1. ಸುದ್ದಿಗಳು

ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Maltesh
Maltesh
Pumpset subsidy application invited

ಶಿವಮೊಗ್ಗ:  ಎಸ್.ಸಿ.ಪಿ. ಹಾಗ ಟಿ.ಎಸ್.ಪಿ ಯೋಜನೆಯಡಿ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಆರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ತಾಲೂಕು ಗ್ರಾಮೀಣ ಉಪವಿಭಾಗ ಮೆಸ್ಕಾಂ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗೆರೆ, ಹೊಳಲೂರು, ಗಾಜನೂರು ಮತ್ತು ಸಂತೇಕಡೂರು ಶಾಖಾ ವ್ಯಾಪ್ತಿಯ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರುವ ರೈತರು ಎಸ್.ಸಿ.ಪಿ. ಹಾಗ ಟಿ.ಎಸ್.ಪಿ ಯೋಜನೆಯಡಿ ಕೃಷಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಆರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮೆಸ್ಕಾ ಕಚೇರಿಯಿಂದ ನಿಗಧಿತ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 7/07/2023ರೊಳಗಾಗಿ ಸಲ್ಲಿಸುವಂತೆ  ಗ್ರಾ.ಉ.ವಿ. ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಬಹುಮಾನ ಹಣಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ:  2023-24 ಸಾಲಿಗೆ ಸಾಗರ ಸಮಾಜ ಕಲ್ಯಾಣ ಇಲಾಖೆಯು ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಪಿ.ಯು.ಸಿ ಮತ್ತು 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ ಕೋರ್ಸ್‍ಗಳಿಗೆ ರೂ.20,000/-, ಪದವಿ ರೂ.25,000/- , ಸ್ನಾತಕೋತ್ತರ ಪದವಿ ಪದವಿ ರೂ.30,000/- ಹಾಗೂ ಕೃಷಿ/ ಇಂಜಿನಿಯರಿಂಗ್/ ವೈದ್ಯಕೀಯ/ ಪಶುವೈದ್ಯಕೀಯ ರೂ.35,000/- ಗಳನ್ನು ಪಡೆಯಲು ಸಮಾಜ ಕಲ್ಯಾಣ ಇಲಾಖೆ ವೆಬ್‍ಸೈಟ್ www.tw.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಾರ್ಡ್ ಕಾಪಿಯನ್ನು ಕಚೇರಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08183-229402/9480843192 ಗಳನ್ನು ಸಂಪರ್ಕಿಸುವಂತೆ ಸಾಗರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Published On: 23 June 2023, 10:20 AM English Summary: Pumpset subsidy application invited

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.