2003ರಲ್ಲಿ ಶಿವಮೊಗ್ಗದಲ್ಲಿ ನಡೆದ 73ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊಫೆಸರ್ ನಿಸಾರ್ ಅಹಮದ್ ಅವರು ಆಯ್ಕೆಗೊಂಡಿದ್ದರು.
ತಮ್ಮ ವಿದ್ಯಾರ್ಥಿ ದೆಸೆಯಲ್ಲೇ ಎಂ.ಸಿ. ಸೀತಾರಾಮಯ್ಯ, ಜಿ.ಪಿ. ರಾಜರತ್ನಂ, ಎಲ್. ಗುಂಡಪ್ಪ ಮೊದಲಾದ ಗುರುಗಳ ಪ್ರಭಾವಕ್ಕೊಳಗಾಗಿದ್ದ ನಿಸಾರ್ ಅವರಲ್ಲಿ ಸಹಜವಾಗಿಯೇ ಸಾಹಿತ್ಯಾಸಕ್ತಿ ಮೊಳಕೆಯೊಡೆಯತೊಡಗಿತ್ತು.
ಮನಸು ಗಾಂಧಿ ಬಜಾರು, ನೆನದವರ ಮನದಲ್ಲಿ, ಸುಮುಹೂರ್ತ, ಸಂಜೆ ಐದರ ಮಳೆ, ನಾನೆಂಬ ಪರಕೀಯ, ಆಯ್ದ ಕವಿತೆಗಳು, ನಿತ್ಯೋತ್ಸವ, ಸ್ವಯಂ ಸೇವೆಯ ಗಿಳಿಗಳು, ಅನಾಮಿಕ ಆಂಗ್ಲರು, ಸಮಗ್ರ ಕವಿತೆಗಳು, ನವೋಲ್ಲಾಸ, ಅರವತ್ತೈದರ ಐಸಿರಿ, ಸಮಗ್ರ ಭಾವಗೀತೆಗಳು, ಪ್ರೊಫೆಸರ್ ನಿಸಾರ್ ಅಹಮದ್ ಅವರ ಪ್ರಮುಖ ಕವನ ಸಂಕಲನಗಳು.
ನಿಸಾರ್ ಅಹಮ್ಮದ್ ಅವರು ತಮ್ಮ ಸಾಹಿತ್ಯ ಕೃಷಿ ಜೀವನದಲ್ಲಿ ವಿಮರ್ಶಾ ಬರಹಗಳು, ಅನುವಾದ ಬರಹ ವಿಭಾಗಗಳಲ್ಲೂ ಕೈಯಾಡಿಸಿದ್ದರೂ ಜನಸಾಮಾನ್ಯರಿಗೆ ಅವರೆಂದೂ ನಿತ್ಯೋತ್ಸವದ ಕವಿಯಾಗಿಯೇ ಉಳಿದಿದ್ದರು. ಇದೀಗ ಪ್ರೊಫೆಸರ್ ನಿಸಾರ್ ಅಹಮ್ಮದ್ ಅವರು ಭೌತಿಕವಾಗಿ ನಮ್ಮನ್ನಗಲಿದ್ದರೂ ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಅತ್ಯುನ್ನತ ಕೊಡುಗೆಗಳ ಮೂಲಕ ಅವರ ನೆನಪು ಕನ್ನಡಿಗರ ಮನದಲ್ಲಿ ನಿತ್ಯ ನೂತನವಾಗಿರುತ್ತದೆ.
ರಾಜ್ಯೋತ್ಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಅ.ನ.ಕೃ. ಪ್ರಶಸ್ತಿ, ಸೋವಿಯತ್ ನೆಹರೂ ಪುರಸ್ಕಾರ, ಕರ್ನಾಟಕ ವಿಶ್ವ ವಿದ್ಯಾನಿಲಯದ ಡಾಕ್ಟರೇಟ್, ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ ಸಹಿತ ಹಲವಾರು ಪ್ರಶಸ್ತಿ ಪುರಸ್ಕಾರಗಳಿಗೆ ಪ್ರೊಫೆಸರ್ ನಿಸಾರ್ ಅಹಮದ್ ಅವರು ಭಾಜನರಾಗಿದ್ದರು.
Share your comments