1. ಸುದ್ದಿಗಳು

ಪೋಷಕರು ವಿದ್ಯಾರ್ಥಿಗಳಿಗೆ ಆರೋಗ್ಯಕರ ವಾತಾವರಣ ಒದಗಿಸಬೇಕು: ರಾಷ್ಟ್ರಪತಿ ದ್ರೌಪದಿ ಮುರ್ಮು

Maltesh
Maltesh
@rashtrapatibhvn

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನಿನ್ನೆಕರ್ನಾಟಕದ ಮುದ್ದೇನಹಳ್ಳಿಯಲ್ಲಿರುವಶ್ರೀ ಸತ್ಯ ಸಾಯಿ ಯುನಿವರ್ಸಿಟಿ ಆಫ್ ಹ್ಯೂಮನ್ ಎಕ್ಸಲೆನ್ಸ್‌ನ 2 ನೇ ಘಟಿಕೋತ್ಸವದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಯವರು, ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯವು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಉನ್ನತ ಶಿಕ್ಷಣವನ್ನು ನೀಡುತ್ತಿದೆ ಮತ್ತು ಉಚಿತ ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸುವ ಮೂಲಕ ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯ ಮಾಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಯಾವುದೇ ಸಮಾಜ ಮತ್ತು ದೇಶದ ಪ್ರಗತಿಗೆ ಗುಣಮಟ್ಟದ ಆರೋಗ್ಯ ಸೇವೆಗಳು ಮೂಲಭೂತ ಅವಶ್ಯಕತೆಯಾಗಿವೆ ಎಂದು ರಾಷ್ಟ್ರಪತಿಯವರು ಹೇಳಿದರು. ಪ್ರತಿಯೊಬ್ಬ ನಾಗರಿಕರಿಗೂ ಕೈಗೆಟುಕುವ ಮತ್ತು ವಿಶ್ವಾಸಾರ್ಹ ಆರೋಗ್ಯ ಸೇವೆಗಳನ್ನು ಖಚಿತಪಡಿಸಿಕೊಳ್ಳುವುದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು. ವಿಶ್ವದ ಅತಿದೊಡ್ಡ ಆರೋಗ್ಯ ವಿಮಾ ಯೋಜನೆಯು ಅನೇಕ ಬಡ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತಿದೆ ಎಂದು ಅವರು ಹೇಳಿದರು.

ಶ್ರೀ ಸತ್ಯ ಸಾಯಿ ಯುನಿವರ್ಸಿಟಿ ಫಾರ್ ಹ್ಯೂಮನ್ ಎಕ್ಸಲೆನ್ಸ್ ಉಚಿತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ನವದೆಹಲಿಯ ಏಮ್ಸ್ ಮತ್ತು ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಈ ಉಪಕ್ರಮವು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಕ್ಷೇತ್ರಗಳಲ್ಲಿ ಮತ್ತಷ್ಟು ಅಭಿವೃದ್ಧಿಯನ್ನು ತರುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಸ್ಪರ್ಧಾ ಯುಗದಲ್ಲಿ ಶೈಕ್ಷಣಿಕ ಉತ್ಕೃಷ್ಟತೆಯನ್ನು ಸಾಧಿಸಲು ಹೆಚ್ಚುತ್ತಿರುವ ಒತ್ತಡದಿಂದಾಗಿ ವಿದ್ಯಾರ್ಥಿಗಳಲ್ಲಿ ಒತ್ತಡ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ ಎಂದು ಅವರು ಹೇಳಿದರು. ಪರೀಕ್ಷೆಯಲ್ಲಿನ ಯಶಸ್ಸು ಮಾತ್ರ ಅವರ ಸಾಮರ್ಥ್ಯದ ಅಳತೆಗೋಲಲ್ಲ. ಶೈಕ್ಷಣಿಕ ಸಾಧನೆಗಳಿಗಿಂತ ಅವರ ವ್ಯಕ್ತಿತ್ವ, ನಡವಳಿಕೆ ಮತ್ತು ಚಾರಿತ್ರ್ಯ ಮುಖ್ಯ ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಪೋಷಕರು ಮತ್ತು ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಆರೋಗ್ಯಕರ ವಾತಾವರಣವನ್ನು ಒದಗಿಸಬೇಕು ಮತ್ತು ಅವರ ಆಸಕ್ತಿಗೆ ಅನುಗುಣವಾಗಿ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಮತ್ತು ಮುಂದುವರಿಸಲು ಸಹಾಯ ಮಾಡಬೇಕು ಎಂದು ರಾಷ್ಟ್ರಪತಿಯವರು ಕರೆ ನೀಡಿದರು.

ಈ ವಿಶ್ವವಿದ್ಯಾನಿಲಯದ ಸುಮಾರು 66 ಪ್ರತಿಶತದಷ್ಟು ವಿದ್ಯಾರ್ಥಿಗಳು ಹೆಣ್ಣುಮಕ್ಕಳಾಗಿದ್ದಾರೆ ಎಂಬ ಅಂಶವನ್ನು ಪ್ರಸ್ತಾಪಿಸಿದ ರಾಷ್ಟ್ರಪತಿಯವರು, ಇಂದು ನಮ್ಮ ಹೆಣ್ಣುಮಕ್ಕಳು ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ವ್ಯಾಪಕವಾಗಿ ಕೊಡುಗೆ ನೀಡುತ್ತಿದ್ದಾರೆ ಎಂದು ಹೇಳಿದರು. ಇದು ನಮ್ಮ ದೇಶದಲ್ಲಿ ಆಗುತ್ತಿರುವ ಬದಲಾವಣೆಗಳ ನೋಟವಾಗಿದೆ. ಸಂಪ್ರದಾಯಗಳ ಬಲವಾದ ಅಡಿಪಾಯದಲ್ಲಿ ಆಧುನಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರು ದೊಡ್ಡ ಪಾತ್ರವನ್ನು ವಹಿಸಬಹುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Published On: 04 July 2023, 03:33 PM English Summary: President Draupadi murmu visit karnataka

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.