1. ಸುದ್ದಿಗಳು

ಆ.4 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ-ಆರೇಂಜ್ ಅಲರ್ಟ್

Heavy cloud

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 31ರಿಂದ ಆಗಸ್ಟ್ 4ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆ(Heavyrain)ಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆ.4ರವರೆಗೂ ಆರೆಂಜ್ ಅಲರ್ಟ್ (orange alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ರಾಜ್ಯದ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ (yellow alert) ಘೋಷಿಸಲಾಗಿದೆ.

ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 3.3 ಮೀಟರ್ ಗಳಷ್ಟು ಎತ್ತರದ ಅಲೆಗಳೂ ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

Published On: 31 July 2020, 08:49 AM English Summary: Heavy rain in coastal karnataka orange alert until august 4

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.