News

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ; ಹವಾಮಾನ ಇಲಾಖೆಯಿಂದ ಅತಿ ಹೆಚ್ಚು ಮಳೆಯಾಗುವ ಸೂಚನೆ!

12 July, 2022 10:01 AM IST By: Kalmesh T
Heavy rains in Karnataka; Warning from IMD

ಕಳೆದ ಕೆಲದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯ ನಡುವೆಯೇ ಭಾರತೀಯ ಹವಾಮಾನ ಇಲಾಖೆ ಇನ್ನೂ ಅತಿ ಹೆಚ್ಚು ಮಳೆಯಾಗುವ ಕುರಿತು ಸೂಚನೆ ನೀಡಿದೆ.

ಇದನ್ನೂ ಓದಿರಿ: ರೈತರಿಗೆ ಗುಡ್‌ನ್ಯೂಸ್‌: 10 ಸಾವಿರ ಸೌರಶಕ್ತಿ ಚಾಲಿತ ಕೃಷಿ ಪಂಪ್‌ಸೆಟ್ ವಿತರಿಸಲು ರಾಜ್ಯ ಸರ್ಕಾರ ನಿರ್ಧಾರ!

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಭಾಗದಲ್ಲಿ ಪ್ರತ್ಯೇಕ ಭಾರಿ ಮಳೆಯಾಗುವ ಸಾಧ್ಯತೆಯಿದೆ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದಲ್ಲದೆ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

ಬ್ರೇಕಿಂಗ್‌: ಉಚಿತ ಪಡಿತರ ಯೋಜನೆ ನಿಲ್ಲಿಸಲು ಕೇಂದ್ರದ ನಿರ್ಧಾರ!

ಅಲ್ಲದೆ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ಹಲವೆಡೆ ಭಾನುವಾರ ಧಾರಾಕಾರ ಮಳೆ ಮುಂದುವರಿದಿದ್ದು , ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಿಗೆ ಬುಧವಾರದವರೆಗೆ ರೆಡ್ ಅಲರ್ಟ್ ಘೋಷಿಸಿದೆ.

ಕೊಡಾಡು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

PM Kisan Credit Card: ಈಗ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ದೊರೆಯಲಿದೆ 3 ಲಕ್ಷದವರೆಗೆ ಸಾಲ!

ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿಯೂ ಭೂಕುಸಿತ ವರದಿಯಾಗಿದೆ. ಮಹಾರಾಷ್ಟ್ರ ಮತ್ತು ಗೋವಾವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಾಹನಗಳ ಸಂಚಾರಕ್ಕೆ ಪರಿಣಾಮ ಬೀರಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಭೂಕುಸಿತ ವರದಿಯಾಗಿದೆ.

ಜೂನ್ 1 ರಿಂದ ಇಲ್ಲಿಯವರೆಗೆ ವಿವಿಧ ಮಳೆ ಸಂಬಂಧಿತ ಘಟನೆಗಳಲ್ಲಿ ಒಟ್ಟು 12 ಜನರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕರ್ನಾಟಕದ ಹಲವೆಡೆ ಭಾನುವಾರ ಧಾರಾಕಾರ ಮಳೆ ಮುಂದುವರಿದಿದ್ದು , ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಿಗೆ ಬುಧವಾರದವರೆಗೆ ರೆಡ್ ಅಲರ್ಟ್ ಘೋಷಿಸಿದೆ.

ರೈತರಿಗೆ ಗುಡ್‌ನ್ಯೂಸ್‌: ಸರ್ಕಾರದಿಂದ ಅತಿ ಹೆಚ್ಚು ಸಬ್ಸಿಡಿಯಲ್ಲಿ ದೊರೆಯಲಿವೆ ಕೃಷಿ ಡ್ರೋಣ್‌ಗಳು!