಂತ್ರ ಭಾರತದಲ್ಲಿ ಪ್ರಜಾಪ್ರಭುತ್ವದ ಸಾಮೂಹಿಕ ಪ್ರಯಾಣವನ್ನು ಚಿತ್ರಿಸುವ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಪ್ರತಿಯೊಬ್ಬ ಪ್ರಧಾನ ಮಂತ್ರಿಯ ಕೊಡುಗೆಯನ್ನು ಬಿಂಬಿಸುವ ಸಂಗ್ರಾಹಾಲಯವನ್ನು ಒಳಗೊಂಡಿರುವ ಪ್ರಸ್ತುತ ಚಟುವಟಿಕೆಗಳನ್ನು ಸಂಸ್ಥೆಯ ಹೆಸರು ಪ್ರತಿಬಿಂಬಿಸಬೇಕು ಎಂದು ಕಾರ್ಯಕಾರಿ ಮಂಡಳಿಯು ನಂತರ ಭಾವಿಸಿತು. ನವೀಕರಿಸಿದ ನೆಹರೂ ವಸ್ತುಸಂಗ್ರಹಾಲಯ ಕಟ್ಟಡದಲ್ಲಿ ಪ್ರಾರಂಭವಾಗುತ್ತದೆ.

ಪೋಷಕರೇ ಗಮನಿಸಿ: ವಿದ್ಯಾಭ್ಯಾಸಕ್ಕೆ 4 ಲಕ್ಷದ ವರೆಗೆ ಸಾಲ..ಯಾರೆಲ್ಲಾ ಅರ್ಹರು?

ಈಗ ಶ್ರೀ ಜವಾಹರಲಾಲ್ ನೆಹರು ಅವರ ಜೀವನ ಮತ್ತು ಕೊಡುಗೆಯ ತಾಂತ್ರಿಕವಾಗಿ ಸುಧಾರಿತ ಪ್ರದರ್ಶನಗಳೊಂದಿಗೆ ಸಂಪೂರ್ಣವಾಗಿ ನವೀಕರಿಸಲಾಗಿದೆ. ಹೊಸ ಕಟ್ಟಡದಲ್ಲಿ ನೆಲೆಗೊಂಡಿರುವ ಈ ವಸ್ತುಸಂಗ್ರಹಾಲಯವು ನಮ್ಮ ಪ್ರಧಾನ ಮಂತ್ರಿಗಳು ವಿವಿಧ ಸವಾಲುಗಳ ಮೂಲಕ ರಾಷ್ಟ್ರವನ್ನು ಹೇಗೆ ಮುನ್ನಡೆಸಿದರು ಮತ್ತು ದೇಶದ ಸರ್ವತೋಮುಖ ಪ್ರಗತಿಯನ್ನು ಹೇಗೆ ಖಚಿತಪಡಿಸಿದರು ಎಂಬ ಕಥೆಯನ್ನು ಹೇಳುತ್ತದೆ. ಹೀಗಾಗಿ, ಇದು ಎಲ್ಲಾ ಪ್ರಧಾನ ಮಂತ್ರಿಗಳನ್ನು ಗುರುತಿಸುತ್ತದೆ, ಆ ಮೂಲಕ ಸಾಂಸ್ಥಿಕ ಸ್ಮರಣೆಯನ್ನು ಪ್ರಜಾಪ್ರಭುತ್ವಗೊಳಿಸುತ್ತದೆ.

ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾದ ಶ್ರೀ ನೃಪೇಂದ್ರ ಮಿಶ್ರಾ ಅವರು ತಮ್ಮ ಸ್ವಾಗತ ಭಾಷಣದಲ್ಲಿ, ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯವು ಪ್ರಜಾಪ್ರಭುತ್ವಕ್ಕೆ ರಾಷ್ಟ್ರದ ಆಳವಾದ ಬದ್ಧತೆಯನ್ನು ವ್ಯಕ್ತಪಡಿಸುತ್ತದೆ ಮತ್ತು ಆದ್ದರಿಂದ ಸಂಸ್ಥೆಯ ಹೆಸರು ಅದರ ಹೊಸ ರೂಪವನ್ನು ಪ್ರತಿಬಿಂಬಿಸಬೇಕು ಎಂದು ಒತ್ತಿಹೇಳುವ ಮೂಲಕ ಹೆಸರು ಬದಲಾವಣೆಯ ಅಗತ್ಯವನ್ನು ವಿವರಿಸಿದರು.