1. ಸುದ್ದಿಗಳು

ಪಿಎಂ ಕಿಸಾನ್‌ ಪಟ್ಟಿಯಿಂದ ಈ ರೈತರನ್ನು ಕೈಬಿಟ್ಟ ಸರ್ಕಾರ! ಯಾರನ್ನು ಗೊತ್ತೆ?

Kalmesh T
Kalmesh T
ಪಿಎಂ ಕಿಸಾನ್‌ ಪಟ್ಟಿಯಿಂದ ಈ ರೈತರನ್ನು ಕೈಬಿಟ್ಟ ಸರ್ಕಾರ..!

ಪಿಎಂ ಕಿಸಾನ್‌ (PM Kisan Samman Nidhi) ಪಟ್ಟಿಯಲ್ಲಿ ಅನರ್ಹರಾಗಿದ್ದ ರೈತರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್‌ ತಿಳಿಸಿದ್ದಾರೆ.

Kharchikayi | ಅಪರೂಪದ ಔಷಧೀಯ ಗುಣ ಹೊಂದಿರುವ “ಕರ್ಚಿಕಾಯಿ”!

PM Kisan Samman Nidhi: ಅನರ್ಹ ರೈತರನ್ನು ಹೊರತುಪಡಿಸಿ ಉಳಿದೆಲ್ಲಾ ಅರ್ಹ ಫಲಾನುಭವಿಗಳು ಪಿಎಂ ಕಿಸಾನ್ ಯೋಜನೆಯ ಪ್ರಯೋಜನ ಪಡೆಯುವುದನ್ನು ಮುಂದುವರಿಸುತ್ತಾರೆ ಎಂದು ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ಹಲವು ನಕಲಿ ನಮೂದುಗಳಿರುವುದರಿಂದ ಅವುಗಳನ್ನು ತೆಗೆದುಹಾಕಬೇಕಾಗಿದೆ ಎಂದು ಕೇಂದ್ರವು ಹೇಳಿದ್ದಾರೆ. (government dropped the ineligible farmers from the PM Kisan list)

ಪ್ರಮುಖ ಯೋಜನೆ ಕಡಿತದ ಬಗ್ಗೆ ರೈತರು ಮತ್ತು ವಿರೋಧ ಪಕ್ಷದ ನಾಯಕರಿಂದ ತೀವ್ರ ವಿರೋಧದ ನಂತರ ಈ ಹೇಳಿಕೆ ಬಂದಿದೆ.

ಏರೋ ಇಂಡಿಯಾ ಶೋ: ಹೊಸ ದಾಖಲೆ ಸೃಷ್ಟಿ, ನೂರು ರಾಷ್ಟ್ರಗಳು, 700ಕ್ಕೂ ಹೆಚ್ಚು ಪ್ರದರ್ಶನ!

PM Kisan Samman Nidhi: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಪ್ರತಿಯೊಬ್ಬ ಅರ್ಹ ಫಲಾನುಭವಿಯೂ ಯೋಜನೆಯ ಪ್ರಯೋಜನಗಳನ್ನು ಪಡೆಯುವುದನ್ನು ಮುಂದುವರಿಸುತ್ತಾರೆ.

ಕೇಂದ್ರ ಬಜೆಟ್ 2023 ರ ಅಂದಾಜಿನ ಪ್ರಕಾರ , ಪಿಎಂ ಕಿಸಾನ್ ಯೋಜನೆಯ ಹಂಚಿಕೆಯು ರೂ 8,000 ಕೋಟಿಗಳಷ್ಟು ಕಡಿಮೆಯಾಗಿದೆ - ಈ ಸಮಯದಲ್ಲಿ ರೈತ ಸಮುದಾಯವು ಹೆಚ್ಚಳಕ್ಕಾಗಿ ಕಾತುರದಿಂದ ಕಾಯುತ್ತಿದೆ.

ಅರ್ಹ ರೈತರಿಗೆ ವಾರ್ಷಿಕ 6000 ರೂ.ಗಳ ಮೂರು ಸಮಾನ ಕಂತುಗಳಲ್ಲಿ 2,000 ರೂ. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

G20 ಭಾರತದ ಅಧ್ಯಕ್ಷತೆ: ಇಂದೋರ್‌ನಲ್ಲಿ ಕೃಷಿ ಪ್ರತಿನಿಧಿಗಳ ಮೊದಲ ಸಭೆ

PM Kisan Samman Nidhi: ಪಟ್ಟಿಯಲ್ಲಿರುವ ಅನರ್ಹ ಫಲಾನುಭವಿಗಳ ಬಗ್ಗೆ ಮಾತನಾಡುತ್ತಾ, ಫಲಾನುಭವಿಯ ಡೇಟಾದ ಸರಿಯಾದ ಪರಿಶೀಲನೆ ಮತ್ತು ಮೌಲ್ಯಾಂಕನದ ನಂತರ ಸತ್ತವರು ಸೇರಿದಂತೆ ಅನರ್ಹ ಫಲಾನುಭವಿಗಳನ್ನು ತೆಗೆದುಹಾಕಲಾಗಿದೆ ಎಂದು ಕೇಂದ್ರ ಹೇಳಿದೆ.

ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಲ್ಲಾ ಅರ್ಹ ಫಲಾನುಭವಿಗಳು ಪಿಎಂ ಕಿಸಾನ್‌ನ ಪ್ರಯೋಜನವನ್ನು ಪಡೆಯುವುದನ್ನು ಮುಂದುವರಿಸುತ್ತಾರೆ ಎಂದು ಸೂಚಿಸಿ ಬಜೆಟ್ ಕಡಿತದ ಪರಿಣಾಮವಿಲ್ಲ ಎಂದು ಹೇಳಿದರು.

ಯೋಜನೆಯಲ್ಲಿ ಸಾಕಷ್ಟು ಡೇಟಾ ನವೀಕರಣಗಳು ನಡೆಯುತ್ತಿವೆ ಮತ್ತು ಫಲಾನುಭವಿಗಳ ಡಿಪ್ಲಿಕೇಶನ್ ಪರೀಕ್ಷೆಯನ್ನು ಕೃಷಿ ಸಚಿವಾಲಯ ಮಾಡುತ್ತಿದೆ ಎಂದು ಸೀತಾರಾಮನ್ ಪ್ರತಿಪಕ್ಷಗಳಿಗೆ ತಿಳಿಸಿದರು.

ಪ್ರತಿಯೊಬ್ಬ ಅರ್ಹ ಫಲಾನುಭವಿಯು ಯೋಜನೆಯ ಪ್ರಯೋಜನವನ್ನು ಪಡೆಯುತ್ತಲೇ ಇರುತ್ತಾರೆ, ಆದ್ದರಿಂದ ಯಾವುದೇ ಕಡಿತವಿಲ್ಲ ಎಂದು ಅವರು ಹೇಳಿದರು.

ಯೋಜನೆಯ ಮೊತ್ತವನ್ನು ಹೆಚ್ಚಿಸುವ ಬಗ್ಗೆ, ಕೃಷಿ ಸಚಿವ ನರೇಂದ್ರ ತೋಮರ್ , ಪಿಎಂ-ಕಿಸಾನ್ ಅಡಿಯಲ್ಲಿ ವರ್ಷಕ್ಕೆ 6,000 ಮೊತ್ತವನ್ನು ಹೆಚ್ಚಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿದ್ದಾರೆ.

Published On: 13 February 2023, 02:28 PM English Summary: PM Kisan Samman Nidhi: The government dropped the ineligible farmers from the list!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.