News

ಜುಲೈ 29 ರಿಂದ ಭಾರಿ ಮಳೆ ಸಾಧ್ಯತೆ-23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

29 July, 2020 7:31 AM IST By:

ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಕಳೆದ ಎರಡು ದಿನಗಳಿಂದ ಮುಂಗಾರು ಸ್ವಲ್ಪ ಕ್ಷೀಣಗೊಂಡಿತ್ತು. ರಾಜ್ಯದ ಮುಂದಿನ ಎರಡು ದಿನಗಳ  ದಿನಗಳ ಕಾಲ ಭಾರಿ ಮಳೆ (Heavy rain)ಯಾಗುವ ಸಾಧ್ಯತೆಯಿದೆ.

ಕರಾವಳಿ ಹಾಗೂ ಒಳನಾಡಿನಲ್ಲಿ ಜುಲೈ 29 ಮತ್ತು 30 ರಂದು ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ರಾಜ್ಯದ 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (yellow alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶಿವಮೊಗ್ಗ, ರಾಮನಗರ, ತುಮಕೂರ, ಚಿತ್ರದುರ್ಗ, ಹಾಸನ, ಕೋಲಾರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಬಳ್ಳಾರಿ, ಗದಗ, ಕಲಬುರಗಿ, ಬೀದರ್, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ 29 ರಂದು ಯೆಲ್ಲೋ ಅಲರ್ಟ್ (yellow alert)ಘೋಷಿಸಲಾದಗಿದೆ. ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 1 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿಯಲ್ಲಿ (coastal) ವೇಗವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು (fishers)ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.