1. ಸುದ್ದಿಗಳು

ಸಿಹಿ ಸುದ್ದಿ: ಕಾಶಿ ಯಾತ್ರಾರ್ಥಿಗಳಿಗೆ 5 ಸಾವಿರ..ಯೋಜನೆಗೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ: ಅರ್ಜಿ ಸಲ್ಲಿಕೆ ಹೇಗೆ?

Maltesh
Maltesh
Karnataka CM B S Bommai Launches kashi yatra scheme

ಕರ್ನಾಟಕ ಸರ್ಕಾರವು ಉತ್ತರ ಪ್ರದೇಶದ ಕಾಶಿ ಅಥವಾ ಆಧುನಿಕ ವಾರಣಾಸಿಯಯ ದರ್ಶನ ಪಡೆಯಲು ಬಯಸುವ ಯಾತ್ರಾರ್ಥಿಗಳಿಗೆ ಎಂದೇ ಹೊಸ ಯೋಜನೆಯನ್ನು ಬಜೆಟ್ನಲ್ಲಿ ಘೋಷಣೆ ಮಾಡಿತ್ತು.

2022-23ನೇ ಸಾಲಿನ ಆಯವ್ಯಯದಲ್ಲಿ ಪ್ರಸ್ತಾಪಿತ ಕಾಶಿಯಾತ್ರೆ ಪ್ರವಾಸ ಯೋಜನೆ, ಪ್ರತಿ ವರ್ಷ ರಾಜ್ಯದ 30 ಸಾವಿರ ಯಾತ್ರಾರ್ಥಿಗಳು ಸರ್ಕಾರದ ಸಹಾಯಧನದ ಮೂಲಕ ಕಾಶಿಗೆ ತೆರಳಲು ಅವಕಾಶವಿದೆ. ಪ್ರತಿಯೊಬ್ಬ ಯಾತ್ರಾರ್ಥಿಗೆ 5 ಸಾವಿರ ರೂ. ಸಹಾಯಧನ ನೀಡಲಾಗುತ್ತಿದ್ದು, ಶೀಘ್ರದಲ್ಲಿಯೇ ಮುಜರಾಯಿ ಇಲಾಖೆಯಿಂದ ಕಾಶಿಯಾತ್ರೆಗೆ ತೆರಳಲು ಆಸಕ್ತಿ ಹೊಂದಿರುವ ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನಿಸಲಿದೆ.

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ತಿಳಿಸಿದಂತೆ ಶ್ರೀ ಕ್ಷೇತ್ರ ಕಾಶಿ ಯಾತ್ರೆಗೆ ರೂಪಾಯಿಗಳ 5000 ಸಹಾಯಧನ ನೀಡುವುದಾಗಿ ಘೋಷಿಸಿತ್ತು. 2022-23ರ ಬಜೆಟ್‌ನಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಈ ಘೋಷಣೆ ಮಾಡಿದ್ದರು.

ಆ ಘೋಷಣೆಯನ್ನು ಅನುಷ್ಠಾನ(Kashi Yatra subsidy) ಕೈಗೊಳ್ಳುವ ಪ್ರತಿಯೊಬ್ಬ ವ್ಯಕ್ತಿಗೆ 5000 ರೂಪಾಯಿ ಸಹಾಯಧನ ನೀಡಲು ತಾತ್ವಿಕ ಅನುಮೋದನೆಯ ಪ್ರಕಾರ ಆದೇಶ ಕೂಡ ಹೊರಡಿಸಿತ್ತು.

ಸದ್ಯ ಈ ಯೋಜನೆಯ ಭಾಗವಾಗಿ ಮುಜರಾಯಿ ಇಲಾಖೆಯ ವತಿಯಿಂದ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಇಂದು ಸಾಂಕೇತಿಕವಾಗಿ ಸಿಎಂ ಬಸವರಾಜ ಬೊಮ್ಮಾಯಿ ಸಹಾಯಧನ ವಿತರಿಸಿದ್ದಾರೆ.  ಡಿ.ಬಿ.ಟಿ ಮೂಲಕ ಆನ್‌ಲೈನ್‌ ನಲ್ಲಿ ಹಣ ವರ್ಗಾವಣೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ, ಅವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವೆಬ್‌ ಪೋರ್ಟಲ್‌ ಅನ್ನು ಕೂಡ ಲೋಕಾರ್ಪಣೆಗೊಳಿಸಿದ್ದಾರೆ.

