News

ಜುಲೈ ತಿಂಗಳ ಪಡಿತರದಾರರಿಗೆ ಆಹಾರ ಧಾನ್ಯ ವಿತರಣೆ

02 July, 2021 9:13 PM IST By:

ಕೋವಿಡ್-19ರ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎನ್.ಎಫ್.ಎಸ್.ಎ. ಹಾಗೂ ಪಿ.ಎಂ.ಜಿ.ಕೆ.ಎ.ವೈ. ಹಂಚಿಕೆಯಡಿ 2021ರ ಜುಲೈ ಮಾಹೆಯಲ್ಲಿ ಕಲಬುರಗಿ ಜಿಲ್ಲೆಯ ಎಎವೈ/ ಅಂತ್ಯೋದಯ ಅನ್ನ, ಪಿ.ಹೆಚ್.ಹೆಚ್./ ಆದ್ಯತಾ ಹಾಗೂ ಎ.ಪಿ.ಎಲ್. (ಆದ್ಯತೇತರ) ಪಡಿತರ ಚೀಟಿ ಕಾರ್ಡುದಾರರಿಗೆ ಈ ಕೆಳಗಿನಂತೆ ಪಡಿತರ ಆಹಾರಧಾನ್ಯಗಳನ್ನು ವಿತರಿಸಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿಗಳಾದ ವಿ.ವಿ. ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲಿ ಕೋವಿಡ್-19 ನಿಯಮಗಳನ್ನು ಪಾಲಿಸಿ, ಜನದಟ್ಟಣೆ ಉಂಟಾಗದAತೆ ಸಾಮಾಜಿಕ ಅಂತರ ಕಾಯ್ದುಕೊಂಡು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಪಡಿತರ ಆಹಾರ ಧಾನ್ಯವನ್ನು ಪಡೆಯಬೇಕೆಂದು ಡಿ.ಸಿ. ಅವರು ಮನವಿ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ 63,459 ಎಎವೈ ಪಡಿತರ ಚೀಟಿಗಳ 2,64,260 ಸದಸ್ಯರಿಗೆ ಮತ್ತು 4,89,100 ಪಿ.ಎಚ್.ಎಚ್. ಪಡಿತರ ಚೀಟಿಗಳ 16,60,428 ಸದಸ್ಯರಿಗೆ ಹಾಗೂ 18,263 ಎ.ಪಿ.ಎಲ್. (ವಿಲ್ಲಿಂಗ್‌ನೆಸ್) ಪಡಿತರ ಕಾರ್ಡುದಾರರಿಗೆ ಈ ಕೆಳಗಿನಂತೆ ಪಡಿತರ ಚೀಟಿಯನ್ನು ವಿತರಿಸಲಾಗುತ್ತಿದೆ.

ಎವೈ/ ಅಂತ್ಯೋದಯ ಅನ್ನ: ಎನ್.ಎಫ್.ಎಸ್.ಎ. ಯೋಜನೆಯಡಿ  ಪ್ರತಿ ಪಡಿತರ ಚೀಟಿ ಸದಸ್ಯರಿಗೆ 20 ಕೆ.ಜಿ. ಜೋಳ, 15 ಕೆ.ಜಿ. ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ. ಯೋಜನೆಯಡಿ ಪ್ರತಿ ಪಡಿತರ ಚೀಟಿ ಸದಸ್ಯರಿಗೆ 5 ಕೆ.ಜಿ ಅಕ್ಕಿ  ಉಚಿತವಾಗಿ ವಿತರಿಸಲಾಗುತ್ತದೆ. ಪಿ.ಹೆಚ್.ಹೆಚ್./ ಆದ್ಯತಾ: ಎನ್.ಎಫ್.ಎಸ್.ಎ. ಯೋಜನೆಯಡಿ ಪ್ರತಿ ಪಡಿತರ ಚೀಟಿ ಸದಸ್ಯರಿಗೆ 3 ಕೆ.ಜಿ. ಜೋಳ, 2 ಕೆ.ಜಿ ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ. ಯೋಜನೆಯಡಿ ಪ್ರತಿ ಪಡಿತರ ಚೀಟಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಸೇರಿದಂತೆ ಪ್ರತಿ ಸದಸ್ಯರಿಗೆ ಒಟ್ಟು 7 ಕೆ.ಜಿ. ಅಕ್ಕಿ ಹಾಗೂ 3 ಕೆ.ಜಿ. ಜೋಳ ವಿತರಿಸಲಾಗುತ್ತದೆ. ಇದಲ್ಲದೇ ಪ್ರತಿ ಪಡಿತರ ಚೀಟಿಗೆ 2 ಕೆ.ಜಿ. ಗೋಧಿ ಸಹ ಉಚಿತವಾಗಿ ವಿತರಿಸಲಾಗುತ್ತದೆ.

      ಎಪಿಎಲ್ /ಆದ್ಯತೇತರ (Willingness):  ಏಕಸದಸ್ಯ ಇರುವ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ  ಮತ್ತು ಒಂದಕ್ಕಿAತ ಹೆಚ್ಚು ಸದಸ್ಯರಿರುವ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿಯನ್ನು ಪ್ರತಿ ಕೆ.ಜಿ.ಗೆ ದರ 15 ರೂ. ರಂತೆ ವಿತರಿಸಲಾಗುತ್ತದೆ.   ಅಂತರರಾಜ್ಯ/ ಅಂತರ್‌ಜಿಲ್ಲೆ ಪೋರ್ಟೆಬಿಲಿಟಿ (Portability): ಅಂತರರಾಜ್ಯ/ ಅಂತರ್‌ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸ್ವಯಂ ಉದ್ಯೋಗ ಹಾಗೂ ಕಿರು ಉತ್ಪನ್ನ ಉದ್ಯಮಗಳಿಗೆ ಯಂತ್ರೋಪಕರಣ ಒದಗಿಸುವ ಯೋಜನೆಯಡಿ ಅರ್ಜಿ ಆಹ್ವಾನ

ಕಲಬುರಗಿಯ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ 2020-21ನೇ ಸಾಲಿನ ಕ್ರಿಯಾ ಯೋಜನೆಯ ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದಡಿಯಲ್ಲಿ ಸ್ವಯಂ ಉದ್ಯೋಗ/ ಕಿರು ಉತ್ಪನ್ನ ಉದ್ಯಮಗಳಿಗೆ ಸಂಬAಧಿಸಿದ ಯಂತ್ರೋಪಕರಣಗಳನ್ನು ಒದಗಿಸುವ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ವಿಭಾಗದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಆಸಕ್ತರು   ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ www.kkhracs.com ವೆಬ್‌ಸೈಟ್‌ದಿಂದ ಯೋಜನೆಗಳ ವಿವರಗಳನ್ನು ಪಡೆದು  2021ರ ಜುಲೈ 12ರ ಸಂಜೆ 5 ಗಂಟೆಯೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಘದ ವೆಬ್‌ಸೈಟ್‌ನ್ನು ಸಂಪರ್ಕಿಸಲು ಕೋರಲಾಗಿದೆ.