1. ಸುದ್ದಿಗಳು

Heavy rain ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Hitesh
Hitesh
Heavy rain likely in various districts of the state: Meteorological Department report

Weather Report ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗದಲ್ಲಿ ಮಳೆ ಮುಂದುವರಿದಿದೆ.

ಕಳೆದ 24 ಗಂಟೆಗಳಲ್ಲಿ ಒಳನಾಡಿನ ಕೆಲವು ಕಡೆಗಳಲ್ಲಿ (Rain) ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಇತ್ತು. ಇನ್ನು ಬೆಂಗಳೂರಿನ ಯಲಹಂಕದಲ್ಲಿ 7 ಸೆಂ.ಮೀ ಮಳೆ (Rain)ಆಗಿದೆ.

ಮುಂದಿನ 24 ಗಂಟೆಗಳು

ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಕಲಬುರಗಿ, ರಾಯಚೂರು,

ಯಾದಗಿರಿ, ಕೊಪ್ಪಳ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 24 ಗಂಟೆ: ಮುಂದಿನ 24 ಗಂಟೆಯಲ್ಲಿ ರಾಜ್ಯದ ವಿವಿಧ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು

ಭಾರತೀಯ ಹವಾಮಾನ ಇಲಾಖೆ (India Meteorological Department) ಮುನ್ಸೂಚನೆ ನೀಡಿದೆ.

ಅದರಲ್ಲಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ,

ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ವಿವಿಧ ಭಾಗದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ.

ಇನ್ನು ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ:

ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚುಗುಡುಗು ಸಾಧ್ಯತೆ ಇದೆ.

ತಾಪಮಾನದ ಎಚ್ಚರಿಕೆ

ಕರಾವಳಿಯ ಕೆಲವು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮಳೆ ಮುನ್ನೆಚ್ಚರಿಕೆ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಸಾಧಾರಣ ಅಥವಾ ಮಿಂಚು ಗುಡುಗು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.

ಒಮ್ಮೊಮ್ಮೆ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.  

ಕಳೆದ 24 ಗಂಟೆಗಳಲ್ಲಿ ಮಳೆಯ ಪ್ರಮಾಣ (Rain) (ಸೆಂ.ಮೀನಲ್ಲಿ): ಯಡ್ರಾಮಿ(ಕಲಬುರಗಿ ಜಿಲ್ಲೆ),ಭಾಲ್ಕಿ (ಬೀದರ್‌) ತಲಾ 5; ಹುಮನಾಬಾದ್ (ಬೀದರ್‌),ಕಲಬುರಗಿ,

ಪೊನ್ನಂಪೇಟೆ (ಕೊಡಗು ಜಿಲ್ಲೆ), ತೋಂಡೆಭಾವಿ,ಗೌರಿಬಿದನೂರು (ಎರಡೂ ಚಿಕ್ಕಳ್ಳಾಪುರಜಿಲ್ಲೆ) ತಲಾ 4; ರಾಯಚೂರು, ಗಂಗಾವತಿ (ಕೊಪ್ಪಳ ಜಿಲ್ಲೆ), ಸಿರುಗುಪ್ಪ (ಬಳ್ಳಾರಿ ಜಿಲ್ಲೆ),

ಬೆಂಗಳೂರು ನಗರ, ಜಿಕೆವಿಕೆ (ಬೆಂಗಳೂರು ನಗರ ಜಿಲ್ಲೆ), ಭದ್ರಾವತಿ (ಶಿವಮೊಗ್ಗಜಿಲ್ಲೆ) ತಲಾ 3 ಸೆಂ.ಮೀ; ಕೂಡಲಸಂಗಮ(ಬಾಗಲಕೋಟೆ ಜಿಲ್ಲೆ),

ಕಮಲಾಪುರ (ಕಲಬುರಗಿ ಜಿಲ್ಲೆ), ಗಂಗಾವತಿ ARG (ಕೊಪ್ಪಳ ಜಿಲ್ಲೆ), ಮುದ್ಗಲ್(ರಾಯಚೂರು ಜಿಲ್ಲೆ), ಬೀದರ್‌, ಬೆಂಗಳೂರು

ಕೆಐಎಎಲ್ ವಿಮಾನ ನಿಲ್ದಾಣ ಸೇರಿದಂತೆ ವಿವಿಧೆಡೆ 2 ಸೆಂ.ಮೀ ಮಳೆ ಆಗಿರುವುದು (Rain) ವರದಿ ಆಗಿದೆ.  

ಮುಂದಿನ 48 ಗಂಟೆಗಳು
ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಕಲಬುರಗಿ, ರಾಯಚೂರು,

ಯಾದಗಿರಿ, ಕೊಪ್ಪಳ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು

ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಹೆಚ್ಚಾಗಿದೆ. 

Pic Credits: Pexels

Published On: 02 May 2023, 10:35 AM English Summary: Heavy rain likely in various districts of the state: Meteorological Department report

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.