1. ಸುದ್ದಿಗಳು

ಸೋಮವಾರದಿಂದ ಲಾಕ್ಡೌನ್ ಮತ್ತಷ್ಟು ಸಡಿಲ: ಸಂಜೆ 5 ಗಂಟೆವರೆಗೂ ಅಂಗಡಿ ಓಪನ್!

ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತಲೂ ಕಡಿಮೆಗೆ ಬಂದಿರುವುದರಿಂದ ರಾಜ್ಯ ಸರ್ಕಾರ ದಾವಣಗೆರೆ ಜಿಲ್ಲೆಯನ್ನು ‘ಎ’ ವರ್ಗಕ್ಕೆ ಸೇರಿಸಿದೆ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್ ನಿಯಮ, ನಿರ್ಬಂಧಗಳಿಗೆ ಮತ್ತಷ್ಟು ವಿನಾಯಿತಿ ನೀಡಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ.

ಅದರಂತೆ ಎಲ್ಲ ಅಂಗಡಿಗಳು ಹಾಗೂ ಹೋಟೆಲ್‌ಗಳು ಬೆಳಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ವಹಿವಾಟು ನಡೆಸಬಹುದು. ಆದರೆ, ಹವಾನಿಯಂತ್ರಿತ ಶಾಪಿಂಗ್ ಕಾಂಪ್ಲೆಕ್ಸ್, ಮಾಲ್‌ಗಳಿಗೆ ಅನುಮತಿ ನಿಂಡಿಲ್ಲ. ಈ ವಿನಾಯಿತಿಯು ಜುಲೈ 5ರವರೆಗೆ ಅನ್ವಯವಾಗುಲಿದ್ದು, ಜುಲೈ 5ರ ಬೆಳಗ್ಗೆ 5 ಗಂಟೆಯವರೆಗೆ ಲಾಕ್‌ಡೌನ್ ಮುಂದುವರೆಯಲಿದೆ. ಕೋವಿಡ್-19 ರ ಮಾರ್ಗಸೂಚಿಗಳ ಪಾಲನೆಯ ಷರತ್ತಿಗೆ ಒಳಪಟ್ಟು ಬಸ್‌ಗಳ ಆಸನದ ಗರಿಷ್ಠ ಶೇ.50ರ ಸಾಮರ್ಥ್ಯದೊಂದಿಗೆ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಪ್ರಯಾಣಿಕರು ಬಸ್‌ಗಳಲ್ಲಿ ನಿಂತು ಪ್ರಯಾಣಿಸಲು ಅವಕಾಶವಿರುವುದಿಲ್ಲ.

ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಆದರೆ, ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶವಿರುವ ಹಿನ್ನೆಲೆಯಲ್ಲಿ ವಾಹನಗಳು ಸರಕುಗಳನ್ನು ರಶೀದಿಯಲ್ಲಿ ನಮೂಧಿತ ವಿಳಾಸದ ಅಂಗಡಿ ಮತ್ತು ಗೋದಾಮುಗಳಲ್ಲಿ ಇಳಿಸಲು ಮತ್ತು ತೆಗೆದುಕೊಂಡು ಹೋಗಲು ಮಾತ್ರ ದಿನಪೂರ್ತಿ ಅವಕಾಶ ನೀಡಲಾಗಿದೆ. ಎಲ್ಲಾ ವಿಧದ ಉತ್ಪಾದನೆ ಘಟಕಗಳು, ಸಂಸ್ಥೆಗಳು, ಕೈಗಾರಿಕೆಗಳು, ಕೋವಿಡ್ ನಿಯಮಾವಳಿಗಳ ಪ್ರಕಾರ ಶೇ.50 ರಷ್ಟು ಸಿಬ್ಬಂದಿಯೊAದಿಗೆ ಮಾತ್ರ ಕಾರ್ಯನಿರ್ವಹಿಸಬಹುದು. ಹಾಗೂ ಗಾರ್ಮೆಂಟ್ಸ್ ಗಳಲ್ಲಿ ಶೇ.30ರಷ್ಟು ಸಿಬ್ಬಂದಿ ಕಾರ್ಯ ನಿರ್ವಹಿಸಲು ಮಾತ್ರ ಅವಕಾಶವಿದೆ. ಅಲ್ಲಯೂ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆÀ.

ಸಾರ್ವಜನಿಕರು ಹೊರಗಡೆ ಓಡಾಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಎಲ್ಲಾ ಅವಶ್ಯಕ ವಸ್ತುಗಳನ್ನು ದಿನದ 24 ಗಂಟೆ ವಾರದ ಏಳೂ ದಿನಗಳ ಕಆಲ ಮನೆ ಬಾಗಿಲಿಗೆ ತಲುಪಿಸುವ ಸೇವೆ ನೀಡಲು ಅವಕಾಶವಿದೆ. ಎಲ್ಲಾ ಹೋಟೆಲ್, ರೆಸ್ಟೋರೆಂಟ್, ಬಾರ್ ಹಾಗೂ ಕ್ಲಬ್‌ಗಳು ಬೆಳಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ಒಟಟ್ಟಾರೆ ಆಸನ ಸಾಮರ್ಥ್ಯದಲ್ಲಿ ಶೇ.50ರ ಸಾಮರ್ಥ್ಯಕ್ಕೆ ಮಾತ್ರ ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ಸಲ್ಲಿಸಬೇಕು. ಆದರೆ, ಊಟದ ಜೊತೆಗೆ ಮದ್ಯವನ್ನು ಪೂರೈಸುವಂತಿಲ್ಲ. ಹವಾನಿಯಂತ್ರಿತ ಹೋಟೆಲ್ ಇತ್ಯಾದಿಗಳು ಕಾರ್ಯನಿರ್ವಹಿಸುವಂತಿಲ್ಲ.

