1. ಸುದ್ದಿಗಳು

ಪೊಲೀಸರ ಮೇಲೆ ರೌಡಿ ಶೀಟರ್ ದಾಳಿ -ಕಾನ್ಪುರದಲ್ಲಿ ಡಿವೈಎಸ್ಪಿ ಸೇರಿ 8 ಪೊಲೀಸರು ಹುತಾತ್ಮ

ಉತ್ತರ ಪ್ರದೇಶದಲ್ಲಿ ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆಯನ್ನು ಪತ್ತೆಹಚ್ಚಲು ಬಿಕಾರು ಗ್ರಾಮಕ್ಕೆ ಹೋಗಿದ್ದ ಪೊಲೀಸ್ ತಂಡದ ಮೇಲೆ ಆರೋಪಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ  ಡಿವೈಎಸ್ಪಿ ದೇವೇಂದ್ರ ಮಿಶ್ರಾ ಸೇರಿದಂತೆ 8 ಮಂದಿ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ದಾಳಿ ನಡೆದಿದ್ದು, ಇತರ 7 ಮಂದಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

60 ಅಪರಾಧ ಕೃತ್ಯಗಳ ಆರೋಪಿಯಾಗಿರುವ ವಿಕಾಸ್ ದುಬೆಯನ್ನು ಬಂಧಿಸಲು ಹುಡುಕಾಟ ನಡೆಸುತ್ತಿದ್ದಾಗ ಕಟ್ಟಡವೊಂದರ ಮೇಲೆ ಅವಿತು ಕುಳಿತಿದ್ದ  ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಈ ದಾಳಿ ಸಮಯದಲ್ಲಿ ಸ್ಥಳದಲ್ಲಿ ಎಎಸ್ ಪಿ ಮತ್ತು ಪೊಲೀಸ್ ಮಹಾ ನಿರ್ದೇಶಕರಿದ್ದು, ವಿಧಿ ವಿಜ್ಞಾನ ತಂಡದವರು ಪ್ರದೇಶವನ್ನು ತಪಾಸಣೆ ನಡೆಸುತ್ತಿದ್ದಾರೆ.ಹುತಾತ್ಮ ಪೊಲೀಸ್ ಸಿಬ್ಬಂದಿಯಲ್ಲಿ  ಡಿವೈಎಸ್ಪಿ ದೇವೇಂದ್ರ ಮಿಶ್ರಾಮೂವರು ಎಸ್ಐಗಳು ಮತ್ತು ನಾಲ್ವರು ಕಾನ್ಸ್ಟೆಬಲ್ಗಳಿದ್ದಾರೆ.

ಹುತಾತ್ಮ ಪೊಲೀಸರನ್ನು ಸಿಒ ದೇವೇಂದ್ರ ಕುಮಾರ್ ಮಿಶ್ರಾ, ಎಸ್ಒ ಮಹೇಶ್ ಯಾದವ್, ಚೌಕಿ ಉಸ್ತುವಾರಿ ಅನೂಪ್ ಕುಮಾರ್, ಸಬ್ ಇನ್ಸ್ ಪೆಕ್ಟರ್ ನೆಬುಲಾಲ್, ಕಾನ್ಸ್ಟೇಬಲ್ ಸುಲ್ತಾನ್ ಸಿಂಗ್, ರಾಹುಲ್, ಜಿತೇಂದ್ರ ಮತ್ತು ಬಬ್ಲು ಎಂದು ಗುರುತಿಸಲಾಗಿದೆ.
ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ

ವರದಿ ಕೇಳಿದ ಸಿಎಂ ಯೋಗಿ ಆದಿತ್ಯನಾಥ್: ಕಾನ್ಪುರದಲ್ಲಿ ನಡೆದ ದಾಳಿಯಲ್ಲಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಕ್ರಿಮಿನಲ್ ಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿರುವ ಅವರು ಘಟನೆ ಬಗ್ಗೆ ಡಿಜಿಪಿ ಹೆಚ್ ಸಿ ಅವಸ್ತಿ ಅವರಲ್ಲಿ ವರದಿ ಕೇಳಿದ್ದಾರೆ.

Published On: 03 July 2020, 01:01 PM English Summary: Eight policemen killed in encounter with criminals near Kanpur

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.