News

ಸೆ. 11 ರಿಂದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆ- ರೆಡ್ ಅಲರ್ಟ್ ಘೋಷಣೆ

11 September, 2020 7:49 AM IST By:

ನೈರುತ್ಯ ಮುಂಗಾರು ಬಿರುಸುಗೊಂಡಿರುವುದರಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.  

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಸೆ.11 ಮತ್ತು 12ರಂದು ‘ರೆಡ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಹಾಗೂ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಿರುವುದಾಗಿ ಇಲಾಖೆ ಮಾಹಿತಿ ನೀಡಿದೆ.

ಕರಾವಳಿಯಲ್ಲಿ ವೇಗವಾದ ಗಾಳಿ ಹಾಗೂ ಗರಿಷ್ಠ 3.3 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯ ಬಾರದು ಎಂದು ಇಲಾಖೆ ಎಚ್ಚರಿಸಿದೆ.

ಕೊಡಗಿನಲ್ಲಿ ರೆಡ್ ಅಲರ್ಟ್:

ಕೊಡಗಿನಲ್ಲಿ ಸೆ. 11ರ ಬೆಳಗ್ಗೆ 8.30 ತನಕ ರೆಡ್ ಅಲರ್ಟ್ ಘೋಷಿಸಲಾಗಿದೆ.ಸೆ.ಇದೇ ಸಂದರ್ಭದಲ್ಲಿ 204.5 ಮಿ.ಮೀಗಿಂತಲೂ ಅಧಿಕ ಮಳೆ ಬೀಳುವ ಸಾಧ್ಯತೆಯಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೋರಿದೆ. ಈ ಸಮಯದಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

ಮಳೆ-ಎಲ್ಲಿ,ಎಷ್ಟು?:

 ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಗರಿಷ್ಠ 17 ಸೆಂ.ಮೀ ಮಳೆಯಾಗಿದೆ. ಗುಬ್ಬಿ 10, ಆನೇಕಲ್, ಕಂಪ್ಲಿ, ತುಮಕೂರು, ಬೆಂಗಳೂರು 7, ಶಿರಾ, ಹೊಸಕೋಟೆ 6, ಹೊಸಪೇಟೆ 5, ವಿಜಯಪುರ, ಲಿಂಗಸಗೂರು, ರಾಯಚೂರು, ಮದ್ದೂರು, ಬಂಗಾರಪೇಟೆ, ವಿರಾಜಪೇಟೆ 4, ಬೈಲಹೊಂಗಲ, ಚಿಂಚೋಳಿ, ಕಲಬುರಗಿ, ನೆಲಮಂಗಲ, ಕನಕಪುರ, ಹುಣಸೂರು, ಮಾಲೂರು 3, ಪುತ್ತೂರು, ಬೀದರ್, ಸಿಂಧನೂರು, ಗಂಗಾವತಿ, ರಾಮನಗರ, ಪಾಂಡವಪುರ 2, ತಿಪಟೂರು, ಕೊರಟಗೆರೆ, ಭದ್ರಾವತಿ, ಶಿಡ್ಲಘಟ್ಟ, ಕೋಲಾರ, ಗುಂಡ್ಲುಪೇಟೆ, ಕುಣಿಗಲ್, ಬೆಳ್ತಂಗಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.