ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ದ್ವಿತೀಯ ಪುತ್ರಿ ಗೀತಾಂಜಲಿ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಇಂದು ಬೆಂಗಳೂರಿನ ಶರ್ಟಾನ್ ಹೋಟೇಲ್ ನಲ್ಲಿ ನಡಿಯಿತು.
ರವಿಚಂದ್ರನ್ ಅವರ ಕ್ರಿಯೇಟಿವ್ ಆಲೋಚನೆಗಳಿಗೆ ತಕ್ಕಂತೆ ಮಗಳ ನಿಶ್ಚಿತಾರ್ಥದ ವೇದಿಕೆ ನಿರ್ಮಿಸಲಾಗಿತ್ತು. ಏಳು ಬಿಳಿ ಅಶ್ವದ ಕಾಸ್ಸೆಫ್ಟ್ ನಲ್ಲಿ ವೇದಿಕೆಯನ್ನು ಅಲಂಕರಿಸಲಾಗಿತ್ತು. ತಿಳಿ ಹಸಿರು ಮಿಶ್ರಿತ ಬಣ್ಣದ ಸೀರೆಯಲ್ಲಿ ರವಿಚಂದ್ರನ್ ಪುತ್ರಿ ಗೀತಾಂಜಲಿ ಮಿಂಚಿದ್ರೆ, ಕಡು ನೀಲಿ ಬಣ್ಣದ ಸೂಟ್ ನಲ್ಲಿ ರವಿ ಭಾವಿ ಅಳಿಯ, ಉದ್ಯಮಿ ಅಜಯ್ ಕಂಗೊಳಿಸುತ್ತಿದ್ದರು.
ಖ್ಯಾತ ನಟನ ಮಗಳ ನಿಶ್ಚಿತಾರ್ಥಕ್ಕೆ ನಟಿ ಖುಷ್ಬು, ಹಂಸಲೇಖ, ಪುನೀತ್ ರಾಜ್ಕುಮಾರ್, ಜಗ್ಗೇಶ್, ದೊಡ್ಡಣ್ಣ , ಶ್ರೀಮುರುಳಿ, ಅಕುಲ್ ಬಾಲಾಜಿ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಭಾಗಿಯಾಗಿದ್ದರು.
ಕ್ರೇಜಿಸ್ಟಾರ್ ಮಗಳ ನಿಶ್ಚಿತಾರ್ಥದಲ್ಲಿ ಕಲಾವಿದರ ದಂಡು
ನಿಮ್ಮ ಬೆಂಬಲ ಸದಾ ಇರಲಿ
ನಮ್ಮ ಪತ್ರಿಕೆಯ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಭಾರತದ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಅಲ್ಪ ಕೊಡುಗೆಯೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ಕೊಡುಗೆ ನೀಡಿ (Contribute now)
Share your comments