1. ಸುದ್ದಿಗಳು

ಸರ್ಕಾರಿ ನೌಕರರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ

cash

2021ರ ಹೊಸ ವರ್ಷದ ಮೊದಲ ವಾರದಲ್ಲಿಯೇ ಸರ್ಕಾರಿ ನೌಕರರ ಗಳಿಕೆ ರಜೆಯ ನಗದೀಕರಣ ಸೌಲಭ್ಯವನ್ನು ರದ್ದುಪಡಿಸುವ ಮೂಲಕ ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಬಿಗ್ ಶಾಕ್ ಕೊಟ್ಟಿದೆ.

ಹೌದು ಕರ್ನಾಟಕ ಸರ್ಕಾರವು ಪ್ರಸ್ತುತ ಕೋವಿಡ್-19 ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಸದರಿ ಆದೇಶದ ಪ್ರಕಾರ 2021ನೇ ಸಾಲಿನ ಕ್ಯಾಲೆಂಡರ್ ವರ್ಷ ದಿನಾಂಕ 01-01-2021 ರಿಂದ 31-12-2021 ರವರೆಗಿನ ಅವಧಿಯಲ್ಲಿ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸಲಾಗಿದೆ.

ಆದರೆ, 2021 ರ ಜನವರಿ ತಿಂಗಳಿಂದ ಡಿಸೆಂಬರ್ ಅಂತ್ಯದ ಅವಧಿಯಲ್ಲಿ ನಿವೃತ್ತಿ ಹೊಂದುವ ಎಲ್ಲಾ ಅರ್ಹ ನೌಕರರು / ಅಧಿಕಾರಿಗಳು, ಅವರು ನಿವೃತ್ತಿ ಹೊಂದುವ ತಿಂಗಳಲ್ಲಿ ಗಳಿಕೆ ರಜೆ ನಗದೀಕರಣ ಪ್ರಯೋಜನ ಪಡೆಯಲು ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸರ್ಕಾರದ ವಿವಿಧ ಇಲಾಖೆಗಳು, ಸಂಸ್ಥೆಗಳು, ನಿಗಮ, ಮಂಡಳಿಂಗಳು, ಸರ್ಕಾರದಿಂದ ನೆರವು ಇಲ್ಲವೆ ಅನುದಾನ ಪಡೆಯುವ ಮತ್ತು ಪಡೆಯದಿರುವ ಎಲ್ಲಾ ಸರ್ಕಾರಿ ಉದ್ದಿಮೆಗಳ ನೌಕರರಿಗೂ ಈ ಸೌಲಭ್ಯ ಇರುವುದಿಲ್ಲ ಎಂದು ಆರ್ಥಿಕ ಇಲಾಖೆ ಹೊರಡಿಸಿದ ಆದೇಶದಲ್ಲಿ ಸ್ಪಷ್ಟಪಡಿಸಿದೆ.

Published On: 05 January 2021, 09:46 AM English Summary: Leave encashment facility cancelled

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.