News

ಈ ರಾಜ್ಯದಲ್ಲಿ ನಿರುದ್ಯೋಗಿ ಯುವಕರಿಗೆ ಸಿಗಲಿದೆ ಮಾಸಿಕ 2,500 ಸಾವಿರ!

01 February, 2023 8:00 PM IST By: Hitesh
The unemployed youth in this state will get 2,500 thousand monthly!

ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಪ್ರತಿ ತಿಂಗಳು 2500 ರೂಪಾಯಿ ಸಹಾಯಧನ ನೀಡುವುದಾಗಿ ಈ ರಾಜ್ಯ ಸರ್ಕಾರದ ವತಿಯಿಂದ ಘೋಷಿಸಲಾಗಿದೆ. ಈ ಘೋಷಣೆಗೆ ಯುವಕರು ಸಂತಸ ವ್ಯಕ್ತಪಡಿಸಿದ್ದಾರೆ. 

ಬಜೆಟ್ 2023: ಮಹಿಳೆಯರಿಗೆ ಉಳಿತಾಯ ಖಾತೆಯ ಮೂಲಕ 7.5% ಬಡ್ಡಿ!

ಮುಖ್ಯಮಂತ್ರಿ ಘೋಷಣೆ

ನೀವು ನಿರುದ್ಯೋಗಿ ಯುವಕರಿಗೆ ನೆರವಾಗುವ ಉದ್ದೇಶದಿಂದ ಇಲ್ಲೊಂದು ಸರ್ಕಾರ ಮಹತ್ವದ ಹೆಜ್ಜೆಯನ್ನು ಇರಿಸಿದೆ. ಹೌದು ನಿರುದ್ಯೋಗಿ ಯುವಕರಿಗೆ ಆಶಾದಾಯ ಸುದ್ದಿಯೊಂದನ್ನು ನೀಡಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಛತ್ತೀಸ್‌ಗಢ ರಾಜ್ಯ ಸರ್ಕಾರವು ಯುವಕರಿಗೆ ನಿರುದ್ಯೋಗ ಭತ್ಯೆಯನ್ನು ಘೋಷಿಸಿದೆ.

ರಾಜ್ಯದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್ ಬಾಗಲ್ ಘೋಷಿಸಿದ್ದಾರೆ.

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿದೇನು,ಬಜೆಟ್‌ ಹೈಲೆಟ್ಸ್‌ ಇಲ್ಲಿದೆ!

ಬಾಗಲ್ ಟ್ವೀಟ್

ಮುಂದಿನ ಆರ್ಥಿಕ ವರ್ಷದಿಂದ ವಿದ್ಯಾರ್ಥಿವೇತನವನ್ನು ನೀಡಲಾಗುವುದು ಎಂದು ಬಾಗಲ್ ಟ್ವೀಟ್ ಮಾಡಿದ್ದಾರೆ. 2018ರ ಚುನಾವಣಾ ಪ್ರಚಾರದ ವೇಳೆ ನಿರುದ್ಯೋಗ ನಿರ್ಮೂಲನೆಗೆ ಕಾಂಗ್ರೆಸ್ ಈ ಭರವಸೆ ನೀಡಿತ್ತು.

ಮುಂದಿನ ಆರ್ಥಿಕ ವರ್ಷದಿಂದ

15 ವರ್ಷಗಳ ನಂತರ ಈ ಚುನಾವಣಾ ಭರವಸೆಯ ಆಧಾರದ ಮೇಲೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಿದೆ.

ಕೇಂದ್ರ ಬಜೆಟ್‌ 2023 ಮಹಿಳೆಯರಿಗೆ ಕಹಿಸುದ್ದಿ: ಚಿನ್ನ, ಬೆಳ್ಳಿ ದರ ತುಟ್ಟಿ! ಯಾವೆಲ್ಲ ವಸ್ತುಗಳ ಬೆಲೆ ಏರಿಕೆ, ಇಳಿಕೆ ಇಲ್ಲಿದೆ ವಿವರ

ಈ ವೇಳೆ ನಿರುದ್ಯೋಗಿ ಯುವಕ-ಯುವತಿಯರಿಗೆ ಮುಂದಿನ ಆರ್ಥಿಕ ವರ್ಷದಿಂದ ನಿರುದ್ಯೋಗ ಭತ್ಯೆ ನೀಡುವುದಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಘೋಷಣೆ ಮಾಡಲಾಗಿದೆ.

ತಿಂಗಳಿಗೆ 2,500 ರೂಪಾಯಿ ಸಹಾಯಧನ

ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರತಿ ತಿಂಗಳು 2500 ರೂಪಾಯಿ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ಯೋಜನೆಗೆ ಮಾನದಂಡ, ಮೊತ್ತ ಮತ್ತು ಬಜೆಟ್ ಹಂಚಿಕೆ ಕುರಿತು ಸರ್ಕಾರ ಚರ್ಚಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ರಾಜಸ್ಥಾನ ಸರ್ಕಾರ

ರಾಜ್ಯ ಸರ್ಕಾರಿ ಅಧಿಕಾರಿಗಳು ಪ್ರಸ್ತುತ ರಾಜಸ್ಥಾನ ಸರ್ಕಾರದ ಮಾದರಿಯಲ್ಲಿ ನಿರುದ್ಯೋಗ ಭತ್ಯೆಗಳನ್ನು ಅಧ್ಯಯನ ಮಾಡುತ್ತಿದ್ದಾರೆ. ರಾಜಸ್ಥಾನ ಸರ್ಕಾರವು 'ಮುಖ್ಯಮಂತ್ರಿ ಯುವ ಸಂಬಲ್ ಯೋಜನೆ' ಯೋಜನೆಯಡಿ 2019 ರಿಂದ ಯುವಕರಿಗೆ ನಿರುದ್ಯೋಗ ಭತ್ಯೆಗಳನ್ನು ನೀಡುತ್ತಿದೆ.

ಛತ್ತೀಸ್‌ಗಢವು ಒಟ್ಟು ದೇಶೀಯ ಉತ್ಪನ್ನದ (ಜಿಡಿಪಿ) 26.2% ರಷ್ಟು ಸಾಲದ ಹೊರೆಯನ್ನು ಹೊಂದಿದೆ. ಇದಲ್ಲದೇ ಮುಖ್ಯಮಂತ್ರಿಗಳು ಕಾರ್ಮಿಕರು ಮತ್ತು ಮಹಿಳೆಯರಿಗೆ ಹಲವಾರು ಕಲ್ಯಾಣ ಯೋಜನೆಗಳನ್ನು ಘೋಷಿಸಿದರು. ಇದರಿಂದ ಆರ್ಥಿಕ ಹೊರೆ ಹೆಚ್ಚಿದೆ.

ಅಂತಹ ವಾತಾವರಣದಲ್ಲಿ, ಪ್ರಸ್ತುತ ಘೋಷಿಸಲಾದ ನಿರುದ್ಯೋಗ ಭತ್ಯೆ ಯೋಜನೆಯು ಸರ್ಕಾರಕ್ಕೆ ಹೆಚ್ಚುವರಿ ವೆಚ್ಚವನ್ನು ಉಂಟುಮಾಡುತ್ತದೆ ಎಂದು ಪರಿಗಣಿಸಲಾಗಿದೆ. ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ನಿರುದ್ಯೋಗ ಭತ್ಯೆ ಯೋಜನೆಯನ್ನು ಘೋಷಿಸಲಾಗಿದೆ ಎಂಬುದು ಗಮನಾರ್ಹವಾಗಿದೆ.  

ಕೇಂದ್ರ ಸರ್ಕಾರದ 2023-24ನೇ ಸಾಲಿನ ಬಜೆಟ್‌: ಕೃಷಿ ಕ್ಷೇತ್ರಕ್ಕೆ ಉತ್ತೇಜನದ ನಿರೀಕ್ಷೆ