News

ಬೆಳೆ ವಿಮೆ ಸಮೀಕ್ಷೆ ಆಕ್ಷೇಪಣೆ ಸಲ್ಲಿಸಲು ನ. 10ರವರೆಗೆ ಅವಕಾಶ

06 November, 2020 9:05 AM IST By:

ಹಾವೇರಿ ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಲಾದ ಬೆಳೆ ಮಾಹಿತಿ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು ನ.10ರವರೆಗೆ ಅವಕಾಶ ಕಲ್ಪಿಸಲಾಗಿದೆ. ರೈತರು ಬೆಳೆ ಮಾಹಿತಿ/ ವಿಸ್ತೀರ್ಣದ ಮಾಹಿತಿ ಕುರಿತು ‘ಬೆಳೆ ದರ್ಶಕ’ ಮೊಬೈಲ್ ಆ್ಯಪ್ ಮೂಲಕ ಆಕ್ಷೇಪಣೆ ಸಲ್ಲಿಸಬಹುದು.

ತಾವು ಬೆಳೆದ ಬೆಳೆ ಹಾಗೂ ಬೆಳೆ ಸಮೀಕ್ಷೆಯಲ್ಲಿ ದಾಖಲಾದ ಬೆಳೆಯು ಒಂದೇ ಇರುವ ಕುರಿತು ಬೆಳೆ ದರ್ಶಕ ಮೊಬೈಲ್ ಆ್ಯಪ್ ಮೂಲಕ ಖಾತರಿ ಪಡಿಸಿಕೊಳ್ಳ ಬೇಕು. ಒಂದು ವೇಳೆ ಭಿನ್ನವಾಗಿದ್ದಲ್ಲಿ, ಆಕ್ಷೇಪಣೆಗಳನ್ನು ನಿಗದಿತ ಕಾಲಾವಧಿಯಲ್ಲಿ ಸಲ್ಲಿಸಬಹುದು.

ಬೆಳೆ ದರ್ಶಕ್‌ ಆ್ಯಪ್‌ ವಿಶೇಷತೆ:

ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಾಗಿರುವ ಬೆಳೆ ವಿವರ, ವಿಸ್ತೀರ್ಣದ ಮಾಹಿತಿ ಮತ್ತು ಬೆಳೆ ಸಮೀಕ್ಷೆ ಸಮಯದಲ್ಲಿ ನಿಮ್ಮ ಜಮೀನಿನಲ್ಲಿ ತೆಗೆದ ಜಿಪಿಎಸ್‌ ಆಧಾರಿತ ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ಬೆಳೆ ಸಮೀಕ್ಷೆ ಮಾಡಿದವರ ಹೆಸರು, ಮೊಬೈಲ್‌ ಸಂಖ್ಯೆ ಪಡೆಯಬಹುದು. ಅಲ್ಲದೆ, ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ಅಂಗೀಕರಿಸಿದ್ದಾರೋ, ಇಲ್ಲವೋ ಎಂದು ಷರಾ ಕಾಲಂನಲ್ಲಿ ತಿಳಿದು ಬೆಳೆ ಸಮೀಕ್ಷೆ ವಿವರ ತಪ್ಪಾಗಿ ದಾಖಲಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಬಹುದು. ಮೇಲ್ವಿಚಾರಣೆ ಮಾಡುವ ಸರ್ಕಾರಿ ಅಧಿಕಾರಿಗಳು ಆಕ್ಷೇಪಣೆ ಕುರಿತು ಏನು ಕ್ರಮಕೈಗೊಂಡಿದ್ದಾರೆ ಎಂದು ತಿಳಿಯಬಹುದು.

  ರೈತರು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ರೈತರು ಕೃಷಿ ಇಲಾಖೆ, ಕಂದಾಯ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು.