News

weather ರಾಜ್ಯದಲ್ಲಿ ಇಂದಿನ ತಾಪಮಾನ ಹೇಗಿದೆ, ಎಲ್ಲೆಲ್ಲಿ ಮಳೆ, ಬಿಸಿಲು..

11 October, 2023 10:28 AM IST By: Hitesh
How is the temperature today in the state, where is it raining, sunny..

ರಾಜ್ಯದ ವಿವಿಧ ಭಾಗದಲ್ಲಿ ಬುಧವಾರ ಭಾರೀ (Heavy Rain) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಬುಧವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ

ಹಾಗೂ ಗುರುವಾರ  ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ, ಕೊಡಗು, ಚಾಮರಾಜನಗರ

ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.  

ದಕ್ಷಿಣ ಕರ್ನಾಟಕದಲ್ಲಿ ಮಳೆಯಾಗುತ್ತಿದೆ. ಆದರೆ, ಉತ್ತರ ಕರ್ನಾಟಕದ ಭಾಗದಲ್ಲಿ ಬಿಸಿಲಿನ ಝಳ ತೀವ್ರವಾಗಿದೆ. 

ಇನ್ನು ಮಂಗಳವಾರ ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 35.8 ಡಿ.ಸೆ. ಕಲಬುರ್ಗಿಯಲ್ಲಿ ದಾಖಲಾಗಿದೆ.

ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 18.0 ಡಿ.ಸೆ. ವಿಜಯಪುರಯಲ್ಲಿ ದಾಖಲಾಗಿದೆ.

ಬುಧವಾರ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆಗಳಲ್ಲಿ ಮತ್ತು ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ

ಮಳೆಯಾಗುವ ಸಾಧ್ಯತೆ ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ

ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.   

ಇನ್ನು ಗುರುವಾರ ಕರಾವಳಿಯ ಮತ್ತು ದಕ್ಷಿಣ ಒಳನಾಡಿನಲ್ಲಿ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಉಷ್ಣಾಂಶಗಳ ಎಚ್ಚರಿಕೆ ಮುಂದಿನ 48 ಘಂಟೆಗಳು:

ಗರಿಷ್ಠ ಉಷ್ಣಾಂಶಗಳು :

ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಕಲಬುರ್ಗಿ, ಕೊಪ್ಪಳನಲ್ಲಿ ಜಿಲ್ಲೆಗಳ ಗರಿಷ್ಠ ತಾಪಮಾನ

ಸಾಮಾನ್ಯಕ್ಕಿಂತ 2-4 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ ; ದಕ್ಷಿಣ ಒಳನಾಡಿನಲ್ಲಿ ಮಂಡ್ಯ, ಹಾಸನ, ಚಿತ್ರದುರ್ಗ

ದಾವಣಗೆರೆ, ಮೈಸೂರು ಜಿಲ್ಲೆಗಳಲ್ಲಿ ಮತ್ತು ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ

ಒಂದೆರಡು ಕಡೆಗಳಲ್ಲಿ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 24 ಘಂಟೆಗಳು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ

ಮೈಸೂರು, ರಾಮನಗರ ಜಿಲ್ಲೆಗಳ ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಚಾಮರಾಜನಗರ

ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ.

ಗುಡುಗು ಮುನ್ನೆಚರಿಕೆ:

ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ.

ಬಿರುಗಾಳಿಯ ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ಇಲ್ಲ

ಮೀನುಗಾರರಿಗೆ ಎಚ್ಚರಿಕೆ ಇಲ್ಲ

ಇನ್ನು ಬೆಂಗಳೂರಿನಲ್ಲಿ  ಸಾಮಾನ್ಯವಾಗಿ ಮೋಡ ಕವಿದ ವಾತಾವರಣರುತ್ತದೆ. ಒಂದು ಅಥವಾ ಎರಡು ಬಾರಿ

ಮಳೆ/ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಸಂಜೆ ಅಥವಾ ರಾತ್ರಿಯ ಸಮಯದಲ್ಲಿ ಆಗುವ ಸಾಧ್ಯತೆ ಹೆಚ್ಚು.

ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಗಳು, ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ.

ಸಂಜೆ/ರಾತ್ರಿಯ ಸಮಯದಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಮಳೆಯಾಗುವ ಸಂಭವವಿದೆ.

ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

ಮಂಗಳವಾರ ಎಲ್ಲಿಲ್ಲಿ ಮಳೆಯಾಗಿದೆ.

ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನ ಚುರುಕಾಗಿತ್ತು ;ಉತ್ತರ ಒಳನಾಡಿನಲ್ಲಿ ಹಾಗೂ ಕರಾವಳಿಯಲ್ಲಿ ದುರ್ಬಲವಾಗಿತ್ತು . 

ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಕರಾವಳಿ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಭಾರಿ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):ಹುಣಸೂರು (ಮೈಸೂರು ಜಿಲ್ಲೆ) 9;

ಶ್ರವಣಬೆಳಗೊಳ (ಹಾಸನ ಜಿಲ್ಲೆ) 8; ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ ಜಿಲ್ಲೆ), ಬೆಂಗಳೂರು ನಗರ ತಲಾ 7 ಸೆಂ.ಮೀ ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ): ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ) ತಲಾ 6;

ಬೆಂಗಳೂರು ಕೆಐಎಎಲ್, ಎಲೆಕ್ಟ್ರಾನಿಕ್ ಸಿಟಿ ಎಆರ್‌ಜಿ, ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್ (ಬೆಂಗಳೂರು ಅರ್ಬನ್ ಜಿಲ್ಲೆ) ತಲಾ 5.

ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ), ರಾಮನಗರ, ಸುತ್ತೂರು ಆವ್ (ಮೈಸೂರು, ಮಲ್ಲದ್ದಳ್ಳಿ, ಮಡಬೂತ ಜಿಲ್ಲೆ), ಉತ್ತರಹಳ್ಳಿ

ಜಿಕೆವಿಕೆ (ಬೆಂಗಳೂರು ನಗರ ಜಿಲ್ಲೆ ಎರಡೂ), ಕನಕಪುರ (ರಾಮನಗರ ಜಿಲ್ಲೆ) ತಲಾ 4; ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ)

ಅರಕಲಗೂಡು, ಕೊಣನೂರು, ಸಿ ಆರ್ ಪಟ್ನಾ (ಎಲ್ಲವೂ ಹಾಸನ ಜಿಲ್ಲೆ), ಮೈಸೂರು, ಸರಗೂರು

ಟಿ ನರಸೀಪುರ (ಎರಡೂ ಮೈಸೂರು ಜಿಲ್ಲೆ), ನಾಪೋಕ್ಲು (ಕೊಡಗು ಜಿಲ್ಲೆ), ಕೃಷ್ಣರಾಜಪೇಟೆ (ಮಂಡ್ಯ ಜಿಲ್ಲೆ), ಮಾಲೂರು

(ಕೋಲಾರ ತಲಾ 3) ; ಹುಂಚದಕಟ್ಟೆ (ಶಿವಮೊಗ್ಗ ಜಿಲ್ಲೆ), ಹೆಸರಘಟ್ಟ (ಬೆಂಗಳೂರು ನಗರ), ಹಾರಂಗಿ (ಕೊಡಗು)

ಹಾಸನ ತಲಾ 2; ಕೃಷ್ಣರಾಜಸಾಗರ, ಬೆಳ್ಳೂರು (ಎರಡೂ ಮಂಡ್ಯ ಜಿಲ್ಲೆ), ಸೋಮವಾರಪೇಟೆ (ಕೊಡಗು ಜಿಲ್ಲೆ)

ಹೊಸಕೋಟೆ (ಬೆಂಗಳೂರು ಗ್ರಾಮಾಂತರ ಜಿಲ್ಲೆ), ಮಾಗಡಿ (ರಾಮನಗರ ಜಿಲ್ಲೆ), ಸಾಲಿಗ್ರಾಮ (ಮೈಸೂರು ಜಿಲ್ಲೆ) 

ಜಯಪುರ (ಚಿಕ್ಕಮಗಳೂರು ಜಿಲ್ಲೆ), ಚಾಮರಾಜನಗರ ಜಿಲ್ಲೆ) ತಲಾ 1 ಸೆಂ.ಮೀ ಮಳೆಯಾಗಿರುವುದು ವರದಿಯಾಗಿದೆ.