ಕಾಶಿಗೆ ಅಪಾರ ಸಂಖ್ಯೆಯ ಭಕ್ತರು (Tour to Kashi) ಭೇಟಿ ನೀಡುತ್ತಾರೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಕಾಶಿ ಯಾತ್ರೆಯನ್ನು ಆರ್ಥಿಕ ದುರ್ಬಲ ವರ್ಗದ ಜನರಿಗೆ ಎಂದೇ ರೂಪಿಸಲಾಗಿದೆ ಯೋಜನೆ 2022 ರ ಪ್ರಯೋಜನಗಳನ್ನು ಕಾಶಿ ಯಾತ್ರೆಗೆ ಖರ್ಚು ಮಾಡಲು ಸರ್ಕಾರ 5000 ರೂಪಾಯಿ ನಿಗದಿಪಡಿಸಿದೆ.1

ಆದ್ದರಿಂದ ಕಾಶಿ ಯಾತ್ರೆ ಕೈಗೊಳ್ಳುವವರು ತಮ್ಮ ಕಾಶಿ ಯಾತ್ರೆಯನ್ನು ಪೂರ್ಣಗೊಳಿಸಲು ಈ ಮೊತ್ತವನ್ನು ಬಳಸಬಹುದಾಗಿದೆ. ಮಾಹಿತಿಯ ಪ್ರಕಾರ ಪ್ರತಿ ವರ್ಷ 30,000 ಯಾತ್ರಾರ್ಥಿಗಳು ಮುಜರಾಯಿ, ಹಜ್ ಮತ್ತು ವಕ್ಫ್ ಸಬ್ಸಿಡಿ ಪಡೆಯುತ್ತಾರೆ.

ಕಾಶಿ ಯಾತ್ರಾ ಸಬ್ಸಿಡಿ ಯೋಜನೆಗೆ ಅರ್ಹತೆಯ ಮಾನದಂಡಗಳು

ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

ಅರ್ಹ ಭಕ್ತರಿಗೆ ಕಾಶಿ ಯಾತ್ರೆಗೆ 5000 ರೂ.

ಈ ಮೊತ್ತವನ್ನು ಕಾಶಿ ಯಾತ್ರೆಯ ವೆಚ್ಚವಾಗಿ ಬಳಸಬಹುದು.

ಪ್ರಯೋಜನಗಳನ್ನು ಪಡೆಯಲು ಅಧಿಕೃತ ಪ್ರಕಟಣೆಯ ನಂತರ ನೀವು ಎಲ್ಲಾ ಅರ್ಹತಾ ಮಾನದಂಡಗಳನ್ನು ಪರಿಶೀಲಿಸಬೇಕು.

ಅಗತ್ಯವಿರುವ ದಾಖಲೆಗಳು

ಕಾಶಿ ಯಾತ್ರಾ ಸಬ್ಸಿಡಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಕೆಲವು ದಾಖಲೆಗಳು ಬೇಕಾಗುತ್ತವೆ.

ಮೊಬೈಲ್ ನಂಬರ್

ಪಾಸ್ಪೋರ್ಟ್ ಅಳತೆಯ ಭಾವಚಿತ್ರ

ಮತದಾರರ ಗುರುತಿನ ಚೀಟಿ

ಶಾಶ್ವತ ನಿವಾಸ ಪುರಾವೆ

ಆಧಾರ್ ಕಾರ್ಡ್

ನೋಂದಣಿಗೆ ಹೇಗೆ ಅರ್ಜಿ ಸಲ್ಲಿಸಬೇಕು?

ಕಾಶಿ ಯಾತ್ರೆಯ ಸಬ್ಸಿಡಿ ಯೋಜನೆಗಾಗಿ ತಮ್ಮ ನೋಂದಣಿಯನ್ನು ಮಾಡಿಕೊಳ್ಳಲು ಹಲವರು ಈಗಾಗಲೇ ಬಯಸಿದ್ದಾರೆ. ಆದರೆ ಇದೀಗ ಸರ್ಕಾರ ಕಾಶಿ ಯಾತ್ರೆಯ ಸಹಾಯಧನದ ಆದೇಶ ಹೊರಡಿಸಿದ್ದು ಮುಂದಿನ ದಿನಗಳಲ್ಲಿ ಅಧಿಕೃತ ಅರ್ಜಿ ನಮೂನೆ ಬಿಡುಗಡೆಯಾಗಲಿದೆ.

Agriculture park: ಭಾರತದಲ್ಲಿ ಬರೋಬ್ಬರಿ 2 ಬಿಲಿಯನ್‌ ಡಾಲರ್‌ ಕೃಷಿ ಪಾರ್ಕ್ ಘೋಷಣೆ? ಏನೇನಿರಲಿದೆ ಗೊತ್ತೆ?

Published On: 15 July 2022, 02:24 PM English Summary: Karnataka CM B S Bommai Launches kashi yatra scheme

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.