1. ಸುದ್ದಿಗಳು

ಬೆಳೆ ಹಾನಿಯಾದ ರೈತರಿಗೆ ವಿಮೆ ಪರಿಹಾರ: ಬಾಂಬೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

Maltesh
Maltesh

ಭಾರೀ ಮಳೆಯಿಂದಾಗಿ 2020ರಲ್ಲಿ ಸೋಯಾಬೀನ್ ಬೆಳೆನಷ್ಟ ಅನುಭವಿಸಿದ ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ 3.5 ಲಕ್ಷಕ್ಕೂ ಹೆಚ್ಚು ರೈತರಿಗೆ ಪರಿಹಾರ ನೀಡುವಂತೆ Bajal Alianz ಜನರಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್‌ಗೆ ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠ ಇತ್ತೀಚೆಗೆ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಗುರುವಾರ ತಡೆ ನೀಡಿದೆ.

ವಿಮಾ ಕಂಪೆನಿ 6 ವಾರಗಳಲ್ಲಿ ಪರಿಹಾರ ಒದಗಿಸಬೇಕು. ವಿಫಲವಾದರೆ ಸರ್ಕಾರವೇ ಇನ್ನು ಆರು ವಾರಗಳಲ್ಲಿ ಅದನ್ನು ಪಾವತಿಸಬೇಕಾಗುತ್ತದೆ ಎಂದು ಔರಂಗಾಬಾದ್ ಪೀಠ ನೀಡಿದ್ದ ಆದೇಶಕ್ಕೆ ನ್ಯಾಯಮೂರ್ತಿಗಳಾದ ಜೆ ಕೆ ಮಹೇಶ್ವರಿ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠ ತಡೆ ನೀಡಿತು.

ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ಪರಿಹಾರ ಒದಗಿಸದೇ ಇರುವುದನ್ನು ಪ್ರಶ್ನಿಸಿ ರೈತರು ನ್ಯಾಯಾಲಯದ ಮೊರೆ ಹೋಗಿದ್ದರು. ವಿಮಾ ರಕ್ಷಣೆಗಾಗಿ ವಿಮಾ ಕಂತು ಪಾವತಿಸಿದ್ದೇವೆ. ಪ್ರೀಮಿಯಂನ ಒಂದು ಭಾಗವನ್ನು ಕೃಷಿಕರ ಪರವಾಗಿ ರಾಜ್ಯ ಸರ್ಕಾರ ಕೂಡ ಪಾವತಿಸಿದೆ. ಪರಿಹಾರ ದೊರಕಿಸಿಕೊಡುವಂತೆ ವಿಮಾ ಕಂಪೆನಿಗೆ ನಿರ್ದೇಶನ ನೀಡಬೇಕು. ಒಟ್ಟು 3,57,287 ಕೃಷಿಕರಿಗೆ ಪರಿಹಾರ ನೀಡಲು ಕಂಪೆನಿ ನಿರಾಕರಿಸಿದರೆ ಆ ಹೊಣೆಯನ್ನು ಸರ್ಕಾರವೇ ಹೊರುವಂತೆ ಸೂಚಿಸಬೇಕು ಎಂದು ಕೋರಿದ್ದರು.

ಆದಾಗ್ಯೂ, ನ್ಯಾಯಮೂರ್ತಿಗಳಾದ ಜೆಕೆ ಮಹೇಶ್ವರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಜೂನ್ 16 ರಿಂದ ಪ್ರಾರಂಭವಾಗುವ ಆರು ವಾರಗಳಲ್ಲಿ 200 ಕೋಟಿ ರೂಪಾಯಿಗಳನ್ನು ತನ್ನ ನೋಂದಾವಣೆಯೊಂದಿಗೆ ಠೇವಣಿ ಮಾಡುವಂತೆ ವಿಮಾ ನಿಗಮಕ್ಕೆ ಸೂಚಿಸಿದೆ.

ಕೋಳಿ ಸಾಕಣೆಗೆ ಮುನ್ನ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಯಾವವು..?

Indoor Fish Farming: ಒಳಾಂಗಣ ಮೀನು ಸಾಕಾಣಿಕೆ ಮಾಡಿ 3 ಪಟ್ಟು ಲಾಭ ಗಳಿಸಿ

2020 ರ ಖಾರಿಫ್ ಋತುವಿನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ನಷ್ಟವನ್ನು ಅನುಭವಿಸಿದ ಮಹಾರಾಷ್ಟ್ರದ ಒಸ್ಮಾನಾಬಾದ್ ಪ್ರದೇಶದ ಸೋಯಾ ಬೀನ್ ರೈತರಿಗೆ ಮರುಪಾವತಿ ಮಾಡುವಂತೆ ಔರಂಗಾಬಾದ್‌ನಲ್ಲಿರುವ ಬಾಂಬೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್ ವಿಮಾ ಸಂಸ್ಥೆಗೆ ಸೂಚನೆ ನೀಡಿದೆ.

