1. ಸುದ್ದಿಗಳು

ಇಂದು ರಾಜ್ಯದ ವಿವಿಧೆಡೆ ಗುಡುಗು ಮಿಂಚಿನ ಮಳೆ

2021ನೇ ವರ್ಷ ಮಳೆಯ ಸಿಂಚನದೊಂದಿಗೆ ಆರಂಭವಾಗಲಿದೆ. ಕಳೆದ ವರ್ಷ  ಆಗಸ್ಟ್, ಅಕ್ಟೋಬರ್  ತಿಂಗಳಲ್ಲಿ ಭಾರಿ ಮಳೆ ಸುರಿದು ದೇಶಾದ್ಯಂತ ಭಾರಿ ಅವಾಂತರ ಸೃಷ್ಟಿಯಾಗಿತ್ತು.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾ ರಾಜ್ಯದಲ್ಲಿ ಜನವರಿ 1 ರಂದು ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ, ಹಾಗೂ ಮೈಸೂರಿನಲ್ಲಿ ಜನ. 1 ರಂದು ಗುಡುಗು ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದೆ.

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರುವುದರಿಂದ ಅಲ್ಲಲ್ಲಿ ತುಂತುರು ಮಳೆಯಾಗಲಿದೆ. 2020ನೇ ವರ್ಷದ ಕೊನೆ ದಿನವಾದ ಗುರುವಾರ ರಾಜ್ಯದ ಕೆಲವೆಡೆ ತುಂತುರು ಮಳೆಯಾಗಿದೆ.

Published On: 01 January 2021, 12:08 AM English Summary: rain alert on January 1st

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.