News

Cyclone Michong: ಧಾರಾಕಾರ ಮಳೆಗೆ ನಲುಗಿದ ತಮಿಳುನಾಡು, ಐವರು ಸಾವು!

05 December, 2023 10:17 AM IST By: Hitesh
ತಮಿಳುನಾಡಿನಲ್ಲಿ ಧಾರಾಕಾರ ಮಳೆ (ಚಿತ್ರಕೃಪೆ: ಪಿಕ್ಸೆಲ್ಸ್‌)

ಮಿಚಾಂಗ್‌ (Cyclone Michong) ಚಂಡಮಾರುತದ ಪ್ರಭಾವದಿಂದಾಗಿ ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ.

ತಮಿಳುನಾಡಿನ ಚೆನ್ನೈ ಈ ಹಿಂದೆ ಎಂದೂ ಕಾಣದಂತಹ ಪ್ರವಾಹಕ್ಕೆ ತುತ್ತಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಅಲ್ಲದೇ ಧಾರಾಕಾರ ಮಳೆಯಿಂದಾಗಿ ತಮಿಳುನಾಡಿನ ಚೆನ್ನೈನಲ್ಲಿ ಇಲ್ಲಿಯ ವರೆಗೆ 5 (ಸೋಮವಾರ ಸಂಜೆಯ ವರೆಗೆ 5 ಜನ ಮೃತಪಟ್ಟಿದ್ದಾರೆ).  

ಚಂಡಮಾರುತದ (Michong Cyclone) ಮುನ್ನೆಚ್ಚರಿಕೆಯ ಭಾಗವಾಗಿ ತಮಿಳುನಾಡು ಸರ್ಕಾರ ನಾಳೆ ಚೆನ್ನೈ, ತಿರುವಳ್ಳೂರು

ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಿಗೆ ಸಾರ್ವಜನಿಕ ರಜೆ ಘೋಷಿಸಿದೆ.  

ಚೆನ್ನೈನಲ್ಲಿ ಸುರಿದ ಭಾರೀ ಮಳೆಯಿಂದಾಗಿ ವಿವಿಧ ಪ್ರದೇಶಗಳು ಜಲಾವೃತವಾಗಿವೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಚೆನ್ನೈ, ತಿರುವಳ್ಳೂರು, ಕಂಚಿ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ನಾಲ್ಕು ಜಿಲ್ಲೆಗಳಲ್ಲಿ, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಸಾರ್ವಜನಿಕ ರಜೆಯ ಅಧಿಸೂಚನೆ ಹೊರಡಿಸಲಾಗಿದೆ.

ಅಲ್ಲದೇ ಬ್ಯಾಂಕ್‌ಗಳಿಗೆ ರಜೆ ನೀಡಲಾಗಿದ್ದು, ಆಸ್ಪತ್ರೆಗಳು, ಔಷಧಾಲಯಗಳು, ಹಾಲು, ಕುಡಿಯುವ ನೀರು, ವಿದ್ಯುತ್ ಸರಬರಾಜು

ರೆಸ್ಟೋರೆಂಟ್‌ಗಳು, ಸಾರಿಗೆ, ಪೆಟ್ರೋಲ್ ಸ್ಟಾಕ್‌ಗಳು ಸೇರಿದಂತೆ ಅಗತ್ಯ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಎಂದು ಸರ್ಕಾರ ತಿಳಿಸಿದೆ.

ಚೆನ್ನೈ ಹವಾಮಾನ ಇಲಾಖೆಯ ಮುನ್ಸೂಚನೆ

05-12-2023 ರಂದು ಬೆಳಿಗ್ಗೆ ಬಬಟ್ಲಾ ಬಳಿಯ ನೆಲ್ಲೂರು ಮತ್ತು ವಿಶಾಖಪಟ್ಟಣಂ ನಡುವೆ ದಕ್ಷಿಣ ಆಂಧ್ರದ ಕರಾವಳಿ ಭಾಗದಲ್ಲಿ ಚಂಡಮಾರುತದ

ಪ್ರಭಾವ ಕಾಣಿಸಿಕೊಳ್ಳಲಿದ್ದು, ಆ ಸಮಯದಲ್ಲಿ  ಗಾಳಿಯ ವೇಗ ಗಂಟೆಗೆ 90 ರಿಂದ 100 ಕಿಮೀ ಮತ್ತು ಕೆಲವೊಮ್ಮೆ 110 ಕಿಮೀ ತಲುಪಬಹುದು.

04.12.2023; ತಮಿಳುನಾಡು ಮತ್ತು ಪುದುವಾಯಿ ಮತ್ತು ಕಾರೈಕಾಲ್‌ನ ಹಲವೆಡೆ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ತಿರುವಳ್ಳೂರು, ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ ಮತ್ತು ರಾಣಿಪೇಟ್ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಬಹುದು.

ತಿರುವಳ್ಳೂರು ಜಿಲ್ಲೆಯ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ವೆಲ್ಲೂರು, ತಿರುವಣ್ಣಾಮಲೈ ಮತ್ತು ವಿಲ್ಲುಪುರಂ ಜಿಲ್ಲೆಗಳಲ್ಲಿ

ಒಂದೋ ಎರಡೋ ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

05.12.2023: ತಮಿಳುನಾಡು, ಪುದುವೈ ಮತ್ತು ಕಾರೈಕಲ್‌ನ ಕೆಲವು ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗಬಹುದು.

ತಿರುವಳ್ಳೂರು ಮತ್ತು ಇರಾನಿಪೇಟೆ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.