ಹೈನುಗಾರಿಕೆಗೆ ಉಚಿತ ತರಬೇತಿ ನೀಡಲು ರೈತರಿಂದ ಅರ್ಜಿ ಆಹ್ವಾನ
ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ 10ದಿನ ಉಚಿತ ಹೈನುಗಾರಿಕೆ ತರಬೇತಿಯನ್ನು ಆಯೋಜಿಸಲಾಗಿದೆ.
ಆಸಕ್ತಿಯುಳ್ಳವರು ಕನಿಷ್ಠ 7 ನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದಿರಬೇಕು. 18 ರಿಂದ 45 ವಯೋಮಾನದವರಿರಬೇಕು.
ತರಬೇತಿ ಅವಧಿಯಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯವಿರುತ್ತದೆ. ತರಬೇತಿಯ ಉದ್ದೇಶ ಯುವತಿಯರು ಸ್ವ-ಉದ್ಯೋಗದ ಮೂಲಕ ಆರ್ಥಿಕ ಸಬಲತೆ ಸಾಧಿಸುವುದಾರುತ್ತದೆ.
ಆಸಕ್ತರು ತಮ್ಮ ಇತ್ತೀಚಿನ 3 ಭಾವಚಿತ್ರಗಳು, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾನ್ ಕಾರ್ಡ್, ಹಾಗೂ ಅಂಕ ಪಟ್ಟಿಯ ನಕಲು ಪ್ರತಿಯೊಂದಿಗೆ ನೇರವಾಗಿ ಅಭ್ಯರ್ಥಿಗಳು ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸಿ ತಮ್ಮ ಹೆಸರನ್ನು ತರಬೇತಗೆ ನೊಂದಾಯಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ಎ.ಡಿ.ಪೈ ಅಭಿವೃದ್ಧಿ ಸಂಸ್ಥೆ ಬೆಂಗಳೂರು –ಮೈಸೂರು ಹೆದ್ದಾರಿ ಯ ವಾಜರಹಳ್ಳಿ, ಬಿಡದಿ ಹೋಬಳಿ, ರಾಮನಗರ ಅಥವಾ ತರಬೇತಿ ಸಂಯೋಜಕರು ಮೊ. 9591752123 ಗೆ ಸಂಪರ್ಕಿಸಬಹುದು.
ನಮ್ಮ ಪತ್ರಿಕೆಯ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಭಾರತದ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಅಲ್ಪ ಕೊಡುಗೆಯೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
Share your comments