ಕುಣಿಗಲ್ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಾಸಕ ಸಿ.ಟಿ.ರವಿ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆಗೆ ಸಂಬಂಧ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಶಾಸಕ ಸಿಟಿ ರವಿ ಅವರು ಮದ್ಯ ಸೇವಿಸಿ ಕಾರು ಚಲಾಯಿಸುತ್ತಿದ್ದರು ಎಂಬ ಮಾತಗಳು ಕೇಳಿಬರುತ್ತಿದೆ.
ಈ ಹಿನ್ನೆಲೆ ಘಟನೆ ಬಗ್ಗೆ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ರವಿ ಕುಡಿದಿದ್ದ, ಅವನೇ ಕಾರು ಓಡಿಸ್ತಿದ್ದ ಎನ್ನುವ ಆಪಾದನೆಯಿಂದ ಬಹಳ ನೋವಾಗಿದೆ. ಘಟನೆ ಬಗ್ಗೆ ನಿಷ್ಪಕ್ಷವಾದ ತನಿಖೆ ಆಗಲಿ. ತಪ್ಪು ಯಾರದ್ದು ಎಂಬುದು ಗೊತ್ತಾಗಲಿ ಎಂದಿದ್ದಾರೆ.
ಈಗಾಗಲೇ ನಾನು ಮೃತರ ಸಂಬಂಧಿಕರ ಜೊತೆ ಮಾತನಾಡಿದ್ದೇನೆ, ವೈಯಕ್ತಿಕವಾಗಿ ಪರಿಹಾರ ನೀಡಲು ಸಿದ್ದನಿದ್ದೇನೆ. ಈ ರೀತಿಯ ಆಪಾದನೆ ನನ್ನ ಮೇಲೆ ಬಂದಿರಲಿಲ್ಲ. ನಾನು ದೊಡ್ಡ ರಾಜಕೀಯ ಹಿನ್ನೆಲೆಯಿಂದ ಬಂದವನಲ್ಲ, ಮಧ್ಯಮ ವರ್ಗದಿಂದ ಬಂದವನು ಎಂದು ಹೇಳಿದರು.
'ರವಿನೇ ಕುಡಿದು ಕಾರು ಓಡಿಸ್ತಿದ್ದ ಎಂಬ ಹೇಳಿಕೆಯಿಂದ ಬಹಳ ನೋವಾಗಿದೆ'..!
ನಿಮ್ಮ ಬೆಂಬಲ ಸದಾ ಇರಲಿ
ನಮ್ಮ ಪತ್ರಿಕೆಯ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಭಾರತದ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಅಲ್ಪ ಕೊಡುಗೆಯೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ಕೊಡುಗೆ ನೀಡಿ (Contribute now)
Share your comments