News

ಹವಾಮಾನ ವರದಿ; ರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಮಳೆ ಸುರಿಯುವ ಸಾಧ್ಯತೆ-IMD

07 September, 2022 10:57 AM IST By: Maltesh
weather report; Heavy rain is likely in the state for the next 2 days-IMD

ಭಾರತೀಯ ಹವಾಮಾನ ಇಲಾಖೆ ಅಂದರೆ  IMD ಇಂದು ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. ಇಂತಹ ಪರಿಸ್ಥಿತಿಯಲ್ಲಿ ಇಂದು ನಿಮ್ಮ ರಾಜ್ಯದಲ್ಲಿ ಮಳೆಯ ಬಗ್ಗೆ ಯಾವ ಮುನ್ಸೂಚನೆ ನೀಡಲಾಗಿದೆ ಎಂಬುದನ್ನು ಪರಿಶೀಲಿಸಿ.

ಸಹಜವಾಗಿಯೇ ದೇಶದ ರಾಜಧಾನಿ ದೆಹಲಿಯಲ್ಲಿ ಈ ಬಾರಿ ಉತ್ತಮ ಮುಂಗಾರು ಮಳೆ ಇನ್ನೂ ಕಾಣಿಸಿಕೊಂಡಿಲ್ಲ, ಆದರೆ ಉಳಿದ ರಾಜ್ಯಗಳಲ್ಲಿ ಮುಂಗಾರು ಮಳೆ ಅವಾಂತರ ಸೃಷ್ಟಿಸಿದೆ.

ಗ್ರಾಹಕರಿಗೆ ಗುಡ್‌ನ್ಯೂಸ್‌: ಖಾದ್ಯ ತೈಲ ಬೆಲೆಯಲ್ಲಿ ಭಾರೀ  ಇಳಿಕೆ..ಇಲ್ಲಿದೆ ಬಿಗ್‌ ಅಪ್‌ಡೇಟ್‌

ಈಗಲೂ ಅದರ ಪರಿಣಾಮ ಹಲವು ರಾಜ್ಯಗಳಲ್ಲಿ ಕಾಣುತ್ತಿದೆ. ಮಳೆಯ ನೀರಿನಿಂದಾಗಿ ಅನೇಕ ನಗರಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಇನ್ನೂ ಮುಂದುವರೆದಿದೆ. ಬೆಂಗಳೂರು ಇಲ್ಲಿ ನಿನ್ನೆ ರಾತ್ರಿಯೂ ನಗರದಲ್ಲಿ ಮಳೆ ನೀರು ತುಂಬಿಕೊಂಡಿದೆ. ಕಳೆದ 90 ವರ್ಷಗಳಲ್ಲಿ ನಗರ ಇಂತಹ ಮಳೆ ಕಂಡಿರಲಿಲ್ಲ ಎನ್ನಲಾಗುತ್ತಿದೆ.

ಹವಾಮಾನ ಇಲಾಖೆಯು ಮುಂದಿನ 3-4 ದಿನಗಳವರೆಗೆ ದೊಡ್ಡ ಮಳೆಯ ಸುದ್ದಿಯನ್ನು ನೀಡಿದ್ದು, ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ದಕ್ಷಿಣ ಪೆನಿನ್ಸುಲಾ ಮತ್ತು ದೇಶದ ಈಶಾನ್ಯ ಭಾಗಗಳಲ್ಲಿ ಭಾರೀ ಮಳೆಯಿಂದ ಸದ್ಯಕ್ಕೆ ಯಾವುದೇ ಮಳೆ ಇಳಿಕೆಯ ಲಕ್ಷಣಗಳಿಲ್ಲ, ಆದ್ದರಿಂದ ಹವಾಮಾನ ಇಲಾಖೆಯು ದಕ್ಷಿಣ ಪೆನಿನ್ಸುಲಾರ್ ಭಾರತದಲ್ಲಿ ಮುಂದಿನ 3 ದಿನಗಳ ಕಾಲ ಮಳೆಯ ಮುನ್ಸೂಚನೆ ನೀಡಿದೆ.

ಉಳಿದ ರಾಜ್ಯಗಳ ಮಳೆ ಪರಿಸ್ಥಿತಿ

ಬಿಹಾರದ 25 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರೀ ಮಳೆ ಎಚ್ಚರಿಕೆ ನೀಡಿದೆ. ಈ ವೇಳೆ ಗುಡುಗು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ವ್ಯಕ್ತವಾಗಿದ್ದು, ಜನರು ಎಚ್ಚರದಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಹವಾಮಾನ ಇಲಾಖೆ ಪ್ರಕಾರ ಮುಂದಿನ ಎರಡು ದಿನಗಳ ಕಾಲ ರಾಜ್ಯದಾದ್ಯಂತ ಇದೇ ವಾತಾವರಣ ಇರಲಿದೆ.

ಮತ್ತೊಂದೆಡೆ, ನಾವು ರಾಜಸ್ಥಾನದ ಹವಾಮಾನ ನೋಡುವುದಾದದರೆ ಮುಂದಿನ 4 ರಿಂದ 5 ದಿನಗಳವರೆಗೆ ಇಲ್ಲಿ ಮಳೆಯ ಲಕ್ಷಣವಿಲ್ಲ. ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿದೆ. ಆದರೆ, ಮುಂಗಾರು ಮತ್ತೆ ಚುರುಕಾಗುವ ಸಾಧ್ಯತೆಯೂ ಇದೆ.

ಮಳೆಯಿಂದ ನಲುಗುತ್ತಿರುವ ಬೆಂಗಳೂರಿನಲ್ಲಿ ಮುಂದಿನ 2-3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹಳದಿ ಅಲರ್ಟ್ ಘೋಷಿಸಲಾಗಿದೆ.

ಈ ರಾಜ್ಯಗಳಲ್ಲಿ ಭಾರೀ ಮಳೆ ಮತ್ತು ಮಿಂಚಿನ ಬಗ್ಗೆ ಎಚ್ಚರಿಕೆ ನೀಡಿದ IMD

ಮುಂದಿನ 2 ದಿನಗಳಲ್ಲಿ ಲಕ್ಷದ್ವೀಪ, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯು ಒಡಿಶಾದ 8 ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಜನರು ಎಚ್ಚರಿಕೆಯಿಂದ ಮತ್ತು ಜಾಗರೂಕರಾಗಿರಲು ಸೂಚಿಸಿದ್ದಾರೆ.

ಹವಾಮಾನ ಇಲಾಖೆ ಪ್ರಕಾರ ಮುಂದಿನ ಐದು ದಿನಗಳ ಕಾಲ ವಾಯುವ್ಯ ಭಾಗದಲ್ಲಿ ಕಡಿಮೆ ಮಳೆಯಾಗಲಿದೆ, ಆದರೆ ಸೆಪ್ಟೆಂಬರ್ 8 ರಿಂದ ಪೂರ್ವ ಕರಾವಳಿ ಮತ್ತು ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.