News

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೋರ್ವೆಲ್ ಕೊರೆಸಲು ಸಹಾಯಧನ ನೀಡಲು ಅರ್ಜಿ ಆಹ್ವಾನ

26 November, 2020 8:50 AM IST By:

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರ ಖುಷ್ಕಿ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ವೈಯಕ್ತಿಕ ನೀರಾವರಿ ಕೊಳವೆಬಾವಿ / ತೆರೆದಬಾವಿ ಮತ್ತು ಏತ ನೀರಾವರಿಗಾಗಿ ಸಾಲ ಸೌಲಭ್ಯ ನೀಡಲಾಗುವುದು

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೋರ್ ವೆಲ್ ಗಳನ್ನು ಹಾಕಲು ಸಬ್ಸಿಡಿ ದರದಲ್ಲಿ ಸಾಲ ಸೌಲಭ್ಯ ನೀಡಲಿದೆ. ಅರ್ಹ ಫಲಾನುಭವಿಗಳಿಂದ ಅರ್ಜಿ  ಆಹ್ವಾನಿಸಿದೆ, ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅಲ್ಪಸಂಖ್ಯಾತ  ರೈತರು  ಮಾತ್ರ ಅರ್ಹರಾಗುತ್ತಾರೆ.

 ಹಾಗಾಗಿ ಆಸಕ್ತಿಯುಳ್ಳ ರೈತರು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು, ಹಾಗೂ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 10- 12- 2020, ಆಗಿದೆ. ಅರ್ಜಿಯನ್ನು ಸಲ್ಲಿಸಿದ ನಂತರ ಎಲ್ಲ ಡಾಕ್ಯುಮೆಂಟ್ ಗಳನ್ನು ಕಚೇರಿಯಲ್ಲಿ ಸಲ್ಲಿಸಬೇಕಾಗುತ್ತದೆ.

 ಆನ್ ಲೈನ್ ಅರ್ಜಿಯನ್ನು ಸಲ್ಲಿಸುವುದು ಹೇಗೆ?

- ಗೂಗಲ್ನಲ್ಲಿ http://kmdc.karnataka.gov.in ಟೈಪ್ ಮಾಡಿ ಹಾಗೂ ಸರ್ಚ್  ಮಾಡಿ

- ನಿಮಗೆ kmdc ವೆಬ್ ಸೈಟಿನ ಹೋಂ ಪೇಜ್ ಓಪನ್ ಆಗುತ್ತದೆ.

- ಅಲ್ಲಿ ಗಂಗಾ ಕಲ್ಯಾಣ್  ಎಂಬ ಆಪ್ಷನ್ ಅನ್ನು ಆಯ್ಕೆ ಮಾಡಿ

- ಆನ್ಲೈನ್ ಮೂಲಕ ಎಲ್ಲಾ ಅರ್ಜಿಯನ್ನು ಭರ್ತಿ ಮಾಡಿ ಹಾಗೂ ಸಬ್ಮಿಟ್ ಮಾಡಿ.

 ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 10 ಹಾಗೂ ಅರ್ಜಿಯನ್ನು ಸಲ್ಲಿಸಿದ ನಂತರ ಡಾಕ್ಯುಮೆಂಟ್ ಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 21.