1. ಸುದ್ದಿಗಳು

ಉದ್ಯಮಶೀಲತಾಭಿವೃದ್ಧಿ ಜಾಗೃತಿ ತರಬೇತಿ ಕಾರ್ಯಕ್ರಮ: ಆಸಕ್ತರಿಂದ ಅರ್ಜಿ ಆಹ್ವಾನ

self employment training

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವ ಹಾಗೂ ಧಾರವಾಡದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್)ದಿಂದ ಸ್ವಯಂ ಉದ್ಯೋಗ ಪ್ರಾರಂಭಿಸಲಿಚ್ಛಿಸುವ ಆಸಕ್ತರಿಗೆ ಕಲಬುರಗಿಯಲ್ಲಿ ಇದೇ ಜುಲೈ 17 ರಂದು ಒಂದು ದಿನದ ಉದ್ಯಮಶೀಲತಾಭಿವೃದ್ಧಿ ಜಾಗೃತಿ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಇದಕ್ಕಾಗಿ ಕಲಬುರಗಿ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಅಭ್ಯರ್ಥಿಗಳು ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಿಡಾಕ್. ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಸರ್ಕಾರಿ ಬಾಲಕರ ಐಟಿಐ ಆವರಣ, ಎಂ.ಎಸ್.ಕೆ. ಮಿಲ್ ರಸ್ತೆ, ಕಲಬುರಗಿ  ವಿಳಾಸಕ್ಕೆ 2021ರ ಜುಲೈ 16 ರೊಳಗಾಗಿ ಸಲ್ಲಿಸಬೇಕು ಅಥವಾ ಮೊಬೈಲ್ ಸಂಖ್ಯೆ 9916006910, 8618797704 ಗಳಿಗೆ ಕರೆ ಮಾಡಿ ತಮ್ಮ ಹೆಸರುವನ್ನು ನೊಂದಾಯಿಸಿಕೊAಡು ಕಾರ್ಯಕ್ರಮಕ್ಕೆ ಹಾಜರಾಗಬಹುದಾಗಿದೆ.

ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಉದ್ಯಮಶೀಲತೆ, ಉದ್ಯಮ ಪ್ರಾರಂಭದ ಹಂತಗಳು, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು, ಸಾಲ ಸೌಲಭ್ಯಗಳು, ಬ್ಯಾಂಕ್ ಬಗ್ಗೆ, ಉದ್ಯಮ ನಿರ್ವಹಣೆ ಮಾಡುವ ವಿಧಾನಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 9916006910, 8618797704 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಬೀದಿ ವ್ಯಾಪಾರಸ್ಥರಿಂದ ಅರ್ಜಿ ಅಹ್ವಾನ

ಚಿಂಚೋಳಿ ಪಟ್ಟಣದ ವ್ಯಾಪ್ತಿಯಲ್ಲಿ ಮಾರಾಟ ಮಾಡುವ ಬೀದಿ ಬದಿ ವ್ಯಾಪಾರಸ್ಥರಿಗೆ ಕೇಂದ್ರ ಪುರಸ್ಕೃತ ಯೋಜನೆಯಾದ ಪಿ.ಎಂ ಸ್ವ ನಿಧಿ ಯೋಜನೆಯಲ್ಲಿ 2ನೇ ಅವಧಿಯ ಸಾಲ ಪಡೆಯಲು ನಗರ ಬೀದಿ ಬದಿ ವ್ಯಾಪಾರಸ್ಥರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಚಿಂಚೋಳಿ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೀದಿ ಬದಿ ವ್ಯಾಪಾರಿಗಳಿಗೆ ಈಗಾಗಲೇ ಬ್ಯಾಂಕನಿಂದ ರೂ 10.000ಗಳನ್ನು ಸಾಲ ಪಡೆದಂತಹ ಬೀದಿ ಬದಿ ವ್ಯಾಪಾರಸ್ಥರಿಗೆ 2ನೇ ಅವಧಿಗಾಗಿ ರೂ.20.000 ಸಾಲ ನೀಡಲು ಬೀದಿ ಬದಿ ವ್ಯಾಪಾರಸ್ಥರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಈಗಾಗಲೇ ಬ್ಯಾಂಕನಿಂದ ಪಡೆದ ಸಾಲವನ್ನು ಪೂರ್ತಿ ಪ್ರಮಾಣದಲ್ಲಿ ಮರು ಪಾವತಿಸಿದ ವ್ಯಾಪಾರಸ್ಥರು ಸಾಲ ಮರು ಪಾವತಿಸಿದ ಕುರಿತು ಸಂಭಂದ ಪಟ್ಟ ಬ್ಯಾಂಕನಿಂದ ಪ್ರಮಾಣ ಪತ್ರ ಪಡೆದು ಮತ್ತು ನಿಗದಿತ ದಾಖಲೆಗಳೊಂದಿಗೆ ಪಿ.ಎಂ ಸ್ವ ನಿಧಿ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ 08475-273058ಗೆ ಅಥವಾ ಚಿಂಚೋಳಿ ಪುರಸಭೆ ಮುಖ್ಯಾಧಿಕಾರಿ ಕಛೇರಿಗೆ ಸಂರ್ಪಕಿಸಬಹುದು.

Published On: 14 July 2021, 06:39 PM English Summary: Self employment training july 17th

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.