1. ಸುದ್ದಿಗಳು

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಗಂಭೀರ ಕ್ರಮ: ನರೇಂದ್ರಸಿಂಗ್‌ ತೋಮರ್‌

Hitesh
Hitesh
Serious action to solve the problem of sugarcane growers: Narendrasingh Tomar

ದೇಶದ ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೂಮರ್ ಹೇಳಿದರು.  

ವಿವಿಧ ರಾಜ್ಯಗಳ ಸಂಸದರು,ರೈತ ಮುಖಂಡರ ನಿಯೋಗವು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಅವರನ್ನು ಮಂಗಳವಾರ ಭೇಟಿ ಮಾಡಿದ ನಂತರ ಅವರು ಮಾತನಾಡಿದರು.

ದೇಶದ ಕಬ್ಬು ಬೆಳೆಗಾರರ ಸಮಸ್ಯೆಗೆ ಗಂಭೀರ ಕ್ರಮ ಕೈಗೊಳುವುದಾಗಿ  ವಿವಿಧ ರಾಜ್ಯಗಳ ಸಂಸದರು,ರೈತ ಮುಖಂಡರ ನಿಯೋಗಕ್ಕೆ ಭರವಸೆ ನೀಡಿದರು.   

ಕಬ್ಬಿನ ಎಫ್‌ಆರ್‌ಪಿ ದರ ನಿಗದಿ ಮಾಡುವಾಗ ಸಕ್ಕರೆ ಇಳುವರಿ ಆಧಾರದಂತೆ ಹಣ ಪಾವತಿ ದಕ್ಷಿಣ ಭಾರತ ರಾಜ್ಯಗಳ ರೈತರಿಗೆ ಅನ್ಯಾಯವಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ 10:25ಕ್ಕೆ ಏರಿಕೆ ಮಾಡಿರುವುದು ಮತ್ತಷ್ಟು ನಷ್ಟ ಅನುಭವಿಸುವಂತಾಗಿದೆ ಕೂಡಲೇ ಸಕ್ಕರೆ ಇಳುವರಿ ಮಾನದಂಡವನ್ನು 8.5ಕ್ಕೆ ಇಳಿಸಬೇಕು.  

ಪ್ರಸಕ್ತ ಸಾಲಿನಲ್ಲಿ 10.25 ಕೆ ಏರಿಕೆ ಮಾಡಿರುವುದರಿಂದ ದಕ್ಷಿಣ ರಾಜ್ಯಗಳ ರೈತರಿಗೆ ಕಡಿಮೆ ಇಳುವರಿ ಇರುವ ಕಾರಣ 325 ರೂ ನಷ್ಟ ಆಗುತ್ತಿದೆ ಎಂದು ರೈತ ಮುಖಂಡರು ಸಚಿವರಿಗೆ ಮನವರಿಕೆ ಮಾಡಿದರು.  

ಪ್ರಸಕ್ತ ಸಾಲಿನಲ್ಲಿ ಎಫ್‌ಆರ್‌ಪಿ ದರವನ್ನು ಕ್ವಿಂಟಲ್‌ಗೆ 305 ನಿಗದಿ ಮಾಡಿರುವುದನ್ನು ಪುನರ್ ಪರಿಶೀಲನೆ ನಡೆಸಿ, 350ರೂಪಾಯಿಗೆ ಏರಿಕೆ ಮಾಡಬೇಕು.

ರಸಗೊಬ್ಬರದ ಬೆಲೆ ಎರಿಕೆ ಕಬ್ಬು ಕಟಾವ್ ಸಾಗಾಣಿಕೆ ವೆಚ್ಚ, ಕಬ್ಬಿನ ಬೀಜದ ಬೆಲೆ  ಏರಿಕೆಗೆ ಅನುಗುಣವಾಗಿ ಎಫ್‌ಆರ್ಪಿ ಏರಿಕೆ ಮಾಡಿಲ್ಲ ಆದ್ದರಿಂದ ಪುನರ್ ಪರಿಶೀಲಿಸಬೇಕು.

ಕಬ್ಬು ಕಟಾವು ಸಾಗಣಿಕೆ 15- 16 ತಿಂಗಳು ಆಗುತ್ತಿರುವ ಕಾರಣ ರೈತನ ಸಾಲದ ಮರುಪಾವತಿ ಅವಧಿ ಸುಸ್ತಿ ಆಗುತ್ತಿದೆ.  