ಜೂನ್ 16 ರಂದು, ವಿಮಾ ಸಂಸ್ಥೆಯ ಮೇಲ್ಮನವಿಯ ಮೇಲೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತು, "ಈ ಮಧ್ಯೆ, ಅರ್ಜಿದಾರರು ಈ ನ್ಯಾಯಾಲಯದ ರಿಜಿಸ್ಟ್ರಿಯಲ್ಲಿ ಹಲವಾರು ರೂ. 200 ಕೋಟಿಗಳನ್ನು ಠೇವಣಿ ಮಾಡುವುದಕ್ಕೆ ಒಳಪಟ್ಟಿರುತ್ತದೆ, ಈ ಮಧ್ಯೆ, ದೋಷಾರೋಪಣೆಯ ತೀರ್ಪಿನ ಅನುಷ್ಠಾನಕ್ಕೆ ತಡೆ ಇರುತ್ತದೆ. ಇಂದಿನಿಂದ ಆರು ವಾರಗಳು, ವಿನಂತಿಸಿದಂತೆ." 

ಭತ್ತದ ಕೃಷಿಯಲ್ಲಿ ಮೀನುಗಾರಿಕೆ: ಈಗ ರೈತರು ಎರಡೆರಡು ಲಾಭ ಪಡೆಯಬಹುದು!

ತೀರ್ಪು ನೀಡುವ ವೇಳೆ ನ್ಯಾಯಾಲಯವು ಕಂಪೆನಿಯ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಒಸ್ಮಾನಾಬಾದ್‌ ಜಿಲ್ಲೆಯಿಂದ ಕಂಪೆನಿಗೆ ₹ 500 ಕೋಟಿ ಪ್ರೀಮಿಯಂ ಪಾವತಿಯಾಗಿದೆ. ಜಿಲ್ಲೆಯ 72,325 ಕೃಷಿಕರಿಗೆ ₹ 87.87 ಕೋಟಿ ಪರಿಹಾರ ಮೊತ್ತ ಪಾವತಿಸಲಾಗಿದೆ ಎನ್ನುವುದನ್ನು ಗಮನಿಸಿತ್ತು.

"ಬೆಳೆನಷ್ಟದ ದಿನದಿಂದ 72 ಗಂಟೆಗಳ ಒಳಗೆ ಕೃಷಿಕರು ಯಾವುದೇ ಸೂಚನೆ ಅಥವಾ ದೂರು ನೀಡಿಲ್ಲ ಎಂಬ ಕಾರಣಕ್ಕೆ ಬಹಳಷ್ಟು ರೈತರಿಗೆ ಪರಿಹಾರ ಒದಗಿಸಲಾಗಿಲ್ಲ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ವ್ಯಾಪ್ತಿ ಮೀರಿ ಪರಿಹಾರ ಕೋರಲಾಗಿದೆ ಎಂಬ ವಿಮಾ ಕಂಪೆನಿಯ ವಾದದಲ್ಲಿ ಹುರುಳಿಲ್ಲ" ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿತ್ತು

 ಕೆ.ಜಿ ಜೇನು ತುಪ್ಪಕ್ಕೆ 8.8 ಲಕ್ಷ ಎಂದರೆ ನೀವು ನಂಬುತ್ತೀರಾ? ಹೌದು! ಇಲ್ಲಿದೆ “ಮೇ 20 - ವಿಶ್ವ ಜೇನು ದಿನ”ದ ನಿಮಿತ್ತ ಕುತೂಹಲಕಾರಿ ಲೇಖನ

ಜೂನ್‌ 1 "ವಿಶ್ವ ಹಾಲು ದಿನ": ಹಾಲಿನ ಪ್ರಾಮುಖ್ಯತೆ ಮತ್ತು ಅದರ ವಿಶಿಷ್ಟ ಪ್ರಯೋಜನಗಳೇನು ಗೊತ್ತಾ?

Published On: 21 June 2022, 04:09 PM English Summary: Supreme Court Stays Bombay Highcourt Order

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.