1. ಸುದ್ದಿಗಳು

ರಾಜ್ಯದಲ್ಲಿ ಮತ್ತೆ 39 ಸಾವಿರ ಹೊಸ ಕೊರೊನಾ ಕೇಸ್.. 480 ಮಂದಿ ಬಲಿ

ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖ ಕಂಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 39510 ಮಂದಿಗೆ ಹೊಸ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು 480 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸತ್ತವರ ಸಂಖ್ಯೆ 19852 ಕ್ಕೆ ಹೆಚ್ಚಳವಾಗಿದೆ.

ಆಸ್ಪತ್ರೆಯಿಂದ 22584 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 1405869 ಮಂದಿ ಮನೆಗೆ ತೆರಳಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 587452ರಷ್ಷಿದೆ. ಒಟ್ಟು ಖಚಿತ ಪ್ರಕರಣಗಳ ಸಂಖ್ಯೆ 2013193 ಏರಿದೆ.
ಬೆಂಗಳೂರಿನಲ್ಲಿ ಇಂದು 259 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 8690 ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 15,879 ಮಂದಿಗೆ ಸೋಂಕು ತಗುಲಿದ್ದು ಒಟ್ಟು ಸೋಂಕಿತರ ಸಂಖ್ಯೆ 983519ಕ್ಕೆ ಹೆಚ್ಚಳವಾಗಿದೆ.
ಬಾಗಲಕೋಟೆ 676, ಬಳ್ಳಾರಿ 1558, ಬೆಳಗಾವಿ 755, ಬೆಂಗಳೂರು ಗ್ರಾಮಾಂತರ 688, ಬೆಂಗಳೂರು ನಗರ 15,879, ಬೀದರ್ 158, ಚಾಮರಾಜನಗರ 411, ಚಿಕ್ಕಬಳ್ಳಾಪುರ 609, ಚಿಕ್ಕಮಗಳೂರು 537, ಚಿತ್ರದುರ್ಗ 193, ದಕ್ಷಿಣ ಕನ್ನಡ 915, ದಾವಣಗೆರೆ 212, ಧಾರವಾಡ 740, ಗದಗ 456, ಹಾಸನ 654, ಹಾವೇರಿ 465, ಕಲಬುರಗಿ 971, ಕೊಡಗು 892, ಕೋಲಾರ 913, ಕೊಪ್ಪಳ 414, ಮಂಡ್ಯ 1359, ಮೈಸೂರು 2170, ರಾಯಚೂರು 763, ರಾಮನಗರ ,440, ಶಿವಮೊಗ್ಗ 1108, ತುಮಕೂರು 2496, ಉಡುಪಿ 1,083 ಉತ್ತರ ಕನ್ನಡ 1,084, ವಿಜಯಪುರ 485 ಮತ್ತು ಯಾದಗಿರಿಯಲ್ಲಿ 426 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

ಇನ್ನು ಬೆಂಗಳೂರು ಹೊರತುಪಡಿಸಿದರೆ, ರಾಜ್ಯದಲ್ಲಿ ಒಂದೇ ದಿನ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣ ತುಮಕೂರಿನಲ್ಲಿ ವರದಿಯಾಗಿದೆ. ತುಮಕೂರಿನಲ್ಲಿ ಮಂಗಳವಾರ ಒಂದೇ ದಿನ 2,496 ಮಂದಿಗೆ ಕೊರೊನಾ ತಗುಲಿದೆ. ಮೈಸೂರಿನಲ್ಲಿ 2,170 ಮಂದಿಗೆ ಮಂಗಳವಾರ ಕೊರೊನಾ ದೃಢಪಟ್ಟಿದೆ.

ಇನ್ನುಳಿದಂತೆ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಮಂಡ್ಯ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಂದೇ ದಿನ ಸಾವಿರಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ದಕ್ಷಿಣ ಕನ್ನಡ, ಕಲಬುರಗಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಹೊಸ ಸೋಂಕಿತರ ಪ್ರಮಾಣ ಸಾವಿರದ ಸನಿಹದಲ್ಲಿದೆ.

Published On: 11 May 2021, 09:39 PM English Summary: covid-19 karnataka 39510 new cases

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.