ಕಬ್ಬಿನ ತೂಕ ಕಡಿಮೆಯಾಗುತ್ತದೆ ಆದಕಾರಣ 12 ತಿಂಗಳ ನಂತರ ವಿಳಂಬದ ಅವಧಿಗೆ ಕಟವು ಮಾಡುವ ಕಬ್ಬಿಗೆ ಶೇಕಡ 15 ಬಡ್ಡಿ ಸೇರಿಸಿಕೊಡಲು ಆದೇಶ ಹೊರಡಿಸಿ, ಅಥವಾ ಕಬ್ಬು ಬೆಳೆ ಸಾಲಕ್ಕೆ 20 ತಿಂಗಳ ಮರುಪಾವತಿ ಅವಧಿ ಬಡ್ಡಿ ವಿನಾಯಿತಿ ನೀಡಿ ಅವಕಾಶ ಕಲ್ಪಿಸಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮಂಡಿಸಿದರು.   

ಕಬ್ಬಿನ ಸಾಲದ ಕಂತು ಪಾವತಿ ವಿಳಂಬವಾಗುತ್ತಿರುವ ಕಾರಣ ರೈತನಿಗೆ ಸಿಬಿಲ್ ಸ್ಕೋರ್‌ನಲ್ಲಿ ಸಾಲ ಸಿಗುತ್ತಿಲ್ಲ. ಹೀಗಾಗಿ, ಕೃಷಿ ಸಾಲ ರೈತರಿಗೆ ನೀಡುವಾಗ ಸಿಬಿಲ್ ಸ್ಕೋರ್ ಮಾನದಂಡ ಕೈಬಿಡಬೇಕು.

ಕಬ್ಬಿನಿಂದ ಬರುವ ಸಕ್ಕರೆ ಇಳುವರಿ ಪರಿಶೀಲನೆ  ವರದಿ ಸಲ್ಲಿಸುವುದು ಕಾರ್ಖಾನೆಗಳೆ ಆದಕಾರಣ ಇಳುವರಿಯಲ್ಲಿ ಮೋಸ ತೋರಿಸುತ್ತಿದ್ದಾರೆ ರೈತರಿಗೆ ನಷ್ಟವಾಗುತ್ತಿದೆ.

ಪ್ರತಿ ರೈತರ ಹೊಲದಲ್ಲಿ ಸಕ್ಕರೆ ಇಳುವರಿ ಪರೀಕ್ಷೆ ಮಾಡಿ ರೈತನ ಸಹಿ ಪಡೆದು ನಂತರ ಕಟಾವು ಮಾಡಿಸುವ ಪದ್ಧತಿ ಜಾರಿಗೆ ತನ್ನಿ ಇದರ ಆಧಾರದಲ್ಲಿ ರೈತನಿಗೆ ಎಫ್ ಆರ್ ಪಿ ಹಣ ಕೊಡಿಸಿ,  ಸಕ್ಕರೆ ನಿಯಂತ್ರಣ ಕಾಯ್ದೆ 1966ರ ಪ್ರಕಾರ ಕಬ್ಬು ಸರಬರಾಜು ಮಾಡಿದ 14 ದಿನದಲ್ಲಿ ರೈತನಿಗೆ ಹಣ ಪಾವತಿ ಆಗಬೇಕು. ಆದರೆ ಯಾವುದೇ ಕಾರ್ಖಾನೆಗಳು ಪಾಲನೆ ಮಾಡುತ್ತಿಲ್ಲ ಆದ್ದರಿಂದ ಕಾನೂನು ತಿದ್ದುಪಡಿ ಮಾಡಿ ಈ ಕಾನೂನು ಉಲ್ಲಂಘಿಸುವ ಕಾರ್ಖಾನೆ ಮಾಲೀಕರ ವಿರುದ್ಧ ರೈತರು ಕ್ರಿಮಿನಲ್ ಮುಖದಮೆ ದಾಖಲಿಸುವ ಅಧಿಕಾರ ನೀಡಿ, ಆಗ ಕಾರ್ಖಾನೆಗಳು ಕಾನೂನು ನಿಯಮ ಪಾಲಿಸುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

Cylinder ಬಳಕೆದಾರರಿಗೆ ಸಿಹಿಸುದ್ದಿ: ಮುಂದಿನ ತಿಂಗಳಿಂದ ಕೇವಲ 500ಕ್ಕೆ ಸಿಗಲಿದೆ ಸಿಲಿಂಡರ್‌ !

Serious action to solve the problem of sugarcane growers: Narendrasingh Tomar

ರೈತರಿಗೆ ಕಬ್ಬು ಹಣ ಪಾವತಿ ವಿಳಂಬದ ಅವಧಿಗೆ ಶೆ 15 ಹೆಚ್ಚುವರಿ ಬಡ್ಡಿ ನಿಡುವಂತಾಗುತ್ತದೆ, ರೈತರಿಗೆ ನಷ್ಟ ತಪ್ಪುತ್ತದೆ. ಕಬ್ಬಿನ ಎಫ್ ಆರ್ ಪಿ ದರವನ್ನು ಹಿಂದಿನ ವರ್ಷ ಕಬ್ಬು ಪೂರೈಕೆ ಮಾಡಿದ ರೈತರ ಸಕ್ಕರೆ ಇಳುವರಿ ಮಾನದಂಡವನ್ನು ಪರಿಗಣಿಸಿ, ಪ್ರಸಕ್ತ ಸಾಲಿನಲ್ಲಿ ಕಬ್ಬು ಪೂರೈಕೆ ಮಾಡಿದ ರೈತರಿಗೆ ಎಫ್‌ಆರ್ಪಿ  ಲೆಕ್ಕ ಹಾಕಿ ಹಣ ಪಾವತಿಸುವುದು ಅವೈಜ್ಞಾನಿಕವಾಗಿದೆ,ಎಪ್ ಆರ್ ಪಿ ನಿಯಮ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದರು. 

Serious action to solve the problem of sugarcane growers: Narendrasingh Tomar

ಕಬ್ಬಿನ ಎಫ್ ಆರ್‌ಪಿ ದರದಲ್ಲಿ ಕಟಾವು ಸಾಗಾಣಿಕೆ ವೆಚ್ಚ ಎಕ್ಸ್ ಗೇಟ್ ಆಗಿರುವ ಕಾರಣ, ಕಾರ್ಖಾನೆಗಳು ರೈತರ ಹಣದಲ್ಲಿ ಕಡಿತ ಮಾಡುವಾಗ ಯಾವುದೇ ಮಾನದಂಡವಿಲ್ಲದೆ ತಮ್ಮ ಮನ ಬಂದಂತೆ ಟನ್ ಕಬ್ಬಿಗೆ 1000 ರೂ ತನಕ ಕಡಿತ ಮಾಡುತ್ತಿದ್ದಾರೆ ಇದರಿಂದ ರೈತರಿಗೆ ನಷ್ಟ ಲಾಗುತ್ತಿದೆ, ಕಟಾವು ಕೂಲಿ ಸಾಗಾಣಿಕೆ ವೆಚ್ಚ ನಿಗದಿ ನಿಯಮ ರೂಪಿಸಿ, ಸುಲಿಗೆ ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಎಲ್ಲ ಒತ್ತಾಯಗಳ ಬಗ್ಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೂಮರ ಅವರ ಗೃಹಕಚೇರಿಯಲ್ಲಿ ನಿಯೋಗದೊಂದಿಗೆ ಭೇಟಿ ಮಾಡಿ ಚರ್ಚಿಸಲಾಯಿತು.

ನಂತರ ರಸಗೊಬ್ಬರ ರಾಜ್ಯ ಸಚಿವ ಭಗವಂತ್ ಕೂಬಾ ಅವರನ್ನು ಶಾಸ್ತ್ರಿ ಭವನದ ಕಚೇರಿಯಲ್ಲಿ ಭೇಟಿ ಮಾಡಿ ಓತ್ತಾಯ ಪತ್ರ ಸಲ್ಲಿಸಿ ವಿವರವಾಗಿ ಚರ್ಚಿಸಲಾಯಿತು, ನಿಯೋಗದಲ್ಲಿ ಲೋಕಸಭಾ ಸದಸ್ಯರಾದ ನಾಮ ನಾಗೇಶ್ವರ ರಾವ್, ಎ ಗಣೇಶ ಮೂರ್ತಿ, ಸುಮಲತಾ ಅಂಬರೀಶ್, ಎಲ್. ಹನುಮಂತಯ್ಯ ಕರ್ನಾಟಕ ರೈತ ಮುಖಂಡರಾದ ಕುರುಬೂರು ಶಾಂತಕುಮಾರ್ ರಾಜ್ಯಾಧ್ಯಕ್ಷರು ರಾಜ್ಯ ಕಬ್ಬು ಬೆಳೆಗಾರ ಸಂಘ ಕರ್ನಾಟಕ, ಪರಶುರಾಮ್ ಎತ್ತಿನಗುಡ್ಡ , ದೈವಸಿಗಾಮಣಿ, ನರಸಿಂಹ ನಾಯ್ಡು, ವೆಂಕಟೇಶ್ವರ ರಾವ್, ಸ್ವಾಸ್ತಿಸುಂದರ್ ಸಿಯಾ, ರಾಮನಗೌಡರ್, ಬಾಲಸುಬ್ರಹ್ಮಣ್ಯಂ, ಟಿಪಿಕೆ ರಾಜೇಂದ್ರನ್  ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಇದ್ದರು.  

ಕೃಷಿ ಸಚಿವಾಲಯದಿಂದ ಸಂಸತ್ತಿನಲ್ಲಿ ರಾಗಿ ಆಹಾರ ಉತ್ಸವ: ಕರ್ನಾಟಕದ ಪ್ರಮುಖ ಆಹಾರ ಅನಾವರಣ!

Published On: 21 December 2022, 11:32 AM English Summary: Serious action to solve the problem of sugarcane growers: Narendrasingh Tomar

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.