News

ಸೆ. 3 ರಿಂದ 5 ರವರೆಗೆ ರಾಜ್ಯದ 22 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ:ಯೆಲ್ಲೋ ಅಲರ್ಟ್ ಘೋಷಣೆ

03 September, 2020 9:43 AM IST By:

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಕರಾವಳಿ ಹಾಗೂ ಒಳನಾಡಿನ 22 ಜಜಿಲ್ಲೆಗಳಲ್ಲಿ ಸೆ.3ರಿಂದ 5ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ವ್ಯಾಪಕವಾಗಿ ಮಳೆಯಾಗುವ ನಿರೀಕ್ಷೆ ಇರುವುದರಿಂದ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ಬು್ವಾರ ರಾಜ್ಯದ ವಿವಿಧೆಡೆ ನಿನ್ನೆ ಬುಧವಾರ ಅಲ್ಲಲ್ಲಿ ಸಾಧಾರಣ ಮಳೆಯಾದ ವರದಿ ಇಂತಿದೆ.

ಬೇಲೂರಿನಲ್ಲಿ 11 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಹಾಸನ 9, ತೀರ್ಥಹಳ್ಳಿ 8, ಪಾಂಡವಪುರ 5, ಸುಳ್ಯ, ರಾಮನಗರ 4, ಭಾಗಮಂಡಲ, ಚಾಮರಾಜನಗರ, ದೇವನಹಳ್ಳಿ, ಚನ್ನಪಟ್ಟಣ 3, ಪುತ್ತೂರು, ಹಾವೇರಿ, ತಿಪಟೂರು, ಮಧುಗಿರಿ, ಚಿಕ್ಕಬಳ್ಳಾಪುರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.