ಲಾಡ್ಜ್, ರೆಸಾರ್ಟ್ ಇತ್ಯಾದಿಗಳು ಶೇ.50ರ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಪ್ರೇಕ್ಷಕರ ರಹಿತವಾಗಿ ಎಲ್ಲಾ ಹೊರಾಂಗಣ ಕ್ರೀಡಾ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಆರೋಗ್ಯ ಕ್ಷೇತ್ರದ ಕೌಶಲ್ಯ ತರಬೇತಿ ಹಾಗೂ ಘನತ್ಯಾಜ್ಯ ನಿರ್ವಹಣೆ ಸಂಬಂಧಿತ ತರಬೇತಿಗೆ ಅವಕಾಶವಿದೆ. ಗರಿಷ್ಠ ಇಬ್ಬರು ಪ್ರಯಾಣಿಕರ ಸಾಮರ್ಥ್ಯದೊಂದಿಗೆ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಸಂಚರಿಸಲು ಅನುಮತಿ ನೀಡಲಾಗಿದೆ. ಇದರೊಂದಿಗೆ ವಾಕಿಂಗ್ ಮತ್ತು ಜಾಗಿಂಗ್ ಉದ್ದೇಶಕ್ಕಾಗಿ ಮಾತ್ರ ಉದ್ಯಾನವನಗಳನ್ನು ಬೆಳಗ್ಗೆ 5ರಿಂದ ಸಂಜೆ 6 ಗಂಟೆಯವರೆಗೆ ತೆರೆಯಲು ಅನುಮತಿಸಿದೆ. ಆದರೆ, ಯಾವುದೇ ಗುಂಪು ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ ಎಂದು ಡಿ.ಸಿ ಸ್ಪಷ್ಟಪಡಿಸಿದ್ದಾರೆ.

ಎಲ್ಲ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಿಗೆ ಸಿಬ್ಬಂದಿಯ ಶೇ.50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಆರೋಗ್ಯ ವಲಯಕ್ಕೆ ಸಂಬAಧಿಸಿದ ಕೌಶಲ್ಯ ತರಬೇತಿಗಳಿಗೆ ಅನುಮತಿಸಿದೆ. ಕೋವಿಡ್-19 ಮಾರ್ಗಸೂಚಿಯ ಅನ್ವಯ ಹೊರಾಂಗಣ ಚಿತ್ರಿಕರಣಕ್ಕೆ ಹಾಗೂ ಸೀರಿಯಲ್ ಚಿತ್ರೀಕರಣಕ್ಕೆ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯದ ಕರ್ಫ್ಯೂ ಅವಧಿಯಲ್ಲಿ ಆಹಾರ, ದಿನಸಿ, ಹಣ್ಣು, ತರಕಾರಿ, ಮಾಂಸ, ಮೀನು, ಹಾಲು, ಕಾಲಿನ ಬೂತ್‌ಗಳು ಮತ್ತು ಜಾನುವಾರು ಮೇವಿನ ಅಂಗಡಿಗಳು ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಾರ್ಯ ನಿರ್ವಹಿಸಬಹುದು. ಮದ್ಯದ ಅಂಗಡಿಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪಾರ್ಸೆಲ್ ನೀಡಬಹುದು. ಶನಿವಾರ ಮತ್ತು ಭಾನುವಾರ ವಾರಂತ್ಯದ ಕರ್ಫ್ಯೂ ಜಾರಿಯಯಲ್ಲಿ ಇರುವುದರಿಂದ ಬರುವ ಸೋಮವಾರದಿಂದ ವಿನಾಯಿತಿಗಳು ದೊರೆಯಲಿವೆ.

ಇನ್ನು ರಾಜ್ಯಾದ್ಯಂತ ತುರ್ತು ಹಾಗೂ ಅಗತ್ಯ ಸೇವೆಗಳಿಗೆ ಹಿಂದಿನAತೆಯೇ ಅನುಮತಿ ಇದೆ. ಬಸ್, ರೈಲು ಹಾಗೂ ವಿಮಾನಯಾನಗಳಿಗೆ ಅನುಮತಿ ನೀಡಲಾಗಿದೆ. ನಿಗದಿಯಾದ ಮದುವೆಗಳು ಹಾಗೂ ಅಂತ್ಯಕ್ರಿಯೆಗಳಿಗೆ ನಿರ್ಬಂಧಿತ ಅನುಮತಿ ಇದೆ. ಈ ಮೇಲೆ ತಿಳಿಸಿದ ಮಾರ್ಗಸೂಚಿ ಅಥವಾ ನಿಬಂಧನೆಗಳನ್ನು ಉಲ್ಲಂಘಿಸಿದ ಪಕ್ಷದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Published On: 27 June 2021, 11:00 AM English Summary: lockdown relaxation from monday in davanagere

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.