1. ಸುದ್ದಿಗಳು

ಇಂದಿನಿಂದ ದೇಶದ 10 ರಾಜ್ಯಗಳಲ್ಲಿ ಮಳೆ ಸಾಧ್ಯತೆ

ಕಳೆದ ವಾರ ಬಿಡುವು ನೀಡಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳುವ ಸಾಧ್ಯತೆಯಿದೆ. ಪಂಜಾಬ್, ರಾಜಸ್ಥಾನ, ತಮಿಳುನಾಡು, ಪುದಚೆರಿ, ಬಿಹಾರ, ಪಶ್ಚಿಮಬಂಗಾಳ ,ಕರ್ನಾಟಕದ ಕರಾವಳಿ ದಕ್ಷಿಣ ಮತ್ತು ಒಳನಾಡು ಪ್ರದೇಶಗಳಲ್ಲಿ ಮಂಗಳಾವಾರ ಭಾರಿಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ತಿಂಗಳು  ಸುರಿದ ಮಳೆಯಿದಾಗಿ ಅಸ್ಸಾಂ, ಬಿಹಾರ, ಕರ್ನಾಟಕ ಸೇರಿದಂತೆ ವಿವಿಧೆಡೆ ಪ್ರವಾಹದ ಆತಂಕ ಸೃಷ್ಟಿಸಿತ್ತು. ಅಸ್ಸಾಂನಲ್ಲಿ ಭೀಕರ ಪ್ರವಾಹ ಬಂದು ಅಪಾರ ಪ್ರಮಾಣ ಆಸ್ತಿ,ಪಾಸ್ತಿ, ಬೆಳೆ ಹಾನಿಯಾಗಿತ್ತು.  ಸೆಪ್ಚೆಂಬರ್ ತಿಂಗಳ ಮೊದಲ ದಿನದಿಂದಲೇ ಮತ್ತೆಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗಲಿದೆ.ಇನ್ನೂ ಕೆಲವು ರಾಜ್ಯಗಳಲ್ಲಿ ಸೆ.4 ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೋಮವಾರ ಸುರಿದ ಭಾರಿ ಮಳೆಗೆ ಮಹಾರಾಷ್ಟ್ರದ ವಿದರ್ಭ ಪ್ರದೇಶದ ಹಲವು ಗ್ರಾಮಗಳು ಜಲಾವೃತ್ತವಾಗಿವೆ. ಗುಜರಾತಿನ ಹಲವು ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಗಳಲ್ಲಿ ಗಂಗಾನದಿಯತೀರದಲ್ಲಿ ಮಣ್ಣಿನ ಸವೆತದಿಂದಾಗಿ 50ಕ್ಕೂ ಹೆಚ್ಚು ಮನೆಗಳು ಕೊಚ್ಚಿಕೊಂಡು ಹೋಗಿವೆ.

Published On: 01 September 2020, 09:03 AM English Summary: Heavy rain alert in india